ಬ್ರೇಕಿಂಗ್ ನ್ಯೂಸ್
27-08-25 06:21 pm Bangalore Correspondent ಕರ್ನಾಟಕ
ಬೆಂಗಳೂರು, ಆ.27: ಚಾಮುಂಡಿ ಬೆಟ್ಟದ ಕುರಿತು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡ ಡಿಸಿಎಂ ಡಿ.ಕೆ.ಶಿವಕುಮಾರ್, "ಇದು ಸರ್ಕಾರದ ಆಸ್ತಿ. ಎಲ್ಲೂ ಹಿಂದೂ ಧರ್ಮದ್ದು ಅಂತ ಹೇಳಿಲ್ಲ" ಎಂದು ತಿಳಿಸಿದರು.
ಸದಾಶಿವನಗರ ನಿವಾಸದಲ್ಲಿಂದು ಮಾತನಾಡಿದ ಅವರು, "ಚಾಮುಂಡಿಯನ್ನು ನಾಡದೇವತೆ ಅಂತ ಕರೆಯುತ್ತೇವೆ. ರಾಜವಂಶಸ್ಥರು, ಸರ್ಕಾರ ಇಬ್ಬರೂ ಕರೆಯೋದು ಹಾಗೆ. ಇದು ಸರ್ಕಾರದ ಆಸ್ತಿ. ಎಲ್ಲೂ ಹಿಂದೂ ಧರ್ಮದ್ದು ಅಂತ ಹೇಳಿಲ್ಲ. ಹಿಂದೂಗಳು ಮಾತ್ರ ಬರಬೇಕು ಅಂತ ಇಲ್ಲ. ಎಲ್ಲಾ ಧರ್ಮದವರನ್ನೂ ಆಶೀರ್ವದಿಸುವ ದೇವತೆ. ನಾಡಹಬ್ಬಕ್ಕೆ ವಿದೇಶಿಗರೂ ಬರ್ತಾರೆ. ಬೇರೆ ಧರ್ಮದವರೂ ಬರ್ತಾರೆ" ಎಂದರು.
"ಮಹಾರಾಜರು ವಿದೇಶಿಯರನ್ನು ಆಹ್ವಾನಿಸುತ್ತಿದ್ರು. ಅವರೆಲ್ಲ ಯಾವ ಸಮುದಾಯಕ್ಕೆ ಸೇರಿದವರು?. ಬಾನು ಮುಷ್ತಾಕ್ ಬೆಟ್ಟ ಹತ್ತಬಾರದು ಅಂದ್ರೆ ಹೇಗೆ?. ನೀರು, ಸೂರ್ಯ, ದೇವರಿಗೆ ಧರ್ಮವಿಲ್ಲ. ಕ್ರಿಶ್ಚಿಯನ್ನರ ಚರ್ಚ್, ಮುಸ್ಲಿಮರ ಮಸೀದಿಗೆ ನಮ್ಮನ್ನು ಬಿಡಲ್ವೇ?. ಗೊಮ್ಮಟಗಿರಿಗೆ ನಮ್ಮನ್ನು ಬಿಡುವುದಿಲ್ವೇ?. ಅವರು ನಮ್ಮನ್ನು ಬರಬಾರದು ಅಂತ ಹೇಳ್ತಾರಾ" ಎಂದು ಪ್ರಶ್ನಿಸಿದರು.
ಯದುವೀರ್ ಇತಿಹಾಸ ಮರೆತಿದ್ದಾರೆ-ಡಿಕೆಶಿ:
"ಯದುವೀರ್ ಬಿಜೆಪಿ ಸೇರಿದ್ದಾರೆ. ಅವರು ಇತಿಹಾಸವನ್ನು ಮರೆತಿದ್ದಾರೆ. ನಾವು ಗೃಹಲಕ್ಷ್ಮಿ ಹಣ ಚಾಮುಂಡಿ ಮುಂದಿಟ್ಟು ಪೂಜಿಸಿದ್ವಿ. ಎಲ್ಲಾ ಧರ್ಮದವರಿಗೆ ಗ್ಯಾರಂಟಿ ಕೊಡ್ತಿದ್ದೇವೆ. ಹೀಗಾಗಿ ಜಾತಿ ಧರ್ಮದ ಬಣ್ಣ ಕಟ್ಟಬಾರದು" ಎಂದು ತಿಳಿಸಿದರು.
ಬಿಜೆಪಿಗಿಂತ ನಾವು ಹೆಚ್ಚು ಹಿಂದುತ್ವದವರು:
"ಬ್ಯಾರಿಗಳು ನಮಗಿಂತ ಕನ್ನಡ ಚೆನ್ನಾಗಿ ಮಾತಾಡ್ತಾರೆ. ಅವರನ್ನು ತಳ್ಳುವುದಕ್ಕೆ ಆಗುತ್ತಾ?. ನಮ್ಮನ್ನು ನೀವು ಬರಬೇಡಿ ಅಂತಾರಾ?. ಬಿಜೆಪಿಗಿಂತ ನಾವು ಹೆಚ್ಚು ಹಿಂದುತ್ವದವರು. ದೇಶದಲ್ಲಿ ಇರೋರನ್ನು ಓಡಿಸೋಕೆ ಆಗುತ್ತಾ" ಎಂದು ಕೇಳಿದರು.
Karnataka Deputy Chief Minister DK Shivakumar has defended his recent remark on Chamundi Hill, which triggered backlash from opposition leaders. Speaking to the media at his residence in Sadashivanagar, he clarified that Chamundi Hill is government property and not exclusively a Hindu religious site.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am