ಬ್ರೇಕಿಂಗ್ ನ್ಯೂಸ್
02-09-25 08:00 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2: ಸಾಮಾನ್ಯವಾಗಿ ನಗರ ಪ್ರದೇಶಗಳಲ್ಲದೇ ಪಟ್ಟಣ ಪ್ರದೇಶಗಳಲ್ಲಿಯೂ ಶಾಲೆಗಳಿಗೆ ಮಕ್ಕಳನ್ನು ಶಾಲಾ ವಾಹನ ಇಲ್ಲವೇ ಖಾಸಗಿ ವಾಹನಗಳಲ್ಲಿ ಕಳುಹಿಸುತ್ತಾರೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡ ಮಕ್ಕಳ ಕಳ್ಳರ ಗ್ಯಾಂಗ್, ಶಾಲಾ ವಾಹನದ ನೆಪದಲ್ಲಿ ಮಕ್ಕಳನ್ನು ಕಿಡ್ನಾಪ್ ಮಾಡುತ್ತಿರುವ ವಿಚಾರ ಉತ್ತರ ಭಾರತದಲ್ಲಿ ಬೆಳಕಿಗೆ ಬಂದಿದೆ. ಇದರ ಬಗ್ಗೆ ನಟ ಮಾಸ್ಟರ್ ಆನಂದ್ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಎಚ್ಚರಿಕೆ ನೀಡಿದ್ದಾರೆ. ಹಿಂದಿಯಲ್ಲಿ ಬಂದಿರುವ ಸುದ್ದಿಯೊಂದನ್ನು ಉಲ್ಲೇಖಿಸಿರುವ ಮಾಸ್ಟರ್ ಆನಂದ್, ಸಾಮಾನ್ಯವಾಗಿ ಮಕ್ಕಳನ್ನು ಶಾಲೆಗೆ ಕಳುಹಿಸುವ ವಿಚಾರದಲ್ಲಿ ಧಾವಂತದಲ್ಲಿ ಇರುತ್ತಾರೆ. ಇದನ್ನೇ ಲಕ್ನೋದಲ್ಲಿ ಕಳ್ಳರ ಗ್ಯಾಂಗ್ ಬಂಡವಾಳ ಮಾಡಿಕೊಂಡು ಅದೇ ರೀತಿಯ ವಾಹನ ತಂದು ಮಕ್ಕಳನ್ನು ಕದಿಯೋಕೆ ನೋಡಿದ್ದಾರೆ ಎಂದು ವಿವರಿಸಿದ್ದಾರೆ.
ಸಾಮಾನ್ಯವಾಗಿ ಶಾಲೆಗೆ ಮಕ್ಕಳನ್ನು ಕರೆದುಕೊಂಡು ಹೋಗುವ ವ್ಯಾನ್ಗಳು ನಿಗದಿತ ಸಮಯಕ್ಕಿಂತ ಸ್ವಲ್ಪ ಹೆಚ್ಚೂ ಕಡಿಮೆ ಬರುವುದು ಸಾಮಾನ್ಯ. ನಿಗದಿತ ವಾಹನ ಬರುವುದಕ್ಕಿಂತ ಸ್ವಲ್ಪ ಮುಂಚೆಯೇ ಕಳ್ಳರ ಗ್ಯಾಂಗ್ ಬಂದು ಹಾರ್ನ್ ಮಾಡುತ್ತದೆ. ಶಾಲಾ ವಾಹನ ಬಂತೆಂದು ಅದನ್ನು ನೋಡದೆ ಮಕ್ಕಳನ್ನು ಕಳಿಸಿಕೊಡುತ್ತಾರೆ. ಎಂದಿನ ಡ್ರೈವರ್ ಬಂದಿಲ್ಲ, ಅವರಿಗೆ ಉಷಾರಿಲ್ಲ ಅಂತ ನೆಪ ಹೇಳಿ ಮಕ್ಕಳನ್ನು ಕರೆದುಕೊಂಡು ಹೋಗುತ್ತಾರೆ.
ಇಂಥದ್ದೇ ಘಟನೆ ಲಕ್ನೋದಲ್ಲಿ ನಡೆದಿರುವ ಬಗ್ಗೆ ಮಾಸ್ಟರ್ ಆನಂದ್ ಹೇಳಿದ್ದಾರೆ. ಮಕ್ಕಳನ್ನು ತುಂಬಿಸಿಕೊಂಡು ಶಾಲೆಯ ವಾಹನ ಬಂದ ಸಂದರ್ಭದಲ್ಲಿ ಮಹಿಳೆಯೊಬ್ಬರಿಗೆ ಡೌಟ್ ಬಂದು ನಿಜವಾದ ಡ್ರೈವರ್ಗೆ ಕರೆ ಮಾಡಿದಾಗ, ಆತ ತಾನು ತಡವಾಗಿ ಬರುತ್ತಿರುವುದಾಗಿ ಹೇಳಿದ್ದರಿಂದ ಮೋಸದಾಟ ಬಯಲಾಗಿದೆ. ಆದರೆ ಈ ರೀತಿ ನಿಮ್ಮ ಮಕ್ಕಳಿಗೂ ಆಗಬಹುದು. ಆದ್ದರಿಂದ ಚಾಲಕರು ಬೇರೆ ಬಂದಿದ್ದರೆ ಅಥವಾ ಇನ್ನಾವುದೇ ರೀತಿಯಲ್ಲಿ ಸಂದೇಹ ಬಂದರೆ ಚೆಕ್ ಮಾಡಿ. ಮಕ್ಕಳನ್ನು ಬೇರೆ ವಾಹನಗಳಿಗೆ ಕಳುಹಿಸುವ ಮುನ್ನ ಎಚ್ಚರಿಕೆಯಿಂದ ಇರಿ ಎಂದು ಮಾಸ್ಟರ್ ಆನಂದ್ ಸಲಹೆ ಮಾಡಿದ್ದಾರೆ.
In a disturbing new trend, child kidnappers are reportedly disguising themselves as school van drivers to abduct children, a modus operandi that recently surfaced in North India. Actor Master Anand has issued a public warning about such incidents via his Instagram account.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 10:01 pm
Mangalore Correspondent
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm