ಬ್ರೇಕಿಂಗ್ ನ್ಯೂಸ್
23-08-25 09:56 pm Bangalore Correspondent ಕರ್ನಾಟಕ
ಬೆಂಗಳೂರು, ಆ 23: ವಿಧಾನ ಪರಿಷತ್ತು ಅಕ್ರಮ ಗಣಿಗಾರಿಕೆಯಿಂದ ಊಹೆಗೂ ನಿಲುಕದಷ್ಟು ಪ್ರಮಾಣದಲ್ಲಿ ವಿದೇಶಗಳಿಗೆ ಅದಿರು ರವಾನೆ ಮಾಡಿದ್ದರಿಂದ ರಾಜ್ಯಕ್ಕೆ ₹80 ಸಾವಿರ ಕೋಟಿ ನಷ್ಟವಾಗಿದೆ. ಈ ಲೂಟಿ ಹಣ ವಸೂಲಿ ಮಾಡಲು ವಸೂಲಾತಿ ಆಯುಕ್ತರನ್ನು ನೇಮಿಸುತ್ತಿದ್ದೇವೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ.ಪಾಟೀಲ್ ಹೇಳಿದರು.
ಗಣಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ಪರ ವಿಧಾನಸಭೆಯಲ್ಲಿ ಅಂಗೀಕೃತ ರೂಪದಲ್ಲಿರುವ ಕರ್ನಾಟಕ ಅಕ್ರಮ ಗಣಿಗಾರಿಕೆ ಮತ್ತು ಅಪರಾಧದ ಉತ್ಪತ್ತಿಗಳಿಂದಾದ ಸ್ವತ್ತನ್ನು ವಶಪಡಿಸಿಕೊಳ್ಳುವುದಕ್ಕಾಗಿ ಮತ್ತು ಜಪ್ತಿಗಾಗಿ ವಸೂಲಾತಿ ಆಯುಕ್ತರ ನೇಮಕಾತಿ ವಿಧೇಯಕ 2025 ಅನ್ನು ಮಂಡಿಸಿ ಮಾತನಾಡಿದರು.
2006ರಿಂದ 2012ರವರೆಗೆ ನಮ್ಮಲ್ಲಿರುವ ಮಾಹಿತಿ ಪ್ರಕಾರ 20 ಕೋಟಿ ಮೆಟ್ರಿಕ್ ಟನ್ ಕಬ್ಬಿಣದ ಅದಿರು ಕಾನೂನು ಬಾಹಿರವಾಗಿ ಸಾಗಣೆಯಾಗಿದೆ. ಒಂದು ಟನ್ಗೆ ₹4003 ರಂತೆ ₹80 ಸಾವಿರ ಕೋಟಿಯಷ್ಟು ರಾಜ್ಯದ ಬೊಕ್ಕಸಕ್ಕೆ ನಷ್ಟವಾಗಿದೆ. ಈ ಮೊತ್ತವನ್ನು ಜಪ್ತಿ ಅಥವಾ ವಸೂಲಿ ಮಾಡುವುದು ಜವಾಬ್ದಾರಿ ಯುತ ಸರ್ಕಾರದ ಕರ್ತವ್ಯ. ಅದಕ್ಕಾಗಿಯೇ ವಸೂಲಿ ಆಯುಕ್ತರ ನೇಮಿಸಲು ವಿಧೇಯಕಕ್ಕೆ ತಿದ್ದುಪಡಿ ತರಲಾಗಿದೆ ಎಂದರು.
ರಾಜ್ಯದಲ್ಲಿ ಲೆಕ್ಕವಿಲ್ಲದಷ್ಟು ಸಂಖ್ಯೆಯ ಗುತ್ತಿಗೆದಾರರು, ಸಾಗಣೆದಾರರು, ರಫ್ತುದಾರರು, ದಾಸ್ತಾನುದಾರರು, ಖರೀದಿದಾರರು ಮತ್ತು ಮಧ್ಯವರ್ತಿಗಳನ್ನೊಳಗೊಂಡ ಅಕ್ರಮ ಗಣಿಗಾರಿಕೆ ಚಟುವಟಿಕೆ ನಡೆದಿದೆ. ಈ ಸಂಘಟಿತ ಅಪರಾಧ, ವ್ಯವಸ್ಥಿತ ಒಳಸಂಚು ಮತ್ತು ಅಪರಾಧದ ಉತ್ಪತ್ತಿಗಳಿಂದಾದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲು, ಜಪ್ತಿ ಮಾಡಲು, ಮುಟ್ಟುಗೋಲು ಹಾಕಿಕೊಳ್ಳುವ ಕೆಲಸವನ್ನು ವಸೂಲಾತಿ ಆಯುಕ್ತರು ಮಾಡಲಿದ್ದಾರೆ. ರಾಜ್ಯದಲ್ಲಿ ಭಾರಿ ಅಕ್ರಮ ಮತ್ತು ಮಧ್ಯಮ ಪ್ರಮಾಣದಲ್ಲಿ ಅಕ್ರಮ ಮಾಡಿದ 111 ಕಂಪನಿಗಳು 'ಬಿ' ಮತ್ತು 'ಸಿ' ಕೆಟಗರಿಯಲ್ಲಿದ್ದು, ಅವುಗಳ ಬಗ್ಗೆ ಎಸ್ಐಟಿ, ಸಿಬಿಐ ತನಿಖೆ ನಡೆಯುತ್ತಿದೆ ಎಂದು ಹೇಳಿದರು.
Karnataka has suffered an estimated loss of ₹80,000 crore due to large-scale illegal mining and unauthorized export of iron ore between 2006 and 2012, said Law and Parliamentary Affairs Minister H.K. Patil. To recover the lost public wealth, the state government is appointing a Recovery Commissioner, he added.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm