ಬ್ರೇಕಿಂಗ್ ನ್ಯೂಸ್
03-09-25 08:35 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.3 : ಧರ್ಮಸ್ಥಳ ಚಲೋ ನಡೆಸಿದ ಬಿಜೆಪಿ ನಾಯಕರಿದ್ದ ವಿಡಿಯೋವನ್ನು ತಿರುಚಿ, ಹೆಣ್ಣಿಗೆ ನ್ಯಾಯ ಕೊಡದೆ ಧರ್ಮದ ವಿಚಾರದಲ್ಲಿ ದೊಂಬರಾಟ ಎಂದು ಬರೆದು ಅಣಕಿಸಿ ಇನ್ಸ್ ಟಾ ಗ್ರಾಮ್ ಖಾತೆಯಲ್ಲಿ ಹಂಚಿಕೊಂಡ ಘಟನೆ ಬಗ್ಗೆ ರಾಜ್ಯ ಬಿಜೆಪಿಯಿಂದ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಮಾಜಿ ಡಿಸಿಎಂ ಅಶ್ವತ್ಥ ನಾರಾಯಣ್ ನೇತೃತ್ವದಲ್ಲಿ ಬಿಜೆಪಿ ನಾಯಕರು ದೂರು ನೀಡಿದ್ದು ವಿಡಿಯೋದಲ್ಲಿ ಹಾನಿಕಾರಕ ಕಂಟೆಂಟ್ ಹಾಕಿದ್ದರೂ ಗೃಹ ಇಲಾಖೆ ಇದರ ಬಗ್ಗೆ ಕ್ರಮ ಕೈಗೊಳ್ಳಲು ನಿರ್ಲಕ್ಷ್ಯ ವಹಿಸಿದೆ ಎಂದು ಹೇಳಿದ್ದಾರೆ.
ದೂರು ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸೌಜನ್ಯಾಗೆ ನ್ಯಾಯ ದೊರಕಿಸುವ ವಿಚಾರದಲ್ಲಿ ಯಾವುದೇ ಒಳ ಒಪ್ಪಂದದ ನಡೆ ಇಲ್ಲ. ಸೌಜನ್ಯಾ ತಾಯಿ ಇಟ್ಟಿರುವ ಬೇಡಿಕೆ ಪರವಾಗಿ ಇರುವುದಾಗಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಅವರ ಮನೆಗೂ ಭೇಟಿ ಕೊಟ್ಟು ಹೋರಾಟಕ್ಕೆ ಬೆಂಬಲ ಇದೆಯೆಂದು ತಿಳಿಸಿದ್ದಾರೆ ಎಂದರು.
ಧರ್ಮದ ವಿಚಾರದಲ್ಲಿ ಇಂಥ ಹುಡುಗಾಟ ಮಾಡಿದರೆ, ನಾವು ಸಹಿಸುವುದಿಲ್ಲ. ಸರ್ಕಾರದ ವಿರುದ್ಧ ಬೇರೆ ಯಾವುದೇ ಸಾಮಾಜಿಕ ಜಾಲತಾಣದ ಪೋಸ್ಟ್ ಬಂದಾಗ ತಕ್ಷಣ ಬಂಧಿಸುತ್ತಾರೆ. ಸಂಬಂಧಿತ ವ್ಯಕ್ತಿಯ ಮೇಲೆ ಕೂಡಲೇ ಕೇಸ್ ದಾಖಲಿಸಬೇಕು. ಸೋಷಿಯಲ್ ಮೀಡಿಯಾದಲ್ಲಿ ಹಾಕಿರುವ ವಿಡಿಯೋವನ್ನು ತಕ್ಷಣ ತೆಗೆಯಬೇಕು ಎಂದು ಒತ್ತಾಯಿಸಿದರು.
ಧರ್ಮಸ್ಥಳ ವಿಚಾರದಲ್ಲಿ ಬಿಜೆಪಿ ನ್ಯಾಯಬದ್ಧವಾಗಿ ಹೋರಾಟ ಮಾಡಿದೆ. ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಗೆ ಯಾರೇ ಅಗೌರವ ತರಲು ಪ್ರಯತ್ನ ಪಟ್ಟರೂ ನಾವು ಸಹಿಸುವುದಿಲ್ಲ ಎಂದು ಎಚ್ಚರಿಸಿದರು. ಷಡ್ಯಂತ್ರ ವಿರೋಧಿಸಿ ಮತ್ತು ಸರಕಾರಕ್ಕೆ ಸ್ಪಷ್ಟ ಸಂದೇಶ ರವಾನಿಸಲು ನಾವು ಧರ್ಮಸ್ಥಳ ಚಲೋ ಹಮ್ಮಿಕೊಂಡಿದ್ದೆವು ಎಂದು ವಿವರಿಸಿದರು.
The Karnataka unit of the Bharatiya Janata Party (BJP) has lodged a complaint at the Upparpet Police Station in Bengaluru against a social media post that allegedly mocked the party’s ‘Dharmasthala Chalo’ protest.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm