ಬ್ರೇಕಿಂಗ್ ನ್ಯೂಸ್
31-08-25 05:35 pm HK News Desk ಕರ್ನಾಟಕ
ಮೈಸೂರು, ಆ.31: ನಾಡಹಬ್ಬ ದಸರಾ ಉದ್ಘಾಟನೆ ಬಗ್ಗೆ ಹೈ ಪವರ್ ಕಮಿಟಿಯಲ್ಲಿ ನಾವು ತೀರ್ಮಾನ ಮಾಡಿದ್ದೇವೆ. ಭಾನು ಮುಸ್ತಾಕ್ ಬೂಕರ್ ಪ್ರಶಸ್ತಿ ವಿಜೇತೆ. ಅವರನ್ನು ಆಯ್ಕೆ ಮಾಡಿದ್ದೇವೆ. ನಾಡಹಬ್ಬ ಎಲ್ಲರಿಗೂ ಸೇರಿದ್ದು. ಇಂಥವರೇ ಉದ್ಘಾಟನೆ ಮಾಡಬೇಕು ಅಂತ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸಮರ್ಥನೆ ಮಾಡಿದ್ದಾರೆ.
ದಸರಾ ಎಲ್ಲರ ಹಬ್ಬ. ಮುಸ್ಲಿಂ, ಕ್ರಿಶ್ಚಿಯನ್, ಎಲ್ಲರೂ ಹಬ್ಬ ಆಚರಿಸುತ್ತಾರೆ. ಮಹಾರಾಜರ ಕಾಲದಿಂದಲೂ ಹಬ್ಬ ಆಗ್ತಿದೆ. ಹೈದರಾಲಿ, ಟಿಪ್ಪು ಕಾಲದಲ್ಲೂ ದಸರಾ ಆಗಿದೆ. ಆಗ ಮಿರ್ಜಾ ಇಸ್ಮಾಯಿಲ್ ದಿವಾನರಾಗಿದ್ದರು. ಆವಾಗಲೂ ದಸರಾ ಆಚರಣೆ ಇತ್ತು. ಚ್ಯುತಿ ಬಂದಿರಲಿಲ್ಲ.
ಬಾನು ಮುಷ್ತಾಕ್ ಬೂಕರ್ ಗೆದ್ದಿದ್ದಾರೆ ಅಂತ ಅವರನ್ನ ದಸರಾ ಉದ್ಘಾಟನೆಗೆ ಆಯ್ಕೆ ಮಾಡಿದ್ದೇವೆ.ಇದನ್ನು ವಿರೋಧ ಮಾಡ್ತಿರೋರಿಗೆ ಇತಿಹಾಸ ಗೊತ್ತಿಲ್ಲ. ಬಿಜೆಪಿಯವರು ಜ್ಯಾತ್ಯಾತೀತವಾಗಿ ಮಾತನಾಡಲ್ಲ. ವಿರೋಧಕ್ಕಾಗಿ ವಿರೋಧ ಮಾಡುತ್ತಿದ್ದಾರೆ.
ಕನ್ನಡ ತಾಯಿ ಭುವನೇಶ್ವರಿ ಬಗ್ಗೆ ಭಾನು ಮುಷ್ತಾಕ್ ಹೇಳಿಕೆ ನೀಡಿರುವ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಅವರಿಗೆ ಕನ್ನಡದ ಬಗ್ಗೆ ಪ್ರೀತಿ ಇದೆ, ಯಾರು ಇಲ್ಲ ಅಂದಿದ್ದು. ಅದಕ್ಕಾಗಿಯೇ ಕನ್ನಡದಲ್ಲಿ ಪುಸ್ತಕಗಳನ್ನು ಬರೆದಿದ್ದಾರೆ. ಬಿಜೆಪಿ ಏನೋ ಕುಂಟು ನೆಪ ಹುಡುಕುತ್ತಿದೆ ಅಷ್ಟೇ. ನಾಡಹಬ್ಬ ಉದ್ಘಾಟನೆ ಎಲ್ಲರ ಹಬ್ಬ ಅಂತ ಮಾಡಲಾಗುತ್ತದೆ ಅಷ್ಟೇ ಎಂದರು.
ಬಿಜೆಪಿ- ಜೆಡಿಎಸ್ ಧರ್ಮಸ್ಥಳ ಚಲೋ ನಡೆಸುತ್ತಿರುವ ವಿಚಾರದಲ್ಲಿ, ವೀರೇಂದ್ರ ಹೆಗಡೆ ಅವರೇ ಎಸ್ಐಟಿ ತನಿಖೆ ಸ್ವಾಗತ ಮಾಡಿದ್ದಾರೆ. ಸತ್ಯ ಹೊರಬರಬೇಕು. ಅನುಮಾನದ ತೂಗುಕತ್ತಿ ಹೋಗಲಿ ಅಂತ ಎಸ್.ಐ.ಟಿ ಮಾಡಿದ್ದೇವೆ. ಬಿಜೆಪಿ ಕೂಡ ಸ್ವಾಗತ ಮಾಡಿದೆ. ಈಗ ರಾಜಕೀಯಕ್ಕಾಗಿ ರ್ಯಾಲಿ ಮಾಡುತ್ತಿದ್ದಾರೆ. ಬಿಜೆಪಿಗೆ ಧರ್ಮ ಜಾತಿ ಏನು ಗೊತ್ತಿಲ್ಲ ಎಂದು ಟೀಕಿಸಿದರು.
Chief Minister Siddaramaiah has defended the decision to appoint Booker Prize winner Banumustak as the inaugurator of this year’s Dasara celebrations, saying the festival belongs to everyone and should not be restricted by identity or background.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am