ಬ್ರೇಕಿಂಗ್ ನ್ಯೂಸ್
24-08-25 05:30 pm Bangalore Correspondent ಕರ್ನಾಟಕ
ಬೆಂಗಳೂರು, ಆ 24 : ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಶೇ.50ರಷ್ಟು ರಿಯಾಯಿತಿ ದಂಡ ಪಾವತಿಸಲು ನಿಗದಿಪಡಿಸಲಾಗಿದ್ದ ಅವಧಿಯ ಮೊದಲನೆಯ ದಿನವಾದ ಶನಿವಾರ ಎಲ್ಲ ವಿಧಾನಗಳ ಮೂಲಕ 1,48,747 ಪ್ರಕರಣಗಳು ಇತ್ಯರ್ಥಗೊಂಡು ಒಟ್ಟು 4,18,20,500 ರೂ. ದಂಡ ಪಾವತಿ ಆಗಿದೆ ಎಂದು ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್ನಲ್ಲಿ ದಾಖಲಾದ ಪ್ರಕರಣಗಳಿಗೆ ದಂಡ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಪ್ರಕರಣಗಳಲ್ಲಿ ದಂಡ ಪಾವತಿಸಲು ರಿಯಾಯಿತಿ ನೀಡಿ ಸರ್ಕಾರ ಆದೇಶಿಸಿದೆ. ಈ ಆದೇಶ ಆ.23ರಿಂದ ಜಾರಿಗೆ ಬಂದಿದೆ. ಆ.23ರಿಂದ ಸೆ.12ರವರೆಗೆ ರಿಯಾಯಿತಿ ಜಾರಿಯಲ್ಲಿ ಇರುತ್ತದೆ ಆದರೆ, ಈ ರಿಯಾಯಿತಿ 2023ರ ಫೆಬ್ರವರಿ 11ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರವೇ ಅನ್ವಯ.
ವಾಹನದ ಮಾಲೀಕರಿಗೆ ಮತ್ತೊಂದು ಅವಕಾಶ: ಕಳೆದ ಎರಡು ವರ್ಷಗಳ ಹಿಂದೆ 2023ರಲ್ಲಿ ರಾಜ್ಯ ಸರ್ಕಾರವು ಸಂಚಾರ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ಬಾಕಿ ಉಳಿಸಿಕೊಂಡ ದಂಡ ಪಾವತಿಸಲು ಶೇ.50ರಷ್ಟು ರಿಯಾಯಿತಿ ಘೋಷಣೆ ಮಾಡಿತ್ತು. ಆಗ ಅಂದಾಜು 250 ಕೋಟಿ ರೂ.ಗೂ ಹೆಚ್ಚಿನ ಪ್ರಮಾಣದ ದಂಡವನ್ನು ವಸೂಲಿ ಮಾಡಲಾಗಿತ್ತು. 2023ರ ಫೆಬ್ರವರಿ 23ಕ್ಕಿಂತ ಮುಂಚಿನ ಟ್ರಾಫಿಕ್ ಉಲ್ಲಂಘನೆ ಪ್ರಕರಣಗಳಲ್ಲಿ ದಂಡ ಪಾವತಿ ಮಾಡದೇ ಬಾಕಿ ಉಳಿಸಿಕೊಂಡ ವಾಹನಗಳ ಮಾಲೀಕರಿಗೆ ಮತ್ತೊಂದು ಅವಕಾಶವೆನ್ನುವಂತೆ ಶೇ.50ರಷ್ಟು ರಿಯಾಯಿತಿ ನೀಡಲಾಗಿದೆ.
ಎಲ್ಲ ವಾಹನ ಮಾಲೀಕರು ಮತ್ತು ಚಾಲಕರು ಈ ಸೀಮಿತ ಅವಧಿಯ ಅವಕಾಶವನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು. ಹಾಗೂ ತಮ್ಮ ವಾಹನಗಳ ಮೇಲಿರುವ ಸಂಚಾರ ಉಲ್ಲಂಘನೆಗಳ ಬಾಕಿ ಇರುವ ದಂಡಗಳನ್ನು ಪಾವತಿಸಿ, ಮುಂದಿನ ದಿನಗಳಲ್ಲಿ ಸಂಚಾರ ನಿಯಮಗಳನ್ನು ಪಾಲಿಸುವಂತೆ ಸಿಎಂ ಕೋರಿದ್ದಾರೆ.
On the first day of the government’s 50% discount offer on pending traffic fines, a staggering ₹4.18 crore was collected from 1,48,747 cases, the traffic police department reported on Saturday.
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am