ಬ್ರೇಕಿಂಗ್ ನ್ಯೂಸ್
29-08-25 10:51 pm HK News Desk ಕರ್ನಾಟಕ
ಕಲಬುರಗಿ/ಶಿವಮೊಗ್ಗ, ಆ.29 : ರಾಜ್ಯದ ವಿವಿಧೆಡೆ ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರದ ವಿರುದ್ಧ ನಡೆಸಿದ ಕಾರ್ಯಾಚರಣೆಯಲ್ಲಿ ಕಲಬುರಗಿ ಮತ್ತು ಶಿವಮೊಗ್ಗದಲ್ಲಿ ಇಬ್ಬರು ಸರ್ಕಾರಿ ಅಧಿಕಾರಿಗಳು ಲಂಚ ಸ್ವೀಕರಿಸುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಕಲಬುರಗಿಯಲ್ಲಿ ಎಸಿಪಿ ಮತ್ತು ತಂಡ ಬಲೆಗೆ
ಕಲಬುರಗಿ ದಕ್ಷಿಣ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಶರಣಬಸಪ್ಪ ಸುಬೇದಾರ್, ರೈಟರ್ ಚಂದ್ರಕಾಂತ್, ಕಾನ್ಸ್ಟೇಬಲ್ ರಾಘವೇಂದ್ರ ಮತ್ತು ಇಬ್ಬರು ಖಾಸಗಿ ವ್ಯಕ್ತಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸೈಟ್ ವಿವಾದವೊಂದನ್ನು ಬಗೆಹರಿಸಲು ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರಿಂದ ಬರೋಬ್ಬರಿ 40 ಲಕ್ಷಕ್ಕೆ ರೂ. ಬೇಡಿಕೆ ಇಟ್ಟು, 10 ಲಕ್ಷ ಅಡ್ವಾನ್ಸ್ ಪಡೆದಿದ್ದರು.
ನಂತರ ಉಳಿದ 30 ಲಕ್ಷಕ್ಕೆ ಬೇಡಿಕೆ ಇಟ್ಟು ಕಿರುಕುಳ ನೀಡುತ್ತಿದ್ದರು. ಈ ಕುರಿತು ರೇವಣಸಿದ್ದಯ್ಯ ಎಂಬುವವರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದಲ್ಲಿ ದಾಳಿ ನಡೆಸಿದ ತಂಡ, 30 ಲಕ್ಷ ರೂ. ಪಡೆಯುವಾಗಲೇ ಎಸಿಪಿ ಸುಬೇದಾರ್ ಮತ್ತು ತಂಡವನ್ನು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಘಟನೆಯ ಸಂಬಂಧ ಐವರನ್ನೂ ಪೊಲೀಸರು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ
ಶಿವಮೊಗ್ಗ ಮಹಾನಗರ ಪಾಲಿಕೆ ಅಧಿಕಾರಿ ಬಂಧನ:
ಇದೇ ರೀತಿ, ಶಿವಮೊಗ್ಗದಲ್ಲಿ ಮಹಾನಗರ ಪಾಲಿಕೆಯ ಆಶ್ರಯ ವಿಭಾಗದ ಸಮುದಾಯ ಸಂಘಟನಾಧಿಕಾರಿ ಶಶಿಧರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಮೊಹಮ್ಮದ್ ಆಸಿಫ್ ಉಲ್ಲಾ ಎಂಬುವವರು ಅಮ್ಯಾದ್ ಅಲಿ ಅವರಿಂದ ಖರೀದಿಸಿದ ಮನೆಯ ಖಾತೆಯನ್ನು ತಮ್ಮ ಹೆಸರಿಗೆ ಮಾಡಿಕೊಡುವಂತೆ ಅರ್ಜಿ ಸಲ್ಲಿಸಿದ್ದರು. ಈ ಕಾರ್ಯಕ್ಕಾಗಿ ಶಶಿಧರ 10,000 ಲಂಚಕ್ಕೆ ಬೇಡಿಕೆ ಇಟ್ಟಿದ್ದಾನೆ. ಈ ಬಗ್ಗೆ ದೂರು ಸ್ವೀಕರಿಸಿದ ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ್ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ರುದ್ರೇಶ್ ಅವರ ತಂಡ ಶಿವಮೊಗ್ಗದ ನೆಹರು ರಸ್ತೆಯಲ್ಲಿರುವ ಆಶ್ರಯ ಕಚೇರಿಯಲ್ಲಿ ಲಂಚ ಸ್ವೀಕರಿಸುವ ವೇಳೆ ದಾಳಿ ನಡೆಸಿ ಶಶಿಧರ ನನ್ನ ಬಂಧಿಸಿದೆ.
In a major crackdown on corruption, Lokayukta police in Karnataka conducted separate operations in Kalaburagi and Shivamogga, nabbing two government officials red-handed while accepting bribes. Kalaburagi ACP and Team Caught in ₹40 Lakh Bribe Case In Kalaburagi, Assistant Commissioner of Police (ACP) Sharanabasappa Subedar of the South Division, along with writer Chandrakant, constable
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am