ಬ್ರೇಕಿಂಗ್ ನ್ಯೂಸ್
25-08-25 06:07 pm HK News Desk ಕರ್ನಾಟಕ
ತುಮಕೂರು, ಆ.25 : ಅವರು ಆರ್ಎಸ್ಎಸ್ ಗೀತೆ ಹಾಡಬಹುದು. ಖಾಸಗಿ ಕಾರ್ಯಕ್ರಮದಲ್ಲಿ ಅಮಿತ್ ಶಾ ಜತೆಗೆ ವೇದಿಕೆ ಹಂಚಿಕೊಳ್ಳಬಹುದು, ಏನು ಬೇಕಾದರೂ ಮಾಡಬಹುದು. ನಾವು ಏನೂ ಮಾತಾಡುವಂತಿಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಕೆಎನ್ ರಾಜಣ್ಣ , ಡಿ.ಕೆ.ಶಿವಕುಮಾರ್ ಅಧಿವೇಶನದಲ್ಲಿ ಆರ್ಎಸ್ಎಸ್ ಗೀತೆ ಹಾಡಿದ ಬಗ್ಗೆ ಪ್ರತಿಕ್ರಿಯಿಸಿದರು. ಪ್ರಯಾಗ್ ರಾಜ್ನ ಗಂಗೆಯಲ್ಲಿ ಸ್ನಾನ ಮಾಡಿದ ಮಾತ್ರಕ್ಕೆ ಬಡತನ ನಿವಾರಣೆಯಾಗುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು. ಇದರ ನಂತರವೂ ಡಿ.ಕೆ.ಶಿವಕುಮಾರ್ ಹೋಗಿ ಪುಣ್ಯ ಸ್ನಾನ ಮಾಡಿದರು.
ಆರೆಸ್ಸೆಸ್ ಕಾಂಗ್ರೆಸ್ ಸಿದ್ದಾಂತಕ್ಕೆ ತದ್ವಿರುದ್ದ ಎಂದು ಗೊತ್ತಿದ್ದರೂ ಸದನದಲ್ಲಿ ಆರೆಸ್ಸೆಸ್ ಗೀತೆ ಹಾಡುತ್ತಾರೆ. ಸದನಕ್ಕೆ ಸಂಬಂಧವೇ ಇಲ್ಲದ ವ್ಯಕ್ತಿ ಶಾಸಕರ ಸಭೆ ನಡೆಸಬಹುದು, ನಾವು ನಡೆಸಿದರ ಅಪರಾಧ. ಈ ಎಲ್ಲಾ ವೈರುಧ್ಯಗಳಿಗೆ ಸೂಕ್ತ ಸಮಯದಲ್ಲಿ ಉತ್ತರ ನೀಡಲಿದ್ದೇನೆ ಎಂದು ಅಸಮಾಧಾನ ಹೊರಹಾಕಿದರು.
ಕೋಮುವಾದಿಗಳಿಗೆ ಬೆಂಬಲವಾಗಿರುವ ಮುಖೇಶ್ ಅಂಬಾನಿ ಮಗನ ಮದುವೆಗೆ ಹೋಗುವುದಿಲ್ಲ ಎಂದು ಸ್ವತಃ ರಾಹುಲ್ ಗಾಂಧಿ ಅವರು ಹೇಳಿದ ನಂತರವೂ ಅಂಬಾನಿ ಮಗನ ಮದುವೆ ಹೋಗುತ್ತಾರೆ, ಅಂಬಾನಿ ಮಗನ ಮದುವೆಯ ಆಮಂತ್ರಣವನ್ನು ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ಸ್ವೀಕರಿಸುವುದಿಲ್ಲ. ಅಂತಹ ಮದುವೆಗೆ ಇವರು (ಡಿಕೆಶಿ) ಕುಟುಂಬ ಸಮೇತ ಹೋಗುತ್ತಾರೆ ಎಂದು ಕಿಡಿಕಾರಿದರು. ನಾವು ಯಾವುದೇ ಶಾಸಕರ, ಮಂತ್ರಿಗಳ ಸಭೆ ಕರೆಯುವ ಹಾಗಿಲ್ಲ. ಬೇರೆಯವರು ಕರೆಯಬಹುದು, ಮಾತಾಡಬಹುದು ಎಂದು ಡಿಕೆಶಿ ಹೆಸರೆತ್ತದೆ ಟೀಕಿಸಿದರು.
Senior Congress leader and former minister K.N. Rajanna launched a sharp attack on Deputy Chief Minister D.K. Shivakumar, accusing him of double standards within the party.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm