ಬ್ರೇಕಿಂಗ್ ನ್ಯೂಸ್
31-08-25 05:35 pm HK News Desk ಕರ್ನಾಟಕ
ಮೈಸೂರು, ಆ.31: ನಾಡಹಬ್ಬ ದಸರಾ ಉದ್ಘಾಟನೆ ಬಗ್ಗೆ ಹೈ ಪವರ್ ಕಮಿಟಿಯಲ್ಲಿ ನಾವು ತೀರ್ಮಾನ ಮಾಡಿದ್ದೇವೆ. ಭಾನು ಮುಸ್ತಾಕ್ ಬೂಕರ್ ಪ್ರಶಸ್ತಿ ವಿಜೇತೆ. ಅವರನ್ನು ಆಯ್ಕೆ ಮಾಡಿದ್ದೇವೆ. ನಾಡಹಬ್ಬ ಎಲ್ಲರಿಗೂ ಸೇರಿದ್ದು. ಇಂಥವರೇ ಉದ್ಘಾಟನೆ ಮಾಡಬೇಕು ಅಂತ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸಮರ್ಥನೆ ಮಾಡಿದ್ದಾರೆ.
ದಸರಾ ಎಲ್ಲರ ಹಬ್ಬ. ಮುಸ್ಲಿಂ, ಕ್ರಿಶ್ಚಿಯನ್, ಎಲ್ಲರೂ ಹಬ್ಬ ಆಚರಿಸುತ್ತಾರೆ. ಮಹಾರಾಜರ ಕಾಲದಿಂದಲೂ ಹಬ್ಬ ಆಗ್ತಿದೆ. ಹೈದರಾಲಿ, ಟಿಪ್ಪು ಕಾಲದಲ್ಲೂ ದಸರಾ ಆಗಿದೆ. ಆಗ ಮಿರ್ಜಾ ಇಸ್ಮಾಯಿಲ್ ದಿವಾನರಾಗಿದ್ದರು. ಆವಾಗಲೂ ದಸರಾ ಆಚರಣೆ ಇತ್ತು. ಚ್ಯುತಿ ಬಂದಿರಲಿಲ್ಲ.
ಬಾನು ಮುಷ್ತಾಕ್ ಬೂಕರ್ ಗೆದ್ದಿದ್ದಾರೆ ಅಂತ ಅವರನ್ನ ದಸರಾ ಉದ್ಘಾಟನೆಗೆ ಆಯ್ಕೆ ಮಾಡಿದ್ದೇವೆ.ಇದನ್ನು ವಿರೋಧ ಮಾಡ್ತಿರೋರಿಗೆ ಇತಿಹಾಸ ಗೊತ್ತಿಲ್ಲ. ಬಿಜೆಪಿಯವರು ಜ್ಯಾತ್ಯಾತೀತವಾಗಿ ಮಾತನಾಡಲ್ಲ. ವಿರೋಧಕ್ಕಾಗಿ ವಿರೋಧ ಮಾಡುತ್ತಿದ್ದಾರೆ.
ಕನ್ನಡ ತಾಯಿ ಭುವನೇಶ್ವರಿ ಬಗ್ಗೆ ಭಾನು ಮುಷ್ತಾಕ್ ಹೇಳಿಕೆ ನೀಡಿರುವ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಅವರಿಗೆ ಕನ್ನಡದ ಬಗ್ಗೆ ಪ್ರೀತಿ ಇದೆ, ಯಾರು ಇಲ್ಲ ಅಂದಿದ್ದು. ಅದಕ್ಕಾಗಿಯೇ ಕನ್ನಡದಲ್ಲಿ ಪುಸ್ತಕಗಳನ್ನು ಬರೆದಿದ್ದಾರೆ. ಬಿಜೆಪಿ ಏನೋ ಕುಂಟು ನೆಪ ಹುಡುಕುತ್ತಿದೆ ಅಷ್ಟೇ. ನಾಡಹಬ್ಬ ಉದ್ಘಾಟನೆ ಎಲ್ಲರ ಹಬ್ಬ ಅಂತ ಮಾಡಲಾಗುತ್ತದೆ ಅಷ್ಟೇ ಎಂದರು.
ಬಿಜೆಪಿ- ಜೆಡಿಎಸ್ ಧರ್ಮಸ್ಥಳ ಚಲೋ ನಡೆಸುತ್ತಿರುವ ವಿಚಾರದಲ್ಲಿ, ವೀರೇಂದ್ರ ಹೆಗಡೆ ಅವರೇ ಎಸ್ಐಟಿ ತನಿಖೆ ಸ್ವಾಗತ ಮಾಡಿದ್ದಾರೆ. ಸತ್ಯ ಹೊರಬರಬೇಕು. ಅನುಮಾನದ ತೂಗುಕತ್ತಿ ಹೋಗಲಿ ಅಂತ ಎಸ್.ಐ.ಟಿ ಮಾಡಿದ್ದೇವೆ. ಬಿಜೆಪಿ ಕೂಡ ಸ್ವಾಗತ ಮಾಡಿದೆ. ಈಗ ರಾಜಕೀಯಕ್ಕಾಗಿ ರ್ಯಾಲಿ ಮಾಡುತ್ತಿದ್ದಾರೆ. ಬಿಜೆಪಿಗೆ ಧರ್ಮ ಜಾತಿ ಏನು ಗೊತ್ತಿಲ್ಲ ಎಂದು ಟೀಕಿಸಿದರು.
Chief Minister Siddaramaiah has defended the decision to appoint Booker Prize winner Banumustak as the inaugurator of this year’s Dasara celebrations, saying the festival belongs to everyone and should not be restricted by identity or background.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm