ಬ್ರೇಕಿಂಗ್ ನ್ಯೂಸ್
25-12-20 03:37 pm Headline Karnataka News Network ಕರ್ನಾಟಕ
ಮೈಸೂರು, ಡಿ.25 : ಕೊರೊನಾ ಕಾರಣಕ್ಕೆ ಕಳೆದ ಹತ್ತು ತಿಂಗಳಿನಿಂದಲೂ ಜನರು ನಿರ್ಬಂಧದ ವ್ಯವಸ್ಥೆಯಲ್ಲೇ ಇದ್ದಾರೆ. ಜನರನ್ನ ಇನ್ನೆಷ್ಟು ದಿನ ಮನೆಯಲ್ಲಿ ಕೂರಿಸ್ತೀರಾ..? ಮಾಸ್ಕ್ ಹೆಸರಿನಲ್ಲಿ ಜನರಿಗೆ ಅನಗತ್ಯ ತೊಂದರೆ ಕೊಡುವುದನ್ನು ತಪ್ಪಿಸಿ ಎಂದು ಸಂಸದ ಪ್ರತಾಪಸಿಂಹ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಹೆಸರಿನಲ್ಲಿ ಜನರು ಮನೆಯಲ್ಲಿ ಬಂಧಿಯಾಗಿದ್ದಾರೆ. ಇನ್ನು ಮುಂದಾದರೂ ಜನರನ್ನು ಓಡಾಡಲು ಬಿಡಿ. ಮಾಸ್ಕ್ ಹೆಸರಿನಲ್ಲಿ ಜನರಿಗೆ ಅನಗತ್ಯ ತೊಂದರೆ ಕೊಡಬೇಡಿ. ನಾನು ದೆಹಲಿ ಸೇರಿದಂತೆ ಹಲವು ಕಡೆಗಳಿಗೆ ಹೋಗಿ ಬಂದಿದ್ದೇನೆ. ಎಲ್ಲಾ ಕಡೆ ಕೊರೋನಾ ರೂಪಾಂತರದ ಬಗ್ಗೆ ಚರ್ಚೆ ಇದೆ. ಆದರೆ ಜನರನ್ನು ಹೆಚ್ಚು ದಿನ ನಿರ್ಬಂಧ ಮಾಡಲು ಸಾಧ್ಯವಿಲ್ಲ. ಸರಿಯೂ ಅಲ್ಲ ಎನ್ನುವ ಮೂಲಕ ರಾಜ್ಯ ಸರಕಾರದ ನೈಟ್ ಕರ್ಫ್ಯೂ ಬಗ್ಗೆ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು.
ಕೊರೊನಾದಿಂದಾಗಿ ಹಲವು ಉದ್ಯಮ ಸಂಸ್ಥೆಗಳು ತೀವ್ರ ಪರಿಣಾಮ ಎದುರಿಸಿವೆ. ಏನೇ ನಿರ್ಬಂಧ ಇದ್ದರೂ ಉದ್ಯಮ ಹಾಗೂ ಅವರ ದೈನಂದಿನ ಚಟುವಟಿಕೆಗಳಿಗೆ ಅವಕಾಶ ಕೊಡಬೇಕು. ಮಾಸ್ಕ್ ಕಡ್ಡಾಯ ಮಾಡಿ. ಆದರೇ ಮಾಸ್ಕ್ ಹೆಸರಿನಲ್ಲಿ ಕಾರು, ಬೈಕ್ ನಿಲ್ಲಿಸಿ ಜನರಿಗೆ ತೊಂದರೆ ಕೊಡಬೇಡಿ. ಸದ್ಯದಲ್ಲೇ ಕೊರೊನಾ ಲಸಿಕೆ ಸಹ ಬರುತ್ತಿದೆ ಎಂದು ತಿಳಿಸಿದರು.
ನೀವು ತಿಂತೀರಿ ಅಂತ ಕುರುಬ ಸಮಾಜವೇ ಬೀಫ್ ತಿನ್ನುತ್ತಾರೆಯೇ ?
ಕೊಡಗಿನವರು ಗೋ ಮಾಂಸ ಸೇವಿಸುತ್ತಾರೆಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ನೀವು ಗೋಮಾಂಸ ತಿನ್ನುತ್ತೀರಿ ಎಂದು ಇಡೀ ಕುರುಬ ಸಮಾಜದವರು ಬೀಫ್ ತಿನ್ನುತ್ತಾರೆ ಎನ್ನಲು ಆಗುತ್ತಾ ? ಸಿದ್ದರಾಮಯ್ಯ ಅವರು ವಿವೇಚನೆ ಇಲ್ಲದೆ ಯಾಕೆ ಹೀಗೆ ಮಾತನಾಡುತ್ತಿದ್ದಾರೆ ಎನ್ನುವುದೇ ನನಗೆ ಅರ್ಥವಾಗುತ್ತಿಲ್ಲ. ಆತ್ಮದ್ರೋಹದ ಮಾತುಗಳನ್ನು ಕಾಂಗ್ರೆಸ್ನವರು ಮಾತ್ರ ಆಡೋಕೆ ಸಾಧ್ಯ. ಕೊಡವರ ಬಗ್ಗೆ ಹಗುರವಾಗಿ ಮಾತನಾಡಬೇಡಿ. ಅವರು ಗೋವನ್ನು ಎರಡನೇ ತಾಯಿಯಾಗಿ ನೋಡುತ್ತಾರೆ. ಕೋಟ್ಯಂತರ ಜನರ ಭಾವನೆಗೆ ಧಕ್ಕೆ ತರುವ, ಕೊಡವರಿಗೆ ನೋವಾಗುವಂತಹ ಮಾತುಗಳನ್ನಾಡಬೇಡಿ ಎಂದು ತಿಳಿಸಿದರು.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm