ಬ್ರೇಕಿಂಗ್ ನ್ಯೂಸ್
24-08-25 05:30 pm Bangalore Correspondent ಕರ್ನಾಟಕ
ಬೆಂಗಳೂರು, ಆ 24 : ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಶೇ.50ರಷ್ಟು ರಿಯಾಯಿತಿ ದಂಡ ಪಾವತಿಸಲು ನಿಗದಿಪಡಿಸಲಾಗಿದ್ದ ಅವಧಿಯ ಮೊದಲನೆಯ ದಿನವಾದ ಶನಿವಾರ ಎಲ್ಲ ವಿಧಾನಗಳ ಮೂಲಕ 1,48,747 ಪ್ರಕರಣಗಳು ಇತ್ಯರ್ಥಗೊಂಡು ಒಟ್ಟು 4,18,20,500 ರೂ. ದಂಡ ಪಾವತಿ ಆಗಿದೆ ಎಂದು ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್ನಲ್ಲಿ ದಾಖಲಾದ ಪ್ರಕರಣಗಳಿಗೆ ದಂಡ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಪ್ರಕರಣಗಳಲ್ಲಿ ದಂಡ ಪಾವತಿಸಲು ರಿಯಾಯಿತಿ ನೀಡಿ ಸರ್ಕಾರ ಆದೇಶಿಸಿದೆ. ಈ ಆದೇಶ ಆ.23ರಿಂದ ಜಾರಿಗೆ ಬಂದಿದೆ. ಆ.23ರಿಂದ ಸೆ.12ರವರೆಗೆ ರಿಯಾಯಿತಿ ಜಾರಿಯಲ್ಲಿ ಇರುತ್ತದೆ ಆದರೆ, ಈ ರಿಯಾಯಿತಿ 2023ರ ಫೆಬ್ರವರಿ 11ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರವೇ ಅನ್ವಯ.
ವಾಹನದ ಮಾಲೀಕರಿಗೆ ಮತ್ತೊಂದು ಅವಕಾಶ: ಕಳೆದ ಎರಡು ವರ್ಷಗಳ ಹಿಂದೆ 2023ರಲ್ಲಿ ರಾಜ್ಯ ಸರ್ಕಾರವು ಸಂಚಾರ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ಬಾಕಿ ಉಳಿಸಿಕೊಂಡ ದಂಡ ಪಾವತಿಸಲು ಶೇ.50ರಷ್ಟು ರಿಯಾಯಿತಿ ಘೋಷಣೆ ಮಾಡಿತ್ತು. ಆಗ ಅಂದಾಜು 250 ಕೋಟಿ ರೂ.ಗೂ ಹೆಚ್ಚಿನ ಪ್ರಮಾಣದ ದಂಡವನ್ನು ವಸೂಲಿ ಮಾಡಲಾಗಿತ್ತು. 2023ರ ಫೆಬ್ರವರಿ 23ಕ್ಕಿಂತ ಮುಂಚಿನ ಟ್ರಾಫಿಕ್ ಉಲ್ಲಂಘನೆ ಪ್ರಕರಣಗಳಲ್ಲಿ ದಂಡ ಪಾವತಿ ಮಾಡದೇ ಬಾಕಿ ಉಳಿಸಿಕೊಂಡ ವಾಹನಗಳ ಮಾಲೀಕರಿಗೆ ಮತ್ತೊಂದು ಅವಕಾಶವೆನ್ನುವಂತೆ ಶೇ.50ರಷ್ಟು ರಿಯಾಯಿತಿ ನೀಡಲಾಗಿದೆ.
ಎಲ್ಲ ವಾಹನ ಮಾಲೀಕರು ಮತ್ತು ಚಾಲಕರು ಈ ಸೀಮಿತ ಅವಧಿಯ ಅವಕಾಶವನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು. ಹಾಗೂ ತಮ್ಮ ವಾಹನಗಳ ಮೇಲಿರುವ ಸಂಚಾರ ಉಲ್ಲಂಘನೆಗಳ ಬಾಕಿ ಇರುವ ದಂಡಗಳನ್ನು ಪಾವತಿಸಿ, ಮುಂದಿನ ದಿನಗಳಲ್ಲಿ ಸಂಚಾರ ನಿಯಮಗಳನ್ನು ಪಾಲಿಸುವಂತೆ ಸಿಎಂ ಕೋರಿದ್ದಾರೆ.
On the first day of the government’s 50% discount offer on pending traffic fines, a staggering ₹4.18 crore was collected from 1,48,747 cases, the traffic police department reported on Saturday.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm