ಬ್ರೇಕಿಂಗ್ ನ್ಯೂಸ್
28-08-25 06:23 pm HK News Desk ಕರ್ನಾಟಕ
ಚಿಕ್ಕಮಗಳೂರು, ಆ 28 : ಸಾರ್ವಜನಿಕರಿಗೆ ಮಾತ್ರವಲ್ಲ, ಕಾನೂನು ಪಾಲಕರಿಗೂ ಕಾನೂನು ಒಂದೇ ಎಂದು ಸಾಬೀತುಪಡಿಸಿದ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ನಡೆದಿದೆ. ಇಲ್ಲಿನ ಪೊಲೀಸ್ ಅಧಿಕಾರಿ ನೋ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ತಮ್ಮ ಹಿರಿಯ ಅಧಿಕಾರಿಯ ವಾಹನಕ್ಕೆ ದಂಡ ವಿಧಿಸಿ, ಸ್ಥಳೀಯರಿಂದ ಮೆಚ್ಚುಗೆ ಗಳಿಸಿದ್ದಾರೆ.
ಎನ್.ಆರ್. ಪುರ ತಾಲೂಕಿನ ಪೊಲೀಸ್ ಇನ್ಸ್ಪೆಕ್ಟರ್ ಜೀಪ್ ಕೊಪ್ಪ ಪಟ್ಟಣದ ನೋ ಪಾರ್ಕಿಂಗ್ ನಲ್ಲಿ ನಿಲ್ಲಿಸಲಾಗಿತ್ತು. ಕರ್ತವ್ಯ ನಿರತರಾಗಿದ್ದ ಕೊಪ್ಪ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಬಸವರಾಜ್ ಈ ಜೀಪನ್ನು ಗಮನಿಸಿ, ತಕ್ಷಣವೇ ಅದನ್ನು ಲಾಕ್ ಮಾಡಿಸಿದ್ದಾರೆ. ನಿಯಮಗಳ ಪ್ರಕಾರ, ವಾಹನ ನಿಲ್ಲಿಸಬಾರದ ಜಾಗದಲ್ಲಿ ನಿಲ್ಲಿಸಿದ ಕಾರಣ ಜೀಪ್ಗೆ ₹500 ದಂಡ ವಿಧಿಸಲಾಗಿದೆ.

ನಂತರ, ಚಾಲಕ ₹500 ದಂಡವನ್ನು ಕಟ್ಟಿ ಜೀಪನ್ನು ಬಿಡಿಸಿಕೊಂಡು ಹೋಗಿದ್ದಾರೆ. ಈ ಘಟನೆ ಸ್ಥಳೀಯರ ಗಮನ ಸೆಳೆದಿದ್ದು, ಪಿಎಸ್ಐ ಬಸವರಾಜ್ ಅವರ ನಿಷ್ಪಕ್ಷಪಾತ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯಾವುದೇ ಪ್ರಭಾವಕ್ಕೆ ಒಳಗಾಗದೆ, ತಮ್ಮ ಹಿರಿಯ ಅಧಿಕಾರಿಯ ವಾಹನಕ್ಕೂ ದಂಡ ವಿಧಿಸಿದ ಪಿಎಸ್ಐ ಕಾರ್ಯ ಕಾನೂನು ಎಲ್ಲರಿಗೂ ಒಂದೇ ಎಂಬ ಸಂದೇಶವನ್ನು ರವಾನಿಸಿದೆ.
ಇಂತಹ ಪ್ರಾಮಾಣಿಕ ಮತ್ತು ನಿಷ್ಪಕ್ಷಪಾತ ಕಾರ್ಯಗಳು ಸಾರ್ವಜನಿಕರಲ್ಲಿ ಪೊಲೀಸರ ಬಗ್ಗೆ ವಿಶ್ವಾಸ ಹೆಚ್ಚಿಸಲು ಸಹಾಯ ಮಾಡುತ್ತವೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಈ ಘಟನೆ ಈಗ ಸೋಶಿಯಲ್ ಮೆಡಿಯದಲ್ಲೂ ವೈರಲ್ ಆಗಿದ್ದು, ಪಿಎಸ್ಐ ಬಸವರಾಜ್ ಕಾರ್ಯವೈಖರಿಗೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸುತ್ತಿದ್ದಾರೆ.
A traffic police officer in Koppa town of Chikkamagaluru district has earned widespread praise for showing that the law applies equally to everyone — even to those who enforce it. In a commendable act of impartiality, PSI Basavaraj from Koppa Police Station issued a fine and locked the vehicle of a senior police inspector.
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am