ಬ್ರೇಕಿಂಗ್ ನ್ಯೂಸ್
02-09-25 02:37 pm HK News Desk ಕರ್ನಾಟಕ
ಬೆಂಗಳೂರು, ಸೆ.2 : ಧರ್ಮಸ್ಥಳ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ಏಜನ್ಸಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ತನಿಖೆ ಕೈಗೆತ್ತಿಕೊಳ್ಳುವ ಸೂಚನೆ ಲಭಿಸಿದೆ. ಷಡ್ಯಂತ್ರ ಮತ್ತು ವಿದೇಶಿ ಫಂಡಿಂಗ್ ವಿಚಾರದಲ್ಲಿ ಸ್ಥಳೀಯ ಪೊಲೀಸರು ಇಡಿಗೆ ದಾಖಲೆಗಳನ್ನು ಸಲ್ಲಿಸಿದ್ದು, ಅಧಿಕಾರಿಗಳು ಪ್ರತ್ಯೇಕ ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಲಿದ್ದಾರೆ.
ಫಾರಿನ್ ಎಕ್ಸ್ ಚೇಂಜ್ ಮ್ಯಾನೇಜ್ಮೆಂಟ್ ಏಕ್ಟ್ ನಡಿ ಇಡಿ ಕೇಸು ದಾಖಲಿಸಿಕೊಂಡು ತನಿಖೆ ನಡೆಸಲಿದೆ. ಒಡನಾಡಿ ಮತ್ತು ಸಂವಾದ ಎನ್ನುವ ಎರಡು ಎನ್ ಜಿಓಗಳ ಬಗ್ಗೆ ತನಿಖೆ ನಡೆಸಲಿದ್ದು, ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಮತ್ತು ಅಪಪ್ರಚಾರ ನಡೆಸಲು ವಿದೇಶದಿಂದ ಅಕ್ರಮವಾಗಿ ಹಣಕಾಸು ನೆರವು ಪಡೆದಿದ್ದಾರೆಂಬ ಆರೋಪದಲ್ಲಿ ತನಿಖೆ ನಡೆಯಲಿದೆ.
ಎನ್ ಜಿಓಗಳು ಮತ್ತು ಹೋರಾಟಕ್ಕೆ ಸಂಬಂಧಿಸಿದವರ ಐದು ವರ್ಷಗಳ ಬ್ಯಾಂಕ್ ವಹಿವಾಟು, ಇನ್ನಿತರ ಬ್ಯಾಂಕ್ ಚಟುವಟಿಕೆಗಳು, ಪಾನ್ ಕಾರ್ಡ್ ಮಾಹಿತಿಗಳನ್ನು ನೀಡುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಇಡಿ ಪತ್ರ ಬರೆದಿದೆ ಎಂಬುದಾಗಿ ಇಂಡಿಯಾ ಟುಡೇ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.
ರಾಜ್ಯ ಬಿಜೆಪಿ ವತಿಯಿಂದ ಧರ್ಮಸ್ಥಳ ವಿರುದ್ಧ ಷಡ್ಯಂತ್ರ ನಡೆಸಿದವರ ಬಗ್ಗೆ ಎನ್ಐಎ ತನಿಖೆ ಆಗಬೇಕೆಂದು ಧರ್ಮಸ್ಥಳ ಚಲೋ ನಡೆದಿತ್ತು. ಎಸ್ಐಟಿ ಬಗ್ಗೆ ನಂಬಿಕೆ ಇಲ್ಲ. ಆಡಳಿತ ಪಕ್ಷದವರೇ ಷಡ್ಯಂತ್ರ ಇದೆ ಎಂದಿದ್ದಾರೆ. ಇದರ ಮೇಲೆ ರಾಜ್ಯದ ತನಿಖಾ ಏಜನ್ಸಿಯಿಂದ ವಿದೇಶಿ ಫಂಡಿಂಗ್ ಪತ್ತೆ ಮಾಡಲು ಸಾಧ್ಯವೇ ಇತ್ಯಾದಿ ಪ್ರಶ್ನೆಗಳನ್ನು ಬಿಜೆಪಿ ನಾಯಕರು ಎತ್ತಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಸಿಎಂ ಸಿದ್ದರಾಮಯ್ಯ, ಎಸ್ಐಟಿ ತನಿಖೆ ನಡೆಯುತ್ತಿದೆ, ಹಾಗಿರುವಾಗ ಎನ್ಐಎ ತನಿಖೆ ನಡೆಸುವ ಅಗತ್ಯವಿಲ್ಲ. ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ಮಾಡುತ್ತಿದ್ದಾರೆ ಎಂದಿದ್ದರು.
ಧರ್ಮಸ್ಥಳ ಪ್ರಕರಣದಲ್ಲಿ ವಿದೇಶದಿಂದ ಫಂಡಿಂಗ್ ಆಗಿದೆ, ಅಪಪ್ರಚಾರ, ಹಿಂದು ಶ್ರದ್ಧಾಕೇಂದ್ರಗಳನ್ನು ಗುರಿಯಾಗಿಸಿ ಈ ಫಂಡಿಂಗ್ ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಪುಕಾರು ಹಬ್ಬಿಸಿದ್ದಾರೆ. ಇದೇ ವೇಳೆ, ಬೆಂಗಳೂರಿನ ಸುರೇಶ್ ಗೌಡ ಎಂಬವರು ಇಡಿ ಕಚೇರಿಗೆ ದೂರು ಕೊಟ್ಟು ತನಿಖೆಗೆ ಆಗ್ರಹ ಮಾಡಿದ್ದರು. ನಕಲಿ ಮಾನವ ಹಕ್ಕು ಆಯೋಗದ ಬಗ್ಗೆ ತನಿಖೆ ಮಾಡುವಂತೆಯೂ ರಾಜ್ಯ ಮಾನವ ಹಕ್ಕು ಆಯೋಗಕ್ಕೆ ಸುರೇಶ್ ದೂರು ನೀಡಿದ್ದರು.
The Enforcement Directorate (ED) has entered the Dharmasthala case, opening a separate FIR to investigate allegations of foreign funding and conspiracy. Local police have already submitted relevant documents to the central agency, prompting ED to begin its own probe under the Foreign Exchange Management Act (FEMA).
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm