ಬ್ರೇಕಿಂಗ್ ನ್ಯೂಸ್
01-09-25 05:03 pm HK News Desk ಕರ್ನಾಟಕ
ಮೈಸೂರು, ಸೆ.1 : ಧರ್ಮಸ್ಥಳ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಲಾಭಕ್ಕೆ ಚಲೋ ಮಾಡ್ತಿದ್ದಾರೆ. ಆದ್ರೆ ಅವರಿಗೆ ಇದರಿಂದ ಲಾಭ ಸಿಗಲ್ಲ. ನಮಗೆ ಧರ್ಮಸ್ಥಳದ ಬಗ್ಗೆ ಅಪಾರ ಗೌರವವಿದೆ. ಅದಕ್ಕಾಗಿಯೇ ಎಸ್ಐಟಿ ರಚನೆ ಮಾಡಿದ್ದೆವು. ಹಾಗಾದರೆ ಎಸ್.ಐ.ಟಿ ರಚನೆ ಮಾಡಿದಾಗಲೇ ಬಿಜೆಪಿ ಯಾಕೆ ವಿರೋಧ ಮಾಡಲಿಲ್ಲ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ದೂರುದಾರ ಹೇಳಿದಂತೆ, ಅಲ್ಲಿ ಏನೂ ಸಿಗಲಿಲ್ಲ ಅಂತ ಈಗ ಹೋರಾಟ ಎಂದು ಮಾಡುತ್ತಿದ್ದಾರೆ. ರಾಜಕೀಯ ಲಾಭಕ್ಕಾಗಿ ಮಾಡುತ್ತಿದ್ದಾರೆ. ಹಿಂದೂಗಳು ಒಟ್ಟಾಗುತ್ತಾರೆ ಎಂದು ಏನೇನೋ ಹೇಳುತ್ತಾರೆ. ನಾವೂ ಹಿಂದೂಗಳೇ ಅಲ್ವಾ.. ಎಲ್ಲ ಹಿಂದೂಗಳು ಅವರ ಪರ ಇಲ್ಲ. ರಾಮನ ಹೆಸರಲ್ಲು ರಾಜಕೀಯ ಮಾಡಿದ್ದರು. ಈಗ ನಮ್ಮ ಊರಿನಲ್ಲೂ ರಾಮ ಮಂದಿರ ಮಾಡಿದ್ದೇವೆ.
ಹಿಂದೂಗಳು ಅಂದ್ರೆ ರಾಜಕೀಯ ಮಾಡೋದಲ್ಲ. ಅಪಪ್ರಚಾರ ಮಾಡೋದು ಅಲ್ಲ. ಸುಳ್ಳು ಹೇಳೋದು ಅಲ್ಲ. ಮನುಷ್ಯತ್ವ ಇಲ್ಲದವರನ್ನು ಏನಂತ ಕರೀಬೇಕು? ಎಂದು ಪ್ರಶ್ನೆ ಮಾಡಿದರು.
ದಸರಾ ವಿಚಾರದಲ್ಲೂ ಬಿಜೆಪಿಯವರು ರಾಜಕಾರಣ ಮಾಡಿದ್ರು. ಅವರ ಮನೆಯಲ್ಲು ರಾಜಕಾರಣ ಮಾಡ್ತಾರೆ. ಸುಳ್ಳು ಹೇಳೋದು ಬಿಟ್ಟರೆ ಬಿಜೆಪಿ ಅವರಿಗೆ ಬೇರೇನೂ ಬರಲ್ಲ. ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರು ಅಂತ ಭಾನು ಮುಷ್ತಾಕ್ ಅವರನ್ನು ಗೌರವಿಸಲು ದಸರಾ ಉದ್ಘಾಟನೆಗೆ ಕರೆದಿದ್ದೇವೆ. ಅದರಲ್ಲಿ ಬೇರೇನೂ ವಿಷಯ ಇಲ್ಲ ಎಂದರು.
ಚಾಮುಂಡಿ ಬೆಟ್ಟ ಚಲೋ ಮಾಡ್ತೀವಿ ಎಂಬ ಅಶೋಕ್ ಹೇಳಿಕೆ ವಿಚಾರದ ಪ್ರತಿಕ್ರಿಯಿಸಿದ ಅವರು, ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿನೇ. ಆದ್ರೆ ದಸರಾ ಹಬ್ಬ ಎಲ್ಲರ ಹಬ್ಬ. ನಾವು ಮಾಡೋದು ದಸರಾ ಹಬ್ಬ. ಅದಕ್ಕೆ ಧರ್ಮ ಜಾತಿ ಏನು ಇಲ್ಲ ಎಂದರು. ಡಿಕೆಶಿ ಒಂದು ಕಾಲು ಹೊರಗಿಟ್ಟಿದ್ದಾರೆ 50 ಜನ ಎಂ.ಎಲ್. ಎ ಹೋಗುತ್ತಾರೆ ಎಂಬ ಯತ್ನಾಳ ಹೇಳಿಕೆಗೆ, ಅದೆಲ್ಲ ಏನೂ ಇಲ್ಲ ಎಂದು ಹೇಳುತ್ತ ಸಿಎಂ ಹೊರ ನಡೆದರು.
Chief Minister Siddaramaiah hit out at the BJP on Sunday, accusing the party of using the Dharmasthala issue for political mileage. He questioned why the BJP, which is now opposing the Special Investigation Team (SIT), had not raised objections when the SIT was first constituted.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm