ಬ್ರೇಕಿಂಗ್ ನ್ಯೂಸ್
02-09-25 02:37 pm HK News Desk ಕರ್ನಾಟಕ
ಬೆಂಗಳೂರು, ಸೆ.2 : ಧರ್ಮಸ್ಥಳ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ಏಜನ್ಸಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ತನಿಖೆ ಕೈಗೆತ್ತಿಕೊಳ್ಳುವ ಸೂಚನೆ ಲಭಿಸಿದೆ. ಷಡ್ಯಂತ್ರ ಮತ್ತು ವಿದೇಶಿ ಫಂಡಿಂಗ್ ವಿಚಾರದಲ್ಲಿ ಸ್ಥಳೀಯ ಪೊಲೀಸರು ಇಡಿಗೆ ದಾಖಲೆಗಳನ್ನು ಸಲ್ಲಿಸಿದ್ದು, ಅಧಿಕಾರಿಗಳು ಪ್ರತ್ಯೇಕ ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಲಿದ್ದಾರೆ.
ಫಾರಿನ್ ಎಕ್ಸ್ ಚೇಂಜ್ ಮ್ಯಾನೇಜ್ಮೆಂಟ್ ಏಕ್ಟ್ ನಡಿ ಇಡಿ ಕೇಸು ದಾಖಲಿಸಿಕೊಂಡು ತನಿಖೆ ನಡೆಸಲಿದೆ. ಒಡನಾಡಿ ಮತ್ತು ಸಂವಾದ ಎನ್ನುವ ಎರಡು ಎನ್ ಜಿಓಗಳ ಬಗ್ಗೆ ತನಿಖೆ ನಡೆಸಲಿದ್ದು, ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಮತ್ತು ಅಪಪ್ರಚಾರ ನಡೆಸಲು ವಿದೇಶದಿಂದ ಅಕ್ರಮವಾಗಿ ಹಣಕಾಸು ನೆರವು ಪಡೆದಿದ್ದಾರೆಂಬ ಆರೋಪದಲ್ಲಿ ತನಿಖೆ ನಡೆಯಲಿದೆ.
ಎನ್ ಜಿಓಗಳು ಮತ್ತು ಹೋರಾಟಕ್ಕೆ ಸಂಬಂಧಿಸಿದವರ ಐದು ವರ್ಷಗಳ ಬ್ಯಾಂಕ್ ವಹಿವಾಟು, ಇನ್ನಿತರ ಬ್ಯಾಂಕ್ ಚಟುವಟಿಕೆಗಳು, ಪಾನ್ ಕಾರ್ಡ್ ಮಾಹಿತಿಗಳನ್ನು ನೀಡುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಇಡಿ ಪತ್ರ ಬರೆದಿದೆ ಎಂಬುದಾಗಿ ಇಂಡಿಯಾ ಟುಡೇ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.
ರಾಜ್ಯ ಬಿಜೆಪಿ ವತಿಯಿಂದ ಧರ್ಮಸ್ಥಳ ವಿರುದ್ಧ ಷಡ್ಯಂತ್ರ ನಡೆಸಿದವರ ಬಗ್ಗೆ ಎನ್ಐಎ ತನಿಖೆ ಆಗಬೇಕೆಂದು ಧರ್ಮಸ್ಥಳ ಚಲೋ ನಡೆದಿತ್ತು. ಎಸ್ಐಟಿ ಬಗ್ಗೆ ನಂಬಿಕೆ ಇಲ್ಲ. ಆಡಳಿತ ಪಕ್ಷದವರೇ ಷಡ್ಯಂತ್ರ ಇದೆ ಎಂದಿದ್ದಾರೆ. ಇದರ ಮೇಲೆ ರಾಜ್ಯದ ತನಿಖಾ ಏಜನ್ಸಿಯಿಂದ ವಿದೇಶಿ ಫಂಡಿಂಗ್ ಪತ್ತೆ ಮಾಡಲು ಸಾಧ್ಯವೇ ಇತ್ಯಾದಿ ಪ್ರಶ್ನೆಗಳನ್ನು ಬಿಜೆಪಿ ನಾಯಕರು ಎತ್ತಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಸಿಎಂ ಸಿದ್ದರಾಮಯ್ಯ, ಎಸ್ಐಟಿ ತನಿಖೆ ನಡೆಯುತ್ತಿದೆ, ಹಾಗಿರುವಾಗ ಎನ್ಐಎ ತನಿಖೆ ನಡೆಸುವ ಅಗತ್ಯವಿಲ್ಲ. ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ಮಾಡುತ್ತಿದ್ದಾರೆ ಎಂದಿದ್ದರು.
ಧರ್ಮಸ್ಥಳ ಪ್ರಕರಣದಲ್ಲಿ ವಿದೇಶದಿಂದ ಫಂಡಿಂಗ್ ಆಗಿದೆ, ಅಪಪ್ರಚಾರ, ಹಿಂದು ಶ್ರದ್ಧಾಕೇಂದ್ರಗಳನ್ನು ಗುರಿಯಾಗಿಸಿ ಈ ಫಂಡಿಂಗ್ ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಪುಕಾರು ಹಬ್ಬಿಸಿದ್ದಾರೆ. ಇದೇ ವೇಳೆ, ಬೆಂಗಳೂರಿನ ಸುರೇಶ್ ಗೌಡ ಎಂಬವರು ಇಡಿ ಕಚೇರಿಗೆ ದೂರು ಕೊಟ್ಟು ತನಿಖೆಗೆ ಆಗ್ರಹ ಮಾಡಿದ್ದರು. ನಕಲಿ ಮಾನವ ಹಕ್ಕು ಆಯೋಗದ ಬಗ್ಗೆ ತನಿಖೆ ಮಾಡುವಂತೆಯೂ ರಾಜ್ಯ ಮಾನವ ಹಕ್ಕು ಆಯೋಗಕ್ಕೆ ಸುರೇಶ್ ದೂರು ನೀಡಿದ್ದರು.
The Enforcement Directorate (ED) has entered the Dharmasthala case, opening a separate FIR to investigate allegations of foreign funding and conspiracy. Local police have already submitted relevant documents to the central agency, prompting ED to begin its own probe under the Foreign Exchange Management Act (FEMA).
24-10-25 06:04 pm
HK News Desk
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am