ಬ್ರೇಕಿಂಗ್ ನ್ಯೂಸ್
27-08-25 02:51 pm Bangalore Correspondent ಕರ್ನಾಟಕ
ಬೆಂಗಳೂರು, ಆ 27 : ಕನ್ನಡದ ಖ್ಯಾತ ನಿರೂಪಕಿ, ಕುಡ್ಲ ಹುಡುಗಿ ಅನುಶ್ರೀ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಬಗ್ಗೆ ಕೆಲವೇ ದಿನಗಳ ಹಿಂದೆ ಸುದ್ದಿ ಹೊರಬಿದ್ದಿತ್ತು. ಕೊಡಗು ಮೂಲದ ರೋಷನ್ ಜೊತೆ ಆ್ಯಂಕರ್ ಅನುಶ್ರೀ ಅವರು ಹಸೆಮಣೆ ಏರಲಿದ್ದಾರೆ. ಮದುವೆಗೆ ದಿನಾಂಕ ಕೂಡ ನಿಗದಿ ಆಗಿದೆ. ಆಗಸ್ಟ್ 28ರಂದು ಅನುಶ್ರೀ ಮತ್ತು ರೋಷನ್ ಅವರ ಮದುವೆ ನಡೆಯಲಿದೆ. ಈಗಾಗಲೇ ಆಪ್ತರಿಗೆ ಮದುವೆ ಆಮಂತ್ರಣ ಪತ್ರಿಕೆ ನೀಡಲಾಗಿದೆ. ಅನುಶ್ರೀ ಮದುವೆಯ ಆಹ್ವಾನ ಪತ್ರಿಕೆ ತುಂಬಾ ಸರಳವಾಗಿದೆ.
ನೀವೆಲ್ಲ ಕೇಳುತ್ತಿದ್ದ ಏಕೈಕ ಪ್ರಶ್ನೆಗೆ ಈಗ ಉತ್ತರ. ಏಕಾಂಗಿ ನಿರೂಪಣೆಯ ನಂತರ ಅರ್ಧಾಂಗಿ ಆಗುವ ಹೊಸ ಮನ್ವಂತರ’ ಎಂದು ಆಹ್ವಾನ ಪತ್ರಿಕೆಯಲ್ಲಿ ಬರೆಯಲಾಗಿದೆ. ಆ.28ಕ್ಕೆ ರೋಷನ್ ಜೊತೆ ನಿರೂಪಕಿ ಅನುಶ್ರೀ ಸಪ್ತಪದಿ ತುಳಿಯಲಿದ್ದಾರೆ. ಅಂದು ಬೆಳಗ್ಗೆ 10.56ಕ್ಕೆ ಮಾಂಗಲ್ಯ ಧಾರಣೆ ಆಗಲಿದೆ. ಬೆಂಗಳೂರಿನ ಹೊರವಲಯದ ರೆಸಾರ್ಟ್ನಲ್ಲಿ ಮದುವೆ ನಡೆಯಲಿದೆ.
ಬಣ್ಣದ ಲೋಕದಲ್ಲಿ ಅನುಶ್ರೀ ಹಲವು ವರ್ಷಗಳಿಂದ ಆ್ಯಕ್ಟೀವ್ ಆಗಿದ್ದಾರೆ. ಕಿರುತೆರೆಯ ಅನೇಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದಾರೆ. ಹಲವು ವೇದಿಕೆ ಕಾರ್ಯಕ್ರಮಗಳ ನಿರೂಪಣೆ ಕೂಡ ಮಾಡಿದ್ದಾರೆ. ಸಿನಿಮಾಗಳಲ್ಲೂ ಅವರು ನಟಿಸಿದ್ದಾರೆ. ಚಿತ್ರರಂಗದಲ್ಲಿ ಅವರ ಸ್ನೇಹಿತರ ಬಳಗ ದೊಡ್ಡದು. ಅಲ್ಲದೇ, ರಾಜಕೀಯ ಕ್ಷೇತ್ರದವರ ಜೊತೆಗೂ ನಂಟು ಹೊಂದಿದ್ದಾರೆ. ಹಾಗಾಗಿ ಮದುವೆಗೆ ಅನೇಕ ಗಣ್ಯರು ಹಾಜರಿ ಹಾಕಲಿದ್ದಾರೆ.
ಅನುಶ್ರೀ ಮದುವೆ ಯಾವಾಗ ಎಂಬ ಪ್ರಶ್ನೆ ಆಗಾಗ ಕೇಳಿಬರುತ್ತಿತ್ತು. ಅದಕ್ಕೆ ತಕ್ಕಂತೆಯೇ ಸೋಶಿಯಲ್ ಮೀಡಿಯಾದಲ್ಲಿ ಹಲವು ಅಂತೆ-ಕಂತೆಗಳು ಹರಿದಾಡುತ್ತಿದ್ದವು. ಈ ಮೊದಲು ಕೂಡ ಅನುಶ್ರೀ ಮದುವೆ ಬಗ್ಗೆ ಕೆಲವು ಗಾಸಿಪ್ ಹಬ್ಬಿದ್ದವು. ಆದರೆ ಅವು ನಿಜವಾಗಲಿಲ್ಲ. ಈ ಬಾರಿ ಮದುವೆಯ ಸುದ್ದಿ ಖಚಿತವಾಗಿದೆ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.
Celebrated Kannada television anchor and Kudla native Anushree is all set to embark on a new chapter in her life — marriage. The news, which surfaced a few days ago, has now been confirmed, with the wedding date officially announced.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm