ಬ್ರೇಕಿಂಗ್ ನ್ಯೂಸ್
27-08-25 06:21 pm Bangalore Correspondent ಕರ್ನಾಟಕ
ಬೆಂಗಳೂರು, ಆ.27: ಚಾಮುಂಡಿ ಬೆಟ್ಟದ ಕುರಿತು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡ ಡಿಸಿಎಂ ಡಿ.ಕೆ.ಶಿವಕುಮಾರ್, "ಇದು ಸರ್ಕಾರದ ಆಸ್ತಿ. ಎಲ್ಲೂ ಹಿಂದೂ ಧರ್ಮದ್ದು ಅಂತ ಹೇಳಿಲ್ಲ" ಎಂದು ತಿಳಿಸಿದರು.
ಸದಾಶಿವನಗರ ನಿವಾಸದಲ್ಲಿಂದು ಮಾತನಾಡಿದ ಅವರು, "ಚಾಮುಂಡಿಯನ್ನು ನಾಡದೇವತೆ ಅಂತ ಕರೆಯುತ್ತೇವೆ. ರಾಜವಂಶಸ್ಥರು, ಸರ್ಕಾರ ಇಬ್ಬರೂ ಕರೆಯೋದು ಹಾಗೆ. ಇದು ಸರ್ಕಾರದ ಆಸ್ತಿ. ಎಲ್ಲೂ ಹಿಂದೂ ಧರ್ಮದ್ದು ಅಂತ ಹೇಳಿಲ್ಲ. ಹಿಂದೂಗಳು ಮಾತ್ರ ಬರಬೇಕು ಅಂತ ಇಲ್ಲ. ಎಲ್ಲಾ ಧರ್ಮದವರನ್ನೂ ಆಶೀರ್ವದಿಸುವ ದೇವತೆ. ನಾಡಹಬ್ಬಕ್ಕೆ ವಿದೇಶಿಗರೂ ಬರ್ತಾರೆ. ಬೇರೆ ಧರ್ಮದವರೂ ಬರ್ತಾರೆ" ಎಂದರು.
"ಮಹಾರಾಜರು ವಿದೇಶಿಯರನ್ನು ಆಹ್ವಾನಿಸುತ್ತಿದ್ರು. ಅವರೆಲ್ಲ ಯಾವ ಸಮುದಾಯಕ್ಕೆ ಸೇರಿದವರು?. ಬಾನು ಮುಷ್ತಾಕ್ ಬೆಟ್ಟ ಹತ್ತಬಾರದು ಅಂದ್ರೆ ಹೇಗೆ?. ನೀರು, ಸೂರ್ಯ, ದೇವರಿಗೆ ಧರ್ಮವಿಲ್ಲ. ಕ್ರಿಶ್ಚಿಯನ್ನರ ಚರ್ಚ್, ಮುಸ್ಲಿಮರ ಮಸೀದಿಗೆ ನಮ್ಮನ್ನು ಬಿಡಲ್ವೇ?. ಗೊಮ್ಮಟಗಿರಿಗೆ ನಮ್ಮನ್ನು ಬಿಡುವುದಿಲ್ವೇ?. ಅವರು ನಮ್ಮನ್ನು ಬರಬಾರದು ಅಂತ ಹೇಳ್ತಾರಾ" ಎಂದು ಪ್ರಶ್ನಿಸಿದರು.
ಯದುವೀರ್ ಇತಿಹಾಸ ಮರೆತಿದ್ದಾರೆ-ಡಿಕೆಶಿ:
"ಯದುವೀರ್ ಬಿಜೆಪಿ ಸೇರಿದ್ದಾರೆ. ಅವರು ಇತಿಹಾಸವನ್ನು ಮರೆತಿದ್ದಾರೆ. ನಾವು ಗೃಹಲಕ್ಷ್ಮಿ ಹಣ ಚಾಮುಂಡಿ ಮುಂದಿಟ್ಟು ಪೂಜಿಸಿದ್ವಿ. ಎಲ್ಲಾ ಧರ್ಮದವರಿಗೆ ಗ್ಯಾರಂಟಿ ಕೊಡ್ತಿದ್ದೇವೆ. ಹೀಗಾಗಿ ಜಾತಿ ಧರ್ಮದ ಬಣ್ಣ ಕಟ್ಟಬಾರದು" ಎಂದು ತಿಳಿಸಿದರು.
ಬಿಜೆಪಿಗಿಂತ ನಾವು ಹೆಚ್ಚು ಹಿಂದುತ್ವದವರು:
"ಬ್ಯಾರಿಗಳು ನಮಗಿಂತ ಕನ್ನಡ ಚೆನ್ನಾಗಿ ಮಾತಾಡ್ತಾರೆ. ಅವರನ್ನು ತಳ್ಳುವುದಕ್ಕೆ ಆಗುತ್ತಾ?. ನಮ್ಮನ್ನು ನೀವು ಬರಬೇಡಿ ಅಂತಾರಾ?. ಬಿಜೆಪಿಗಿಂತ ನಾವು ಹೆಚ್ಚು ಹಿಂದುತ್ವದವರು. ದೇಶದಲ್ಲಿ ಇರೋರನ್ನು ಓಡಿಸೋಕೆ ಆಗುತ್ತಾ" ಎಂದು ಕೇಳಿದರು.
Karnataka Deputy Chief Minister DK Shivakumar has defended his recent remark on Chamundi Hill, which triggered backlash from opposition leaders. Speaking to the media at his residence in Sadashivanagar, he clarified that Chamundi Hill is government property and not exclusively a Hindu religious site.
18-09-25 05:34 pm
Bangalore Correspondent
Ksrtc Bus, Driver, Heart Attack: ಬಸ್ ಓಡಿಸುವಾಗ...
17-09-25 06:02 pm
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
18-09-25 08:14 pm
HK News Desk
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
18-09-25 11:11 pm
Mangalore Correspondent
Mangalore, UT Khader: ಹಿಂದುಳಿದ ವರ್ಗಗಳ ಆಯೋಗ ಸ್...
18-09-25 09:12 pm
ಮಾಜಿ ಸೈನಿಕರಿಗೆ ಸರ್ಕಾರಿ ಸವಲತ್ತು ನೀಡದೆ ನಿರ್ಲಕ್ಷ...
18-09-25 09:09 pm
Banglegudde, Dharmasthala, SIT: ಬಂಗ್ಲೆಗುಡ್ಡೆ...
18-09-25 07:40 pm
Ajith Kumar Rai, Mangalore: ಬಂಟ- ನಾಡವರು ಒಂದೇ,...
18-09-25 06:11 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm