ಬ್ರೇಕಿಂಗ್ ನ್ಯೂಸ್
03-09-25 01:36 pm HK News Desk ಕರ್ನಾಟಕ
ಮೂಡುಬಿದ್ರೆ, ಸೆ.3 : ಗಂಡ- ಹೆಂಡತಿ ಜಗಳ ವಿಚಾರದಲ್ಲಿ ದೂರು ನೀಡಲು ಬಂದಿದ್ದ ಮಹಿಳೆಯೊಬ್ಬರಿಗೆ ಕರೆ ಮಾಡಿ ಕಿರುಕುಳ ನೀಡಿದ ಆರೋಪದಲ್ಲಿ ಮೂಡುಬಿದ್ರೆ ಠಾಣೆಯ ಕಾನ್ಸ್ ಟೇಬಲ್ ಒಬ್ಬಾತನನ್ನು ಅದೇ ಠಾಣೆಯ ಪೊಲೀಸರು ಎಫ್ಐಆರ್ ದಾಖಲಿಸಿ ಅರೆಸ್ಟ್ ಮಾಡಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಾನ್ಸ್ಟೇಬಲ್ ಶಾಂತಪ್ಪ(28) ಬಂಧಿತ ಆರೋಪಿ.
ಮಹಿಳೆಯೊಬ್ಬರು ಮೂಡುಬಿದ್ರೆ ಠಾಣೆಗೆ ಬಂದು ದೂರು ನೀಡಿದ್ದು ಈ ವೇಳೆ ಠಾಣೆಯ ಹೊರಗಡೆ ಡೈರಿ ಪುಸ್ತಕದಲ್ಲಿ ಹೆಸರು, ವಿಳಾಸ, ಬಂದಿರುವ ಕಾರಣ ಬರೆಯಬೇಕಾಗುತ್ತದೆ. ಮಹಿಳೆಯ ದೂರು ಪರಿಗಣಿಸಿ ಪೊಲೀಸ್ ಇನ್ಸ್ ಪೆಕ್ಟರ್ ಸಂದೇಶ್, ಪತಿ- ಪತ್ನಿಯನ್ನು ಬರಹೇಳಿ ಬುದ್ಧಿವಾದ ಹೇಳಿ ಕಳುಹಿಸಿದ್ದರು. ಆದರೆ ಎರಡು ದಿನಗಳ ಬಳಿಕ ಡೈರಿಯಲ್ಲಿದ್ದ ಮೊಬೈಲ್ ನಂಬರ್ ಪಡೆದು ಮಹಿಳೆಗೆ ಕರೆ ಮಾಡಿದ್ದ ಕಾನ್ಸ್ ಟೇಬಲ್ ಶಾಂತಪ್ಪ, ನೀನು ಬಾರೀ ಚಂದ ಇದ್ದೀಯಾ.. ಗಂಡ ಇಲ್ಲದಿದ್ದರೆ ಯಾಕೆ ಚಿಂತೆ ಮಾಡ್ತೀಯಾ.. ಎಂದು ಹೇಳಿ ಫೋನ್ ಮಾಡಿ ಕಿರುಕುಳ ನೀಡಿದ್ದಾನೆ.
ಪದೇ ಪದೇ ಕರೆ ಮಾಡಿ ಕಿರುಕುಳ ನೀಡಿದ್ದರಿಂದ ಬೇಸತ್ತ ಮಹಿಳೆ, ಆತನ ಕರೆಯನ್ನು ರೆಕಾರ್ಡ್ ಮಾಡಿಕೊಂಡು ಬಂದು ಅದೇ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಹೊಸ ಕಮಿಷನರ್ ಸುಧೀರ್ ರೆಡ್ಡಿ ಬಂದ ಬಳಿಕ ಠಾಣೆಯ ಪ್ರತಿ ದಿನದ ಆಗುಹೋಗು ಬಗ್ಗೆ ದಿನವೂ ರಿಪೋರ್ಟ್ ಕೊಡಬೇಕಾಗಿದೆ. ಮಹಿಳೆಯ ದೂರಿನ ಬಗ್ಗೆ ಹೇಳಿದಾಗ, ಕಾನೂನು ಎಲ್ಲರಿಗೂ ಒಂದೇ, ಎಫ್ಐಆರ್ ಮಾಡಿ ಅರೆಸ್ಟ್ ಮಾಡುವಂತೆ ಸೂಚನೆ ನೀಡಿದ್ದಾರೆ. ಇದರಂತೆ, ಮೂಡುಬಿದ್ರೆ ಠಾಣೆಯಲ್ಲೇ ಎಫ್ಐಆರ್ ಮಾಡಿ ಅದೇ ಠಾಣೆಯ ಕಾನ್ಸ್ ಟೇಬಲ್ ನನ್ನು ಬಂಧಿಸಿ ಕೋರ್ಟಿಗೆ ಹಾಜರುಪಡಿಸಲಾಗಿದೆ. ಕೋರ್ಟ್ ಮಧ್ಯಂತರ ಜಾಮೀನು ನೀಡಿ ಬಿಡುಗಡೆ ಮಾಡಿದೆ. ಆದರೆ ಎಫ್ಐಆರ್ ಆಗಿದ್ದರಿಂದ ಕಾನ್ಸ್ ಟೇಬಲ್ ನನ್ನು ಪೊಲೀಸ್ ಕಮಿಷನರ್ ಸಸ್ಪೆಂಡ್ ಮಾಡಿದ್ದಾರೆ.
ಸಾಮಾನ್ಯವಾಗಿ ಇಂಥ ಪ್ರಕರಣದಲ್ಲಿ ಪೇದೆಗಳನ್ನು ಜೋರು ಮಾಡಿ ಬಿಡೋದು ಅಥವಾ ಅಮಾನತು ಮಾಡಿಯೋ, ಬೇರೆ ಠಾಣೆಗೆ ವರ್ಗಾವಣೆ ಮಾಡಿ ಕಳಿಸೋದು ಮಾಡುತ್ತಾರೆ. ಈಗಿನ ಕಮಿಷನರ್ ಕಾನೂನು ಎಲ್ಲರಿಗೂ ಒಂದೇ ಎಂದು ಹೇಳಿ ಪೊಲೀಸರಿಗೇ ಬಿಸಿ ಮುಟ್ಟಿಸಿದ್ದಾರೆ. ಶಾಂತಪ್ಪ ಪೊಲೀಸ್ ಇಲಾಖೆಯ ತರಬೇತಿ ಮುಗಿಸಿ ಮೂಡುಬಿದ್ರೆ ಠಾಣೆಯಲ್ಲಿ 2022ರಲ್ಲಿ ಮೊದಲ ಬಾರಿಗೆ ಸೇವೆಗೆ ಸೇರಿದ್ದ. ಮೂರು ವರ್ಷದ ಬಳಿಕ ಮಾಡಬಾರದ್ದನ್ನು ಮಾಡಲು ಹೋಗಿ ಅರೆಸ್ಟ್ ಆಗಿದ್ದಾನೆ.
In a shocking incident, a police constable from Moodbidri station has been arrested for allegedly harassing a woman who had earlier visited the station to file a complaint regarding a domestic dispute. The accused has been identified as Constable Shantappa (28), a native of Kushtagi taluk in Koppal district.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm