ಬ್ರೇಕಿಂಗ್ ನ್ಯೂಸ್
31-08-25 05:35 pm HK News Desk ಕರ್ನಾಟಕ
ಮೈಸೂರು, ಆ.31: ನಾಡಹಬ್ಬ ದಸರಾ ಉದ್ಘಾಟನೆ ಬಗ್ಗೆ ಹೈ ಪವರ್ ಕಮಿಟಿಯಲ್ಲಿ ನಾವು ತೀರ್ಮಾನ ಮಾಡಿದ್ದೇವೆ. ಭಾನು ಮುಸ್ತಾಕ್ ಬೂಕರ್ ಪ್ರಶಸ್ತಿ ವಿಜೇತೆ. ಅವರನ್ನು ಆಯ್ಕೆ ಮಾಡಿದ್ದೇವೆ. ನಾಡಹಬ್ಬ ಎಲ್ಲರಿಗೂ ಸೇರಿದ್ದು. ಇಂಥವರೇ ಉದ್ಘಾಟನೆ ಮಾಡಬೇಕು ಅಂತ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸಮರ್ಥನೆ ಮಾಡಿದ್ದಾರೆ.
ದಸರಾ ಎಲ್ಲರ ಹಬ್ಬ. ಮುಸ್ಲಿಂ, ಕ್ರಿಶ್ಚಿಯನ್, ಎಲ್ಲರೂ ಹಬ್ಬ ಆಚರಿಸುತ್ತಾರೆ. ಮಹಾರಾಜರ ಕಾಲದಿಂದಲೂ ಹಬ್ಬ ಆಗ್ತಿದೆ. ಹೈದರಾಲಿ, ಟಿಪ್ಪು ಕಾಲದಲ್ಲೂ ದಸರಾ ಆಗಿದೆ. ಆಗ ಮಿರ್ಜಾ ಇಸ್ಮಾಯಿಲ್ ದಿವಾನರಾಗಿದ್ದರು. ಆವಾಗಲೂ ದಸರಾ ಆಚರಣೆ ಇತ್ತು. ಚ್ಯುತಿ ಬಂದಿರಲಿಲ್ಲ.
ಬಾನು ಮುಷ್ತಾಕ್ ಬೂಕರ್ ಗೆದ್ದಿದ್ದಾರೆ ಅಂತ ಅವರನ್ನ ದಸರಾ ಉದ್ಘಾಟನೆಗೆ ಆಯ್ಕೆ ಮಾಡಿದ್ದೇವೆ.ಇದನ್ನು ವಿರೋಧ ಮಾಡ್ತಿರೋರಿಗೆ ಇತಿಹಾಸ ಗೊತ್ತಿಲ್ಲ. ಬಿಜೆಪಿಯವರು ಜ್ಯಾತ್ಯಾತೀತವಾಗಿ ಮಾತನಾಡಲ್ಲ. ವಿರೋಧಕ್ಕಾಗಿ ವಿರೋಧ ಮಾಡುತ್ತಿದ್ದಾರೆ.
ಕನ್ನಡ ತಾಯಿ ಭುವನೇಶ್ವರಿ ಬಗ್ಗೆ ಭಾನು ಮುಷ್ತಾಕ್ ಹೇಳಿಕೆ ನೀಡಿರುವ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಅವರಿಗೆ ಕನ್ನಡದ ಬಗ್ಗೆ ಪ್ರೀತಿ ಇದೆ, ಯಾರು ಇಲ್ಲ ಅಂದಿದ್ದು. ಅದಕ್ಕಾಗಿಯೇ ಕನ್ನಡದಲ್ಲಿ ಪುಸ್ತಕಗಳನ್ನು ಬರೆದಿದ್ದಾರೆ. ಬಿಜೆಪಿ ಏನೋ ಕುಂಟು ನೆಪ ಹುಡುಕುತ್ತಿದೆ ಅಷ್ಟೇ. ನಾಡಹಬ್ಬ ಉದ್ಘಾಟನೆ ಎಲ್ಲರ ಹಬ್ಬ ಅಂತ ಮಾಡಲಾಗುತ್ತದೆ ಅಷ್ಟೇ ಎಂದರು.
ಬಿಜೆಪಿ- ಜೆಡಿಎಸ್ ಧರ್ಮಸ್ಥಳ ಚಲೋ ನಡೆಸುತ್ತಿರುವ ವಿಚಾರದಲ್ಲಿ, ವೀರೇಂದ್ರ ಹೆಗಡೆ ಅವರೇ ಎಸ್ಐಟಿ ತನಿಖೆ ಸ್ವಾಗತ ಮಾಡಿದ್ದಾರೆ. ಸತ್ಯ ಹೊರಬರಬೇಕು. ಅನುಮಾನದ ತೂಗುಕತ್ತಿ ಹೋಗಲಿ ಅಂತ ಎಸ್.ಐ.ಟಿ ಮಾಡಿದ್ದೇವೆ. ಬಿಜೆಪಿ ಕೂಡ ಸ್ವಾಗತ ಮಾಡಿದೆ. ಈಗ ರಾಜಕೀಯಕ್ಕಾಗಿ ರ್ಯಾಲಿ ಮಾಡುತ್ತಿದ್ದಾರೆ. ಬಿಜೆಪಿಗೆ ಧರ್ಮ ಜಾತಿ ಏನು ಗೊತ್ತಿಲ್ಲ ಎಂದು ಟೀಕಿಸಿದರು.
Chief Minister Siddaramaiah has defended the decision to appoint Booker Prize winner Banumustak as the inaugurator of this year’s Dasara celebrations, saying the festival belongs to everyone and should not be restricted by identity or background.
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am