ಬ್ರೇಕಿಂಗ್ ನ್ಯೂಸ್
01-09-25 10:53 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.1 : ಲಿವಿಂಗ್ ರಿಲೇಶನ್ ಇಟ್ಟುಕೊಂಡಿದ್ದ ಮಹಿಳೆ ತನ್ನನ್ನು ಬಿಟ್ಟು ಬೇರೊಬ್ಬನ ಜೊತೆಗೆ ಸುತ್ತಾಡುತ್ತಿದ್ದಾಳೆ ಎಂಬ ಸಿಟ್ಟಿನಿಂದ 60 ವರ್ಷದ ವ್ಯಕ್ತಿಯೊಬ್ಬ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೈದ ಭೀಭತ್ಸ ಘಟನೆ ಹೊಮ್ಮದೇವನಹಳ್ಳಿ ರಸ್ತೆಯಲ್ಲಿ ನಡೆದಿದೆ.
ಬನ್ನೇರುಘಟ್ಟ ನಿವಾಸಿ ವನಜಾಕ್ಷಿ (35) ಕೊಲೆಯಾದ ಮಹಿಳೆ. ಶನಿವಾರ ಮಧ್ಯಾಹ್ನ ಘಟನೆ ನಡೆದಿದ್ದು ಬೆಂಕಿಯ ಸುಟ್ಟ ಗಾಯಕ್ಕೀಡಾಗಿದ್ದ ಮಹಿಳೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿತ್ತು. ಸೋಮವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಇತ್ತ ಆರೋಪಿ ವಿಠಲ (60) ನನ್ನು ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.
ವನಜಾಕ್ಷಿಗೆ ಈ ಹಿಂದೆ ಮದುವೆಯಾಗಿದ್ದು ಆತನನ್ನು ಬಿಟ್ಟಿದ್ದಳು. ಈ ವೇಳೆ, ವಿಠಲ ಸಂಪರ್ಕ ಆಗಿದ್ದು ಹಲವು ಸಮಯದಿಂದ ಲಿವಿಂಗ್ ರಿಲೇಶನಲ್ಲಿದ್ದರು. ಆದರೆ ವಿಠಲ ಕುಡಿದು ಬಂದು ಮನೆಯಲ್ಲಿ ಕಿರುಕುಳ ನೀಡುತ್ತಿದ್ದರಿಂದ ಇವರ ನಡುವೆ ಗಲಾಟೆ ಆಗಿತ್ತು. ಹೀಗಾಗಿ ವನಜಾಕ್ಷಿ ಆತನನ್ನು ದೂರ ಮಾಡಿದ್ದಲ್ಲದೆ ಬೇರೊಬ್ಬ ಯುವಕನ ಜೊತೆಗೆ ಸಂಪರ್ಕದಲ್ಲಿದ್ದಳು. ಈ ವಿಷಯ ತಿಳಿದು ವಿಠಲ, ವನಜಾಕ್ಷಿಯನ್ನು ಕೊಲ್ಲಲು 5 ಲೀಟರ್ ಪೆಟ್ರೋಲ್ ಖರೀದಿಸಿ ತಯಾರಿ ಮಾಡಿಕೊಂಡಿದ್ದ.
ಸ್ವತಃ ಕ್ಯಾಬ್ ಚಾಲಕನಾಗಿದ್ದ ವಿಠಲ ಶನಿವಾರ ಮಧ್ಯಾಹ್ನ ವನಜಾಕ್ಷಿ ತನ್ನ ಸಂಬಂಧಿಕ ಮುನಿಯಪ್ಪ ಎಂಬಾತನ ಜೊತೆಗೆ ಪ್ರಯಾಣಿಸುತ್ತಿದ್ದ ಕಾರನ್ನು ಹಿಂಬಾಲಿಸಿದ್ದು ಹೊಮ್ಮದೇವನಹಳ್ಳಿ ರಸ್ತೆಯಲ್ಲಿ ಅಡ್ಡಹಾಕಿದ್ದಾನೆ. ಆನಂತರ, ಅವರಿದ್ದ ಕಾರು ಸೇರಿ ಇಬ್ಬರ ಮೇಲೂ ಪೆಟ್ರೋಲ್ ಸುರಿದಿದ್ದಾನೆ. ಎಲ್ಲರೂ ನೋಡುತ್ತಲೇ ಘಟನೆಯಾಗಿದ್ದು ಮುನಿಯಪ್ಪ ಹೆದರಿ ಅಲ್ಲಿಂದ ಓಡಿದ್ದಾನೆ. ವನಜಾಕ್ಷಿ ಕೂಡ ಓಡಿದ್ದು ರಸ್ತೆಯಲ್ಲಿ ತಡವರಿಸಿ ಬಿದ್ದಿದ್ದಾಳೆ. ಇಷ್ಟರಲ್ಲಿಯೇ ವಿಠಲ ತನ್ನ ಕೈಲಿದ್ದ ಲೈಟರ್ ನಿಂದ ಆಕೆಯ ಮೇಲೆ ಬೆಂಕಿ ಹಚ್ಚಿದ್ದಾನೆ. ಅರೆ ಬರೆ ಬೆಂದು ಹೋಗಿ ರಸ್ತೆಯಲ್ಲಿ ಬಿದ್ದು ಹೊರಳಾಡಿದ ಮಹಿಳೆಯನ್ನು ಬಳಿಕ ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿತ್ತು. ಹುಳಿಮಾವು ಪೊಲೀಸರು ಆರೋಪಿ ವಿರುದ್ಧ ಕೇಸು ದಾಖಲಿಸಿ ಬಂಧಿಸಿದ್ದಾರೆ.
ವಿಠಲನಿಗೆ ಹಿಂದೆ ಎರಡು ಮದುವೆಯಾಗಿದ್ದು ಮೊದಲ ಪತ್ನಿ ಸಾವನ್ನಪ್ಪಿದ್ದರೆ, ಎರಡನೇ ಹೆಂಡತಿ ಈತನನ್ನು ಬಿಟ್ಟು ಹೋಗಿದ್ದಳು. ಆನಂತರ ವನಜಾಕ್ಷಿ ಜೊತೆಗೆ ಸಂಸಾರ ನಡೆಸುತ್ತಿದ್ದ. ಈಗ ಆಕೆಯನ್ನೇ ಕೊಂದು ಜೈಲು ಸೇರಿದ್ದಾನೆ.
In a horrifying incident on Hommadevanahalli Road, a 60-year-old man set his live-in partner on fire in full public view after suspecting her of being in a relationship with another man.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm