ಬ್ರೇಕಿಂಗ್ ನ್ಯೂಸ್
24-08-25 05:30 pm Bangalore Correspondent ಕರ್ನಾಟಕ
ಬೆಂಗಳೂರು, ಆ 24 : ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಶೇ.50ರಷ್ಟು ರಿಯಾಯಿತಿ ದಂಡ ಪಾವತಿಸಲು ನಿಗದಿಪಡಿಸಲಾಗಿದ್ದ ಅವಧಿಯ ಮೊದಲನೆಯ ದಿನವಾದ ಶನಿವಾರ ಎಲ್ಲ ವಿಧಾನಗಳ ಮೂಲಕ 1,48,747 ಪ್ರಕರಣಗಳು ಇತ್ಯರ್ಥಗೊಂಡು ಒಟ್ಟು 4,18,20,500 ರೂ. ದಂಡ ಪಾವತಿ ಆಗಿದೆ ಎಂದು ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್ನಲ್ಲಿ ದಾಖಲಾದ ಪ್ರಕರಣಗಳಿಗೆ ದಂಡ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಪ್ರಕರಣಗಳಲ್ಲಿ ದಂಡ ಪಾವತಿಸಲು ರಿಯಾಯಿತಿ ನೀಡಿ ಸರ್ಕಾರ ಆದೇಶಿಸಿದೆ. ಈ ಆದೇಶ ಆ.23ರಿಂದ ಜಾರಿಗೆ ಬಂದಿದೆ. ಆ.23ರಿಂದ ಸೆ.12ರವರೆಗೆ ರಿಯಾಯಿತಿ ಜಾರಿಯಲ್ಲಿ ಇರುತ್ತದೆ ಆದರೆ, ಈ ರಿಯಾಯಿತಿ 2023ರ ಫೆಬ್ರವರಿ 11ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರವೇ ಅನ್ವಯ.
ವಾಹನದ ಮಾಲೀಕರಿಗೆ ಮತ್ತೊಂದು ಅವಕಾಶ: ಕಳೆದ ಎರಡು ವರ್ಷಗಳ ಹಿಂದೆ 2023ರಲ್ಲಿ ರಾಜ್ಯ ಸರ್ಕಾರವು ಸಂಚಾರ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ಬಾಕಿ ಉಳಿಸಿಕೊಂಡ ದಂಡ ಪಾವತಿಸಲು ಶೇ.50ರಷ್ಟು ರಿಯಾಯಿತಿ ಘೋಷಣೆ ಮಾಡಿತ್ತು. ಆಗ ಅಂದಾಜು 250 ಕೋಟಿ ರೂ.ಗೂ ಹೆಚ್ಚಿನ ಪ್ರಮಾಣದ ದಂಡವನ್ನು ವಸೂಲಿ ಮಾಡಲಾಗಿತ್ತು. 2023ರ ಫೆಬ್ರವರಿ 23ಕ್ಕಿಂತ ಮುಂಚಿನ ಟ್ರಾಫಿಕ್ ಉಲ್ಲಂಘನೆ ಪ್ರಕರಣಗಳಲ್ಲಿ ದಂಡ ಪಾವತಿ ಮಾಡದೇ ಬಾಕಿ ಉಳಿಸಿಕೊಂಡ ವಾಹನಗಳ ಮಾಲೀಕರಿಗೆ ಮತ್ತೊಂದು ಅವಕಾಶವೆನ್ನುವಂತೆ ಶೇ.50ರಷ್ಟು ರಿಯಾಯಿತಿ ನೀಡಲಾಗಿದೆ.
ಎಲ್ಲ ವಾಹನ ಮಾಲೀಕರು ಮತ್ತು ಚಾಲಕರು ಈ ಸೀಮಿತ ಅವಧಿಯ ಅವಕಾಶವನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು. ಹಾಗೂ ತಮ್ಮ ವಾಹನಗಳ ಮೇಲಿರುವ ಸಂಚಾರ ಉಲ್ಲಂಘನೆಗಳ ಬಾಕಿ ಇರುವ ದಂಡಗಳನ್ನು ಪಾವತಿಸಿ, ಮುಂದಿನ ದಿನಗಳಲ್ಲಿ ಸಂಚಾರ ನಿಯಮಗಳನ್ನು ಪಾಲಿಸುವಂತೆ ಸಿಎಂ ಕೋರಿದ್ದಾರೆ.
On the first day of the government’s 50% discount offer on pending traffic fines, a staggering ₹4.18 crore was collected from 1,48,747 cases, the traffic police department reported on Saturday.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm