ಬ್ರೇಕಿಂಗ್ ನ್ಯೂಸ್
03-09-25 08:35 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.3 : ಧರ್ಮಸ್ಥಳ ಚಲೋ ನಡೆಸಿದ ಬಿಜೆಪಿ ನಾಯಕರಿದ್ದ ವಿಡಿಯೋವನ್ನು ತಿರುಚಿ, ಹೆಣ್ಣಿಗೆ ನ್ಯಾಯ ಕೊಡದೆ ಧರ್ಮದ ವಿಚಾರದಲ್ಲಿ ದೊಂಬರಾಟ ಎಂದು ಬರೆದು ಅಣಕಿಸಿ ಇನ್ಸ್ ಟಾ ಗ್ರಾಮ್ ಖಾತೆಯಲ್ಲಿ ಹಂಚಿಕೊಂಡ ಘಟನೆ ಬಗ್ಗೆ ರಾಜ್ಯ ಬಿಜೆಪಿಯಿಂದ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಮಾಜಿ ಡಿಸಿಎಂ ಅಶ್ವತ್ಥ ನಾರಾಯಣ್ ನೇತೃತ್ವದಲ್ಲಿ ಬಿಜೆಪಿ ನಾಯಕರು ದೂರು ನೀಡಿದ್ದು ವಿಡಿಯೋದಲ್ಲಿ ಹಾನಿಕಾರಕ ಕಂಟೆಂಟ್ ಹಾಕಿದ್ದರೂ ಗೃಹ ಇಲಾಖೆ ಇದರ ಬಗ್ಗೆ ಕ್ರಮ ಕೈಗೊಳ್ಳಲು ನಿರ್ಲಕ್ಷ್ಯ ವಹಿಸಿದೆ ಎಂದು ಹೇಳಿದ್ದಾರೆ.
ದೂರು ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸೌಜನ್ಯಾಗೆ ನ್ಯಾಯ ದೊರಕಿಸುವ ವಿಚಾರದಲ್ಲಿ ಯಾವುದೇ ಒಳ ಒಪ್ಪಂದದ ನಡೆ ಇಲ್ಲ. ಸೌಜನ್ಯಾ ತಾಯಿ ಇಟ್ಟಿರುವ ಬೇಡಿಕೆ ಪರವಾಗಿ ಇರುವುದಾಗಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಅವರ ಮನೆಗೂ ಭೇಟಿ ಕೊಟ್ಟು ಹೋರಾಟಕ್ಕೆ ಬೆಂಬಲ ಇದೆಯೆಂದು ತಿಳಿಸಿದ್ದಾರೆ ಎಂದರು.
ಧರ್ಮದ ವಿಚಾರದಲ್ಲಿ ಇಂಥ ಹುಡುಗಾಟ ಮಾಡಿದರೆ, ನಾವು ಸಹಿಸುವುದಿಲ್ಲ. ಸರ್ಕಾರದ ವಿರುದ್ಧ ಬೇರೆ ಯಾವುದೇ ಸಾಮಾಜಿಕ ಜಾಲತಾಣದ ಪೋಸ್ಟ್ ಬಂದಾಗ ತಕ್ಷಣ ಬಂಧಿಸುತ್ತಾರೆ. ಸಂಬಂಧಿತ ವ್ಯಕ್ತಿಯ ಮೇಲೆ ಕೂಡಲೇ ಕೇಸ್ ದಾಖಲಿಸಬೇಕು. ಸೋಷಿಯಲ್ ಮೀಡಿಯಾದಲ್ಲಿ ಹಾಕಿರುವ ವಿಡಿಯೋವನ್ನು ತಕ್ಷಣ ತೆಗೆಯಬೇಕು ಎಂದು ಒತ್ತಾಯಿಸಿದರು.
ಧರ್ಮಸ್ಥಳ ವಿಚಾರದಲ್ಲಿ ಬಿಜೆಪಿ ನ್ಯಾಯಬದ್ಧವಾಗಿ ಹೋರಾಟ ಮಾಡಿದೆ. ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಗೆ ಯಾರೇ ಅಗೌರವ ತರಲು ಪ್ರಯತ್ನ ಪಟ್ಟರೂ ನಾವು ಸಹಿಸುವುದಿಲ್ಲ ಎಂದು ಎಚ್ಚರಿಸಿದರು. ಷಡ್ಯಂತ್ರ ವಿರೋಧಿಸಿ ಮತ್ತು ಸರಕಾರಕ್ಕೆ ಸ್ಪಷ್ಟ ಸಂದೇಶ ರವಾನಿಸಲು ನಾವು ಧರ್ಮಸ್ಥಳ ಚಲೋ ಹಮ್ಮಿಕೊಂಡಿದ್ದೆವು ಎಂದು ವಿವರಿಸಿದರು.
The Karnataka unit of the Bharatiya Janata Party (BJP) has lodged a complaint at the Upparpet Police Station in Bengaluru against a social media post that allegedly mocked the party’s ‘Dharmasthala Chalo’ protest.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm