ಬ್ರೇಕಿಂಗ್ ನ್ಯೂಸ್
25-12-20 03:37 pm Headline Karnataka News Network ಕರ್ನಾಟಕ
ಮೈಸೂರು, ಡಿ.25 : ಕೊರೊನಾ ಕಾರಣಕ್ಕೆ ಕಳೆದ ಹತ್ತು ತಿಂಗಳಿನಿಂದಲೂ ಜನರು ನಿರ್ಬಂಧದ ವ್ಯವಸ್ಥೆಯಲ್ಲೇ ಇದ್ದಾರೆ. ಜನರನ್ನ ಇನ್ನೆಷ್ಟು ದಿನ ಮನೆಯಲ್ಲಿ ಕೂರಿಸ್ತೀರಾ..? ಮಾಸ್ಕ್ ಹೆಸರಿನಲ್ಲಿ ಜನರಿಗೆ ಅನಗತ್ಯ ತೊಂದರೆ ಕೊಡುವುದನ್ನು ತಪ್ಪಿಸಿ ಎಂದು ಸಂಸದ ಪ್ರತಾಪಸಿಂಹ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಹೆಸರಿನಲ್ಲಿ ಜನರು ಮನೆಯಲ್ಲಿ ಬಂಧಿಯಾಗಿದ್ದಾರೆ. ಇನ್ನು ಮುಂದಾದರೂ ಜನರನ್ನು ಓಡಾಡಲು ಬಿಡಿ. ಮಾಸ್ಕ್ ಹೆಸರಿನಲ್ಲಿ ಜನರಿಗೆ ಅನಗತ್ಯ ತೊಂದರೆ ಕೊಡಬೇಡಿ. ನಾನು ದೆಹಲಿ ಸೇರಿದಂತೆ ಹಲವು ಕಡೆಗಳಿಗೆ ಹೋಗಿ ಬಂದಿದ್ದೇನೆ. ಎಲ್ಲಾ ಕಡೆ ಕೊರೋನಾ ರೂಪಾಂತರದ ಬಗ್ಗೆ ಚರ್ಚೆ ಇದೆ. ಆದರೆ ಜನರನ್ನು ಹೆಚ್ಚು ದಿನ ನಿರ್ಬಂಧ ಮಾಡಲು ಸಾಧ್ಯವಿಲ್ಲ. ಸರಿಯೂ ಅಲ್ಲ ಎನ್ನುವ ಮೂಲಕ ರಾಜ್ಯ ಸರಕಾರದ ನೈಟ್ ಕರ್ಫ್ಯೂ ಬಗ್ಗೆ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು.
ಕೊರೊನಾದಿಂದಾಗಿ ಹಲವು ಉದ್ಯಮ ಸಂಸ್ಥೆಗಳು ತೀವ್ರ ಪರಿಣಾಮ ಎದುರಿಸಿವೆ. ಏನೇ ನಿರ್ಬಂಧ ಇದ್ದರೂ ಉದ್ಯಮ ಹಾಗೂ ಅವರ ದೈನಂದಿನ ಚಟುವಟಿಕೆಗಳಿಗೆ ಅವಕಾಶ ಕೊಡಬೇಕು. ಮಾಸ್ಕ್ ಕಡ್ಡಾಯ ಮಾಡಿ. ಆದರೇ ಮಾಸ್ಕ್ ಹೆಸರಿನಲ್ಲಿ ಕಾರು, ಬೈಕ್ ನಿಲ್ಲಿಸಿ ಜನರಿಗೆ ತೊಂದರೆ ಕೊಡಬೇಡಿ. ಸದ್ಯದಲ್ಲೇ ಕೊರೊನಾ ಲಸಿಕೆ ಸಹ ಬರುತ್ತಿದೆ ಎಂದು ತಿಳಿಸಿದರು.

ನೀವು ತಿಂತೀರಿ ಅಂತ ಕುರುಬ ಸಮಾಜವೇ ಬೀಫ್ ತಿನ್ನುತ್ತಾರೆಯೇ ?
ಕೊಡಗಿನವರು ಗೋ ಮಾಂಸ ಸೇವಿಸುತ್ತಾರೆಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ನೀವು ಗೋಮಾಂಸ ತಿನ್ನುತ್ತೀರಿ ಎಂದು ಇಡೀ ಕುರುಬ ಸಮಾಜದವರು ಬೀಫ್ ತಿನ್ನುತ್ತಾರೆ ಎನ್ನಲು ಆಗುತ್ತಾ ? ಸಿದ್ದರಾಮಯ್ಯ ಅವರು ವಿವೇಚನೆ ಇಲ್ಲದೆ ಯಾಕೆ ಹೀಗೆ ಮಾತನಾಡುತ್ತಿದ್ದಾರೆ ಎನ್ನುವುದೇ ನನಗೆ ಅರ್ಥವಾಗುತ್ತಿಲ್ಲ. ಆತ್ಮದ್ರೋಹದ ಮಾತುಗಳನ್ನು ಕಾಂಗ್ರೆಸ್ನವರು ಮಾತ್ರ ಆಡೋಕೆ ಸಾಧ್ಯ. ಕೊಡವರ ಬಗ್ಗೆ ಹಗುರವಾಗಿ ಮಾತನಾಡಬೇಡಿ. ಅವರು ಗೋವನ್ನು ಎರಡನೇ ತಾಯಿಯಾಗಿ ನೋಡುತ್ತಾರೆ. ಕೋಟ್ಯಂತರ ಜನರ ಭಾವನೆಗೆ ಧಕ್ಕೆ ತರುವ, ಕೊಡವರಿಗೆ ನೋವಾಗುವಂತಹ ಮಾತುಗಳನ್ನಾಡಬೇಡಿ ಎಂದು ತಿಳಿಸಿದರು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm