ಬ್ರೇಕಿಂಗ್ ನ್ಯೂಸ್
25-12-20 03:37 pm Headline Karnataka News Network ಕರ್ನಾಟಕ
ಮೈಸೂರು, ಡಿ.25 : ಕೊರೊನಾ ಕಾರಣಕ್ಕೆ ಕಳೆದ ಹತ್ತು ತಿಂಗಳಿನಿಂದಲೂ ಜನರು ನಿರ್ಬಂಧದ ವ್ಯವಸ್ಥೆಯಲ್ಲೇ ಇದ್ದಾರೆ. ಜನರನ್ನ ಇನ್ನೆಷ್ಟು ದಿನ ಮನೆಯಲ್ಲಿ ಕೂರಿಸ್ತೀರಾ..? ಮಾಸ್ಕ್ ಹೆಸರಿನಲ್ಲಿ ಜನರಿಗೆ ಅನಗತ್ಯ ತೊಂದರೆ ಕೊಡುವುದನ್ನು ತಪ್ಪಿಸಿ ಎಂದು ಸಂಸದ ಪ್ರತಾಪಸಿಂಹ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಹೆಸರಿನಲ್ಲಿ ಜನರು ಮನೆಯಲ್ಲಿ ಬಂಧಿಯಾಗಿದ್ದಾರೆ. ಇನ್ನು ಮುಂದಾದರೂ ಜನರನ್ನು ಓಡಾಡಲು ಬಿಡಿ. ಮಾಸ್ಕ್ ಹೆಸರಿನಲ್ಲಿ ಜನರಿಗೆ ಅನಗತ್ಯ ತೊಂದರೆ ಕೊಡಬೇಡಿ. ನಾನು ದೆಹಲಿ ಸೇರಿದಂತೆ ಹಲವು ಕಡೆಗಳಿಗೆ ಹೋಗಿ ಬಂದಿದ್ದೇನೆ. ಎಲ್ಲಾ ಕಡೆ ಕೊರೋನಾ ರೂಪಾಂತರದ ಬಗ್ಗೆ ಚರ್ಚೆ ಇದೆ. ಆದರೆ ಜನರನ್ನು ಹೆಚ್ಚು ದಿನ ನಿರ್ಬಂಧ ಮಾಡಲು ಸಾಧ್ಯವಿಲ್ಲ. ಸರಿಯೂ ಅಲ್ಲ ಎನ್ನುವ ಮೂಲಕ ರಾಜ್ಯ ಸರಕಾರದ ನೈಟ್ ಕರ್ಫ್ಯೂ ಬಗ್ಗೆ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು.
ಕೊರೊನಾದಿಂದಾಗಿ ಹಲವು ಉದ್ಯಮ ಸಂಸ್ಥೆಗಳು ತೀವ್ರ ಪರಿಣಾಮ ಎದುರಿಸಿವೆ. ಏನೇ ನಿರ್ಬಂಧ ಇದ್ದರೂ ಉದ್ಯಮ ಹಾಗೂ ಅವರ ದೈನಂದಿನ ಚಟುವಟಿಕೆಗಳಿಗೆ ಅವಕಾಶ ಕೊಡಬೇಕು. ಮಾಸ್ಕ್ ಕಡ್ಡಾಯ ಮಾಡಿ. ಆದರೇ ಮಾಸ್ಕ್ ಹೆಸರಿನಲ್ಲಿ ಕಾರು, ಬೈಕ್ ನಿಲ್ಲಿಸಿ ಜನರಿಗೆ ತೊಂದರೆ ಕೊಡಬೇಡಿ. ಸದ್ಯದಲ್ಲೇ ಕೊರೊನಾ ಲಸಿಕೆ ಸಹ ಬರುತ್ತಿದೆ ಎಂದು ತಿಳಿಸಿದರು.

ನೀವು ತಿಂತೀರಿ ಅಂತ ಕುರುಬ ಸಮಾಜವೇ ಬೀಫ್ ತಿನ್ನುತ್ತಾರೆಯೇ ?
ಕೊಡಗಿನವರು ಗೋ ಮಾಂಸ ಸೇವಿಸುತ್ತಾರೆಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ನೀವು ಗೋಮಾಂಸ ತಿನ್ನುತ್ತೀರಿ ಎಂದು ಇಡೀ ಕುರುಬ ಸಮಾಜದವರು ಬೀಫ್ ತಿನ್ನುತ್ತಾರೆ ಎನ್ನಲು ಆಗುತ್ತಾ ? ಸಿದ್ದರಾಮಯ್ಯ ಅವರು ವಿವೇಚನೆ ಇಲ್ಲದೆ ಯಾಕೆ ಹೀಗೆ ಮಾತನಾಡುತ್ತಿದ್ದಾರೆ ಎನ್ನುವುದೇ ನನಗೆ ಅರ್ಥವಾಗುತ್ತಿಲ್ಲ. ಆತ್ಮದ್ರೋಹದ ಮಾತುಗಳನ್ನು ಕಾಂಗ್ರೆಸ್ನವರು ಮಾತ್ರ ಆಡೋಕೆ ಸಾಧ್ಯ. ಕೊಡವರ ಬಗ್ಗೆ ಹಗುರವಾಗಿ ಮಾತನಾಡಬೇಡಿ. ಅವರು ಗೋವನ್ನು ಎರಡನೇ ತಾಯಿಯಾಗಿ ನೋಡುತ್ತಾರೆ. ಕೋಟ್ಯಂತರ ಜನರ ಭಾವನೆಗೆ ಧಕ್ಕೆ ತರುವ, ಕೊಡವರಿಗೆ ನೋವಾಗುವಂತಹ ಮಾತುಗಳನ್ನಾಡಬೇಡಿ ಎಂದು ತಿಳಿಸಿದರು.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm