ಬ್ರೇಕಿಂಗ್ ನ್ಯೂಸ್
31-08-25 05:35 pm HK News Desk ಕರ್ನಾಟಕ
ಮೈಸೂರು, ಆ.31: ನಾಡಹಬ್ಬ ದಸರಾ ಉದ್ಘಾಟನೆ ಬಗ್ಗೆ ಹೈ ಪವರ್ ಕಮಿಟಿಯಲ್ಲಿ ನಾವು ತೀರ್ಮಾನ ಮಾಡಿದ್ದೇವೆ. ಭಾನು ಮುಸ್ತಾಕ್ ಬೂಕರ್ ಪ್ರಶಸ್ತಿ ವಿಜೇತೆ. ಅವರನ್ನು ಆಯ್ಕೆ ಮಾಡಿದ್ದೇವೆ. ನಾಡಹಬ್ಬ ಎಲ್ಲರಿಗೂ ಸೇರಿದ್ದು. ಇಂಥವರೇ ಉದ್ಘಾಟನೆ ಮಾಡಬೇಕು ಅಂತ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸಮರ್ಥನೆ ಮಾಡಿದ್ದಾರೆ.
ದಸರಾ ಎಲ್ಲರ ಹಬ್ಬ. ಮುಸ್ಲಿಂ, ಕ್ರಿಶ್ಚಿಯನ್, ಎಲ್ಲರೂ ಹಬ್ಬ ಆಚರಿಸುತ್ತಾರೆ. ಮಹಾರಾಜರ ಕಾಲದಿಂದಲೂ ಹಬ್ಬ ಆಗ್ತಿದೆ. ಹೈದರಾಲಿ, ಟಿಪ್ಪು ಕಾಲದಲ್ಲೂ ದಸರಾ ಆಗಿದೆ. ಆಗ ಮಿರ್ಜಾ ಇಸ್ಮಾಯಿಲ್ ದಿವಾನರಾಗಿದ್ದರು. ಆವಾಗಲೂ ದಸರಾ ಆಚರಣೆ ಇತ್ತು. ಚ್ಯುತಿ ಬಂದಿರಲಿಲ್ಲ.
ಬಾನು ಮುಷ್ತಾಕ್ ಬೂಕರ್ ಗೆದ್ದಿದ್ದಾರೆ ಅಂತ ಅವರನ್ನ ದಸರಾ ಉದ್ಘಾಟನೆಗೆ ಆಯ್ಕೆ ಮಾಡಿದ್ದೇವೆ.ಇದನ್ನು ವಿರೋಧ ಮಾಡ್ತಿರೋರಿಗೆ ಇತಿಹಾಸ ಗೊತ್ತಿಲ್ಲ. ಬಿಜೆಪಿಯವರು ಜ್ಯಾತ್ಯಾತೀತವಾಗಿ ಮಾತನಾಡಲ್ಲ. ವಿರೋಧಕ್ಕಾಗಿ ವಿರೋಧ ಮಾಡುತ್ತಿದ್ದಾರೆ.
ಕನ್ನಡ ತಾಯಿ ಭುವನೇಶ್ವರಿ ಬಗ್ಗೆ ಭಾನು ಮುಷ್ತಾಕ್ ಹೇಳಿಕೆ ನೀಡಿರುವ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಅವರಿಗೆ ಕನ್ನಡದ ಬಗ್ಗೆ ಪ್ರೀತಿ ಇದೆ, ಯಾರು ಇಲ್ಲ ಅಂದಿದ್ದು. ಅದಕ್ಕಾಗಿಯೇ ಕನ್ನಡದಲ್ಲಿ ಪುಸ್ತಕಗಳನ್ನು ಬರೆದಿದ್ದಾರೆ. ಬಿಜೆಪಿ ಏನೋ ಕುಂಟು ನೆಪ ಹುಡುಕುತ್ತಿದೆ ಅಷ್ಟೇ. ನಾಡಹಬ್ಬ ಉದ್ಘಾಟನೆ ಎಲ್ಲರ ಹಬ್ಬ ಅಂತ ಮಾಡಲಾಗುತ್ತದೆ ಅಷ್ಟೇ ಎಂದರು.
ಬಿಜೆಪಿ- ಜೆಡಿಎಸ್ ಧರ್ಮಸ್ಥಳ ಚಲೋ ನಡೆಸುತ್ತಿರುವ ವಿಚಾರದಲ್ಲಿ, ವೀರೇಂದ್ರ ಹೆಗಡೆ ಅವರೇ ಎಸ್ಐಟಿ ತನಿಖೆ ಸ್ವಾಗತ ಮಾಡಿದ್ದಾರೆ. ಸತ್ಯ ಹೊರಬರಬೇಕು. ಅನುಮಾನದ ತೂಗುಕತ್ತಿ ಹೋಗಲಿ ಅಂತ ಎಸ್.ಐ.ಟಿ ಮಾಡಿದ್ದೇವೆ. ಬಿಜೆಪಿ ಕೂಡ ಸ್ವಾಗತ ಮಾಡಿದೆ. ಈಗ ರಾಜಕೀಯಕ್ಕಾಗಿ ರ್ಯಾಲಿ ಮಾಡುತ್ತಿದ್ದಾರೆ. ಬಿಜೆಪಿಗೆ ಧರ್ಮ ಜಾತಿ ಏನು ಗೊತ್ತಿಲ್ಲ ಎಂದು ಟೀಕಿಸಿದರು.
Chief Minister Siddaramaiah has defended the decision to appoint Booker Prize winner Banumustak as the inaugurator of this year’s Dasara celebrations, saying the festival belongs to everyone and should not be restricted by identity or background.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm