ಬ್ರೇಕಿಂಗ್ ನ್ಯೂಸ್
27-08-25 06:21 pm Bangalore Correspondent ಕರ್ನಾಟಕ
ಬೆಂಗಳೂರು, ಆ.27: ಚಾಮುಂಡಿ ಬೆಟ್ಟದ ಕುರಿತು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡ ಡಿಸಿಎಂ ಡಿ.ಕೆ.ಶಿವಕುಮಾರ್, "ಇದು ಸರ್ಕಾರದ ಆಸ್ತಿ. ಎಲ್ಲೂ ಹಿಂದೂ ಧರ್ಮದ್ದು ಅಂತ ಹೇಳಿಲ್ಲ" ಎಂದು ತಿಳಿಸಿದರು.
ಸದಾಶಿವನಗರ ನಿವಾಸದಲ್ಲಿಂದು ಮಾತನಾಡಿದ ಅವರು, "ಚಾಮುಂಡಿಯನ್ನು ನಾಡದೇವತೆ ಅಂತ ಕರೆಯುತ್ತೇವೆ. ರಾಜವಂಶಸ್ಥರು, ಸರ್ಕಾರ ಇಬ್ಬರೂ ಕರೆಯೋದು ಹಾಗೆ. ಇದು ಸರ್ಕಾರದ ಆಸ್ತಿ. ಎಲ್ಲೂ ಹಿಂದೂ ಧರ್ಮದ್ದು ಅಂತ ಹೇಳಿಲ್ಲ. ಹಿಂದೂಗಳು ಮಾತ್ರ ಬರಬೇಕು ಅಂತ ಇಲ್ಲ. ಎಲ್ಲಾ ಧರ್ಮದವರನ್ನೂ ಆಶೀರ್ವದಿಸುವ ದೇವತೆ. ನಾಡಹಬ್ಬಕ್ಕೆ ವಿದೇಶಿಗರೂ ಬರ್ತಾರೆ. ಬೇರೆ ಧರ್ಮದವರೂ ಬರ್ತಾರೆ" ಎಂದರು.
"ಮಹಾರಾಜರು ವಿದೇಶಿಯರನ್ನು ಆಹ್ವಾನಿಸುತ್ತಿದ್ರು. ಅವರೆಲ್ಲ ಯಾವ ಸಮುದಾಯಕ್ಕೆ ಸೇರಿದವರು?. ಬಾನು ಮುಷ್ತಾಕ್ ಬೆಟ್ಟ ಹತ್ತಬಾರದು ಅಂದ್ರೆ ಹೇಗೆ?. ನೀರು, ಸೂರ್ಯ, ದೇವರಿಗೆ ಧರ್ಮವಿಲ್ಲ. ಕ್ರಿಶ್ಚಿಯನ್ನರ ಚರ್ಚ್, ಮುಸ್ಲಿಮರ ಮಸೀದಿಗೆ ನಮ್ಮನ್ನು ಬಿಡಲ್ವೇ?. ಗೊಮ್ಮಟಗಿರಿಗೆ ನಮ್ಮನ್ನು ಬಿಡುವುದಿಲ್ವೇ?. ಅವರು ನಮ್ಮನ್ನು ಬರಬಾರದು ಅಂತ ಹೇಳ್ತಾರಾ" ಎಂದು ಪ್ರಶ್ನಿಸಿದರು.
ಯದುವೀರ್ ಇತಿಹಾಸ ಮರೆತಿದ್ದಾರೆ-ಡಿಕೆಶಿ:
"ಯದುವೀರ್ ಬಿಜೆಪಿ ಸೇರಿದ್ದಾರೆ. ಅವರು ಇತಿಹಾಸವನ್ನು ಮರೆತಿದ್ದಾರೆ. ನಾವು ಗೃಹಲಕ್ಷ್ಮಿ ಹಣ ಚಾಮುಂಡಿ ಮುಂದಿಟ್ಟು ಪೂಜಿಸಿದ್ವಿ. ಎಲ್ಲಾ ಧರ್ಮದವರಿಗೆ ಗ್ಯಾರಂಟಿ ಕೊಡ್ತಿದ್ದೇವೆ. ಹೀಗಾಗಿ ಜಾತಿ ಧರ್ಮದ ಬಣ್ಣ ಕಟ್ಟಬಾರದು" ಎಂದು ತಿಳಿಸಿದರು.
ಬಿಜೆಪಿಗಿಂತ ನಾವು ಹೆಚ್ಚು ಹಿಂದುತ್ವದವರು:
"ಬ್ಯಾರಿಗಳು ನಮಗಿಂತ ಕನ್ನಡ ಚೆನ್ನಾಗಿ ಮಾತಾಡ್ತಾರೆ. ಅವರನ್ನು ತಳ್ಳುವುದಕ್ಕೆ ಆಗುತ್ತಾ?. ನಮ್ಮನ್ನು ನೀವು ಬರಬೇಡಿ ಅಂತಾರಾ?. ಬಿಜೆಪಿಗಿಂತ ನಾವು ಹೆಚ್ಚು ಹಿಂದುತ್ವದವರು. ದೇಶದಲ್ಲಿ ಇರೋರನ್ನು ಓಡಿಸೋಕೆ ಆಗುತ್ತಾ" ಎಂದು ಕೇಳಿದರು.
Karnataka Deputy Chief Minister DK Shivakumar has defended his recent remark on Chamundi Hill, which triggered backlash from opposition leaders. Speaking to the media at his residence in Sadashivanagar, he clarified that Chamundi Hill is government property and not exclusively a Hindu religious site.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm