ಬ್ರೇಕಿಂಗ್ ನ್ಯೂಸ್
31-08-25 05:35 pm HK News Desk ಕರ್ನಾಟಕ
ಮೈಸೂರು, ಆ.31: ನಾಡಹಬ್ಬ ದಸರಾ ಉದ್ಘಾಟನೆ ಬಗ್ಗೆ ಹೈ ಪವರ್ ಕಮಿಟಿಯಲ್ಲಿ ನಾವು ತೀರ್ಮಾನ ಮಾಡಿದ್ದೇವೆ. ಭಾನು ಮುಸ್ತಾಕ್ ಬೂಕರ್ ಪ್ರಶಸ್ತಿ ವಿಜೇತೆ. ಅವರನ್ನು ಆಯ್ಕೆ ಮಾಡಿದ್ದೇವೆ. ನಾಡಹಬ್ಬ ಎಲ್ಲರಿಗೂ ಸೇರಿದ್ದು. ಇಂಥವರೇ ಉದ್ಘಾಟನೆ ಮಾಡಬೇಕು ಅಂತ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸಮರ್ಥನೆ ಮಾಡಿದ್ದಾರೆ.
ದಸರಾ ಎಲ್ಲರ ಹಬ್ಬ. ಮುಸ್ಲಿಂ, ಕ್ರಿಶ್ಚಿಯನ್, ಎಲ್ಲರೂ ಹಬ್ಬ ಆಚರಿಸುತ್ತಾರೆ. ಮಹಾರಾಜರ ಕಾಲದಿಂದಲೂ ಹಬ್ಬ ಆಗ್ತಿದೆ. ಹೈದರಾಲಿ, ಟಿಪ್ಪು ಕಾಲದಲ್ಲೂ ದಸರಾ ಆಗಿದೆ. ಆಗ ಮಿರ್ಜಾ ಇಸ್ಮಾಯಿಲ್ ದಿವಾನರಾಗಿದ್ದರು. ಆವಾಗಲೂ ದಸರಾ ಆಚರಣೆ ಇತ್ತು. ಚ್ಯುತಿ ಬಂದಿರಲಿಲ್ಲ.
ಬಾನು ಮುಷ್ತಾಕ್ ಬೂಕರ್ ಗೆದ್ದಿದ್ದಾರೆ ಅಂತ ಅವರನ್ನ ದಸರಾ ಉದ್ಘಾಟನೆಗೆ ಆಯ್ಕೆ ಮಾಡಿದ್ದೇವೆ.ಇದನ್ನು ವಿರೋಧ ಮಾಡ್ತಿರೋರಿಗೆ ಇತಿಹಾಸ ಗೊತ್ತಿಲ್ಲ. ಬಿಜೆಪಿಯವರು ಜ್ಯಾತ್ಯಾತೀತವಾಗಿ ಮಾತನಾಡಲ್ಲ. ವಿರೋಧಕ್ಕಾಗಿ ವಿರೋಧ ಮಾಡುತ್ತಿದ್ದಾರೆ.
ಕನ್ನಡ ತಾಯಿ ಭುವನೇಶ್ವರಿ ಬಗ್ಗೆ ಭಾನು ಮುಷ್ತಾಕ್ ಹೇಳಿಕೆ ನೀಡಿರುವ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಅವರಿಗೆ ಕನ್ನಡದ ಬಗ್ಗೆ ಪ್ರೀತಿ ಇದೆ, ಯಾರು ಇಲ್ಲ ಅಂದಿದ್ದು. ಅದಕ್ಕಾಗಿಯೇ ಕನ್ನಡದಲ್ಲಿ ಪುಸ್ತಕಗಳನ್ನು ಬರೆದಿದ್ದಾರೆ. ಬಿಜೆಪಿ ಏನೋ ಕುಂಟು ನೆಪ ಹುಡುಕುತ್ತಿದೆ ಅಷ್ಟೇ. ನಾಡಹಬ್ಬ ಉದ್ಘಾಟನೆ ಎಲ್ಲರ ಹಬ್ಬ ಅಂತ ಮಾಡಲಾಗುತ್ತದೆ ಅಷ್ಟೇ ಎಂದರು.
ಬಿಜೆಪಿ- ಜೆಡಿಎಸ್ ಧರ್ಮಸ್ಥಳ ಚಲೋ ನಡೆಸುತ್ತಿರುವ ವಿಚಾರದಲ್ಲಿ, ವೀರೇಂದ್ರ ಹೆಗಡೆ ಅವರೇ ಎಸ್ಐಟಿ ತನಿಖೆ ಸ್ವಾಗತ ಮಾಡಿದ್ದಾರೆ. ಸತ್ಯ ಹೊರಬರಬೇಕು. ಅನುಮಾನದ ತೂಗುಕತ್ತಿ ಹೋಗಲಿ ಅಂತ ಎಸ್.ಐ.ಟಿ ಮಾಡಿದ್ದೇವೆ. ಬಿಜೆಪಿ ಕೂಡ ಸ್ವಾಗತ ಮಾಡಿದೆ. ಈಗ ರಾಜಕೀಯಕ್ಕಾಗಿ ರ್ಯಾಲಿ ಮಾಡುತ್ತಿದ್ದಾರೆ. ಬಿಜೆಪಿಗೆ ಧರ್ಮ ಜಾತಿ ಏನು ಗೊತ್ತಿಲ್ಲ ಎಂದು ಟೀಕಿಸಿದರು.
Chief Minister Siddaramaiah has defended the decision to appoint Booker Prize winner Banumustak as the inaugurator of this year’s Dasara celebrations, saying the festival belongs to everyone and should not be restricted by identity or background.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 11:47 am
Mangalore Correspondent
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm