ಬ್ರೇಕಿಂಗ್ ನ್ಯೂಸ್
03-09-25 08:35 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.3 : ಧರ್ಮಸ್ಥಳ ಚಲೋ ನಡೆಸಿದ ಬಿಜೆಪಿ ನಾಯಕರಿದ್ದ ವಿಡಿಯೋವನ್ನು ತಿರುಚಿ, ಹೆಣ್ಣಿಗೆ ನ್ಯಾಯ ಕೊಡದೆ ಧರ್ಮದ ವಿಚಾರದಲ್ಲಿ ದೊಂಬರಾಟ ಎಂದು ಬರೆದು ಅಣಕಿಸಿ ಇನ್ಸ್ ಟಾ ಗ್ರಾಮ್ ಖಾತೆಯಲ್ಲಿ ಹಂಚಿಕೊಂಡ ಘಟನೆ ಬಗ್ಗೆ ರಾಜ್ಯ ಬಿಜೆಪಿಯಿಂದ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಮಾಜಿ ಡಿಸಿಎಂ ಅಶ್ವತ್ಥ ನಾರಾಯಣ್ ನೇತೃತ್ವದಲ್ಲಿ ಬಿಜೆಪಿ ನಾಯಕರು ದೂರು ನೀಡಿದ್ದು ವಿಡಿಯೋದಲ್ಲಿ ಹಾನಿಕಾರಕ ಕಂಟೆಂಟ್ ಹಾಕಿದ್ದರೂ ಗೃಹ ಇಲಾಖೆ ಇದರ ಬಗ್ಗೆ ಕ್ರಮ ಕೈಗೊಳ್ಳಲು ನಿರ್ಲಕ್ಷ್ಯ ವಹಿಸಿದೆ ಎಂದು ಹೇಳಿದ್ದಾರೆ.
ದೂರು ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸೌಜನ್ಯಾಗೆ ನ್ಯಾಯ ದೊರಕಿಸುವ ವಿಚಾರದಲ್ಲಿ ಯಾವುದೇ ಒಳ ಒಪ್ಪಂದದ ನಡೆ ಇಲ್ಲ. ಸೌಜನ್ಯಾ ತಾಯಿ ಇಟ್ಟಿರುವ ಬೇಡಿಕೆ ಪರವಾಗಿ ಇರುವುದಾಗಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಅವರ ಮನೆಗೂ ಭೇಟಿ ಕೊಟ್ಟು ಹೋರಾಟಕ್ಕೆ ಬೆಂಬಲ ಇದೆಯೆಂದು ತಿಳಿಸಿದ್ದಾರೆ ಎಂದರು.
ಧರ್ಮದ ವಿಚಾರದಲ್ಲಿ ಇಂಥ ಹುಡುಗಾಟ ಮಾಡಿದರೆ, ನಾವು ಸಹಿಸುವುದಿಲ್ಲ. ಸರ್ಕಾರದ ವಿರುದ್ಧ ಬೇರೆ ಯಾವುದೇ ಸಾಮಾಜಿಕ ಜಾಲತಾಣದ ಪೋಸ್ಟ್ ಬಂದಾಗ ತಕ್ಷಣ ಬಂಧಿಸುತ್ತಾರೆ. ಸಂಬಂಧಿತ ವ್ಯಕ್ತಿಯ ಮೇಲೆ ಕೂಡಲೇ ಕೇಸ್ ದಾಖಲಿಸಬೇಕು. ಸೋಷಿಯಲ್ ಮೀಡಿಯಾದಲ್ಲಿ ಹಾಕಿರುವ ವಿಡಿಯೋವನ್ನು ತಕ್ಷಣ ತೆಗೆಯಬೇಕು ಎಂದು ಒತ್ತಾಯಿಸಿದರು.
ಧರ್ಮಸ್ಥಳ ವಿಚಾರದಲ್ಲಿ ಬಿಜೆಪಿ ನ್ಯಾಯಬದ್ಧವಾಗಿ ಹೋರಾಟ ಮಾಡಿದೆ. ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಗೆ ಯಾರೇ ಅಗೌರವ ತರಲು ಪ್ರಯತ್ನ ಪಟ್ಟರೂ ನಾವು ಸಹಿಸುವುದಿಲ್ಲ ಎಂದು ಎಚ್ಚರಿಸಿದರು. ಷಡ್ಯಂತ್ರ ವಿರೋಧಿಸಿ ಮತ್ತು ಸರಕಾರಕ್ಕೆ ಸ್ಪಷ್ಟ ಸಂದೇಶ ರವಾನಿಸಲು ನಾವು ಧರ್ಮಸ್ಥಳ ಚಲೋ ಹಮ್ಮಿಕೊಂಡಿದ್ದೆವು ಎಂದು ವಿವರಿಸಿದರು.
The Karnataka unit of the Bharatiya Janata Party (BJP) has lodged a complaint at the Upparpet Police Station in Bengaluru against a social media post that allegedly mocked the party’s ‘Dharmasthala Chalo’ protest.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 05:39 pm
HK News Staffer
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm