ಬ್ರೇಕಿಂಗ್ ನ್ಯೂಸ್
28-08-25 02:41 pm HK News Desk ಕರ್ನಾಟಕ
ಬೀದರ್, ಆ 28 : ಜಿಲ್ಲೆಯ ಡಿಪೋ ನಂ.1ರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಾರಿಗೆ ಬಸ್ ಡ್ರೈವರ್ ಡಿಪೋ ಮ್ಯಾನೇಜರ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಕಿಗೆ ಬಂದಿದೆ.
ಆಣದೂರು ಗ್ರಾಮದ ನಿವಾಸಿ ರಾಜಪ್ಪ (59) ಬಳ್ಳಾರಿ–ಬೀದರ್ ಮಾರ್ಗದ ಸ್ಲಿಪರ್ ಕೋಚ್ ಬಸ್ನಲ್ಲಿ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು. ದುಃಖಕರ ಸಂಗತಿಯಾಗಿಯೇ, ಅವರು ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದ ಅದೇ ಬಸ್ನಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಾಜಪ್ಪ ಆರು ಹೆಣ್ಣುಮಕ್ಕಳ ತಂದೆಯಾಗಿದ್ದು, ಅವರ ಕುಟುಂಬ ಆರ್ಥಿಕವಾಗಿ ಹಿಂದುಳಿದಿದೆ. ಕುಟುಂಬಕ್ಕೆ ಸಂಪೂರ್ಣ ಆಧಾರವಾಗಿದ್ದ ರಾಜಪ್ಪ ಅಕಾಲಿಕವಾಗಿ ಮೃತಪಟ್ಟ ಪರಿಣಾಮ ಕುಟುಂಬಕ್ಕೆ ದಿಕ್ಕೇ ತೋಚದಂತಾಗಿದೆ. ಶೀಘ್ರದಲ್ಲೇ ನಿವೃತ್ತಿ ಪಡೆಯಬೇಕಾಗಿದ್ದ ಅವರ ಜೀವನ ಅಂತ್ಯ ಕಂಡಿರುವುದು ಹೃದಯ ಕಲುಕುವ ಸಂಗತಿ.
ಬೀದರ್ ಡಿಪೋ ಮ್ಯಾನೇಜರ್ ವಿಠ್ಠಲ್ ಬೋವಿ ನಿರಂತರ ಕಿರುಕುಳ ನೀಡಿದ್ದೇ ಈ ಆತ್ಮಹತ್ಯೆಗೆ ಕಾರಣವಾಗಿದೆ ಎಂದು ಮೃತರ ಕುಟುಂಬಸ್ಥರ ಗಂಭೀರ ಆರೋಪ ಮಾಡಿದ್ದಾರೆ. ರಾಜಪ್ಪ ಅವರು ಆರೋಗ್ಯ ಸಮಸ್ಯೆ, ವಯಸ್ಸಿನ ಅಡಚಣೆಗಳನ್ನು ಹೇಳಿಕೊಂಡರೂ ಅಧಿಕಾರಿಗಳು ಯಾವುದೇ ರೀತಿಯ ಸಹಾನುಭೂತಿ ತೋರಲಿಲ್ಲವಂತೆ, “ನಮ್ಮ ತಂದೆ ನಿರಂತರ ಒತ್ತಡ ಮತ್ತು ಕಿರುಕುಳಕ್ಕೆ ತುತ್ತಾಗಿದ್ದರು. ಅವರಿಗೆ ನ್ಯಾಯ ಸಿಗಬೇಕು. ಮ್ಯಾನೇಜರ್ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು” ಎಂದು ಕುಟುಂಬದವರು ಆಗ್ರಹಿಸಿದ್ದಾರೆ.
ರಜೆ ನಿರಾಕರಣೆ, ನಿರಂತರ ಒತ್ತಡ ;
ಮೃತರ ಸಂಬಂಧಿಕರು ಹಾಗೂ ಸಹೋದ್ಯೋಗಿಗಳ ಪ್ರಕಾರ, ರಾಜಪ್ಪ ಅವರಿಗೆ ಬೇಕಾದಾಗ ರಜೆ ನೀಡಲಾಗುತ್ತಿರಲಿಲ್ಲ. ಆರೋಗ್ಯ ಸಮಸ್ಯೆಯಿಂದಾಗಿ ವಿಶ್ರಾಂತಿ ಅಗತ್ಯವಿದ್ದರೂ, ಅಧಿಕಾರಿಗಳು ಅವರನ್ನು ಪ್ರತಿದಿನವೂ ಬಸ್ಸು ಓಡಿಸಲು ಒತ್ತಾಯಿಸುತ್ತಿದ್ದರು. ದೂರದ ಮಾರ್ಗದಲ್ಲಿ ಸಾಮಾನ್ಯವಾಗಿ ಇಬ್ಬರು ಚಾಲಕರ ಅವಶ್ಯಕತೆ ಇದ್ದರೂ, ರಾಜಪ್ಪ ಒಬ್ಬರೇ ನಿರಂತರವಾಗಿ ಡ್ರೈವಿಂಗ್ ಮಾಡುತ್ತಿದ್ದರು. ಇದು ಅವರ ದೈಹಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿತ್ತು ಎಂದು ಸಹೋದ್ಯೋಗಿಗಳು ತಿಳಿಸಿದರು.
In a shocking incident, a KSRTC bus driver working at Depot No.1 in Bidar allegedly died by suicide by hanging himself inside the very bus he was operating, following prolonged harassment by the depot manager. The deceased has been identified as Rajappa (59), a resident of Anadoor village. He was serving as a driver on the Ballari–Bidar sleeper coach route.
18-09-25 05:34 pm
Bangalore Correspondent
Ksrtc Bus, Driver, Heart Attack: ಬಸ್ ಓಡಿಸುವಾಗ...
17-09-25 06:02 pm
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
18-09-25 08:14 pm
HK News Desk
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
18-09-25 11:11 pm
Mangalore Correspondent
Mangalore, UT Khader: ಹಿಂದುಳಿದ ವರ್ಗಗಳ ಆಯೋಗ ಸ್...
18-09-25 09:12 pm
ಮಾಜಿ ಸೈನಿಕರಿಗೆ ಸರ್ಕಾರಿ ಸವಲತ್ತು ನೀಡದೆ ನಿರ್ಲಕ್ಷ...
18-09-25 09:09 pm
Banglegudde, Dharmasthala, SIT: ಬಂಗ್ಲೆಗುಡ್ಡೆ...
18-09-25 07:40 pm
Ajith Kumar Rai, Mangalore: ಬಂಟ- ನಾಡವರು ಒಂದೇ,...
18-09-25 06:11 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm