ಬ್ರೇಕಿಂಗ್ ನ್ಯೂಸ್
28-08-25 06:23 pm HK News Desk ಕರ್ನಾಟಕ
ಚಿಕ್ಕಮಗಳೂರು, ಆ 28 : ಸಾರ್ವಜನಿಕರಿಗೆ ಮಾತ್ರವಲ್ಲ, ಕಾನೂನು ಪಾಲಕರಿಗೂ ಕಾನೂನು ಒಂದೇ ಎಂದು ಸಾಬೀತುಪಡಿಸಿದ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ನಡೆದಿದೆ. ಇಲ್ಲಿನ ಪೊಲೀಸ್ ಅಧಿಕಾರಿ ನೋ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ತಮ್ಮ ಹಿರಿಯ ಅಧಿಕಾರಿಯ ವಾಹನಕ್ಕೆ ದಂಡ ವಿಧಿಸಿ, ಸ್ಥಳೀಯರಿಂದ ಮೆಚ್ಚುಗೆ ಗಳಿಸಿದ್ದಾರೆ.
ಎನ್.ಆರ್. ಪುರ ತಾಲೂಕಿನ ಪೊಲೀಸ್ ಇನ್ಸ್ಪೆಕ್ಟರ್ ಜೀಪ್ ಕೊಪ್ಪ ಪಟ್ಟಣದ ನೋ ಪಾರ್ಕಿಂಗ್ ನಲ್ಲಿ ನಿಲ್ಲಿಸಲಾಗಿತ್ತು. ಕರ್ತವ್ಯ ನಿರತರಾಗಿದ್ದ ಕೊಪ್ಪ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಬಸವರಾಜ್ ಈ ಜೀಪನ್ನು ಗಮನಿಸಿ, ತಕ್ಷಣವೇ ಅದನ್ನು ಲಾಕ್ ಮಾಡಿಸಿದ್ದಾರೆ. ನಿಯಮಗಳ ಪ್ರಕಾರ, ವಾಹನ ನಿಲ್ಲಿಸಬಾರದ ಜಾಗದಲ್ಲಿ ನಿಲ್ಲಿಸಿದ ಕಾರಣ ಜೀಪ್ಗೆ ₹500 ದಂಡ ವಿಧಿಸಲಾಗಿದೆ.

ನಂತರ, ಚಾಲಕ ₹500 ದಂಡವನ್ನು ಕಟ್ಟಿ ಜೀಪನ್ನು ಬಿಡಿಸಿಕೊಂಡು ಹೋಗಿದ್ದಾರೆ. ಈ ಘಟನೆ ಸ್ಥಳೀಯರ ಗಮನ ಸೆಳೆದಿದ್ದು, ಪಿಎಸ್ಐ ಬಸವರಾಜ್ ಅವರ ನಿಷ್ಪಕ್ಷಪಾತ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯಾವುದೇ ಪ್ರಭಾವಕ್ಕೆ ಒಳಗಾಗದೆ, ತಮ್ಮ ಹಿರಿಯ ಅಧಿಕಾರಿಯ ವಾಹನಕ್ಕೂ ದಂಡ ವಿಧಿಸಿದ ಪಿಎಸ್ಐ ಕಾರ್ಯ ಕಾನೂನು ಎಲ್ಲರಿಗೂ ಒಂದೇ ಎಂಬ ಸಂದೇಶವನ್ನು ರವಾನಿಸಿದೆ.
ಇಂತಹ ಪ್ರಾಮಾಣಿಕ ಮತ್ತು ನಿಷ್ಪಕ್ಷಪಾತ ಕಾರ್ಯಗಳು ಸಾರ್ವಜನಿಕರಲ್ಲಿ ಪೊಲೀಸರ ಬಗ್ಗೆ ವಿಶ್ವಾಸ ಹೆಚ್ಚಿಸಲು ಸಹಾಯ ಮಾಡುತ್ತವೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಈ ಘಟನೆ ಈಗ ಸೋಶಿಯಲ್ ಮೆಡಿಯದಲ್ಲೂ ವೈರಲ್ ಆಗಿದ್ದು, ಪಿಎಸ್ಐ ಬಸವರಾಜ್ ಕಾರ್ಯವೈಖರಿಗೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸುತ್ತಿದ್ದಾರೆ.
A traffic police officer in Koppa town of Chikkamagaluru district has earned widespread praise for showing that the law applies equally to everyone — even to those who enforce it. In a commendable act of impartiality, PSI Basavaraj from Koppa Police Station issued a fine and locked the vehicle of a senior police inspector.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm