ಬ್ರೇಕಿಂಗ್ ನ್ಯೂಸ್
05-09-25 05:40 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.5 : ಡಿಸಿಎಂ ಡಿಕೆ ಶಿವಕುಮಾರ್ ಅವರ ಬೆಂಬಲಿಗರ ವಿರುದ್ಧದ ಪ್ರಕರಣಗಳು ಸೇರಿ ರಾಜ್ಯದ ನಾನಾ ಭಾಗಗಳಲ್ಲಿ ಕಾಂಗ್ರೆಸ್ ಮುಖಂಡರು, ಶಾಸಕರ ವಿರುದ್ಧ ದಾಖಲಾದ ಒಟ್ಟು 62 ಪ್ರಕರಣಗಳನ್ನ ಹಿಂಪಡೆಯುವ ನಿರ್ಣಯವನ್ನು ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿದೆ.
ಜಾರಿ ನಿರ್ದೇಶನಾಲಯದ ಅಧಿಕಾರಿಗಳು 2019ರಲ್ಲಿ ಡಿಕೆ ಶಿವಕುಮಾರ್ ಅವರನ್ನು ಬಂಧಿಸಿದ ಸಂದರ್ಭದಲ್ಲಿ ದಾಂಧಲೆ ನಡೆಸಿದ ಬೆಂಬಲಿಗರ ವಿರುದ್ಧ ಸಾತನೂರು, ಕೋಡಿಹಳ್ಳಿ ಸೇರಿ ರಾಮನಗರ ಜಿಲ್ಲೆಯ ನಾನಾ ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಇದು ಸೇರಿದಂತೆ ರೈತ ಮುಖಂಡರು, ನಾನಾ ಸಂಘಟನೆಗಳ ಮುಖಂಡರ ವಿರುದ್ಧದ ಮೊಕದ್ದಮೆಗಳನ್ನು ಕೈಬಿಡುವ ನಿರ್ಣಯವನ್ನು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್ ಸಭೆ ತೆಗೆದುಕೊಂಡಿದೆ. ಡಿಕೆ ಶಿವಕುಮಾರ್ ಬೆಂಬಲಿಗರ ವಿರುದ್ಧದ ಹತ್ತಾರು ಪ್ರಕರಣಗಳು ಸೇರಿದಂತೆ ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರ ವಿರುದ್ಧ ನಾನಾ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆಗಳೇ ಇದರಲ್ಲಿ ಹೆಚ್ಚಿವೆ.
ಜವಳಿ, ಎಪಿಎಂಸಿ ಹಾಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ವಿರುದ್ಧ ವಿಜಯಪುರ ಜಿಲ್ಲೆ ಕೊಲ್ಹಾರ ಪೊಲೀಸ್ ಠಾಣೆಯಲ್ಲಿ 2021ರಲ್ಲಿ ದಾಖಲಾಗಿದ್ದ ಪ್ರಕರಣ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ವಿರುದ್ಧ ರಾಯಚೂರಿನ ಬಳಗಾನೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ, ಕೃಷ್ಣರಾಜನಗರ ಕ್ಷೇತ್ರದ ಶಾಸಕ ರವಿಶಂಕರ್ ವಿರುದ್ಧ ಕೆ.ಆರ್.ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ, ಹೊನ್ನಾಳಿ ಕ್ಷೇತ್ರದ ಶಾಸಕ ಡಿ.ಜಿ.ಶಾಂತನಗೌಡ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಗಳನ್ನು ಅಭಿಯೋಜನೆಯಿಂದ ಹಿಂಪಡೆಯಲಾಗಿದೆ.
ಎಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು ವಿರುದ್ಧದ ಪ್ರಕರಣ, ಕೊಪ್ಪಳದ ಶಾಸಕ ರಾಘವೇಂದ್ರ ಹಿಟ್ನಾಳ್ ವಿರುದ್ಧ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಹಾಗೂ ಮಾಜಿ ಸಚಿವ ಎಚ್.ವೈ.ಮೇಟಿ ವಿರುದ್ಧ ಬಾದಾಮಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಗಳು, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮನೋರಾಜ್ ರಾಜೀವ್, ಔರಾದ್ ತಾಲೂಕು ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರವೀಣ್ ಕುಮಾರ್, ಬೆಂಗಳೂರು ದಕ್ಷಿಣ ಡಿಸಿಸಿ ಅಧ್ಯಕ್ಷ ಜಿ.ಕೃಷ್ಣಪ್ಪ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ವಾಪಸ್ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ.
ರಾಜ್ಯ ರೈತ ಸಂಘದ ಬಡಗಲಪುರ ನಾಗೇಂದ್ರ ವಿರುದ್ಧ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ, ರೈತ ಸಂಘದ ಗುಂಡ್ಲುಪೇಟೆಯ ಮುಖಂಡ ಟಿ.ಎಸ್.ಶಾಂತಮಲ್ಲಪ್ಪ, ಮೈಸೂರಿನ ದಲಿತ ಸಂಘರ್ಷ ಸಮಿತಿಯ ಆಲಗೂಡು ಶಿವಕುಮಾರ್, ಕರ್ನಾಟಕ ಮೀಸಲು ಸಂರಕ್ಷಣಾ ಒಕ್ಕೂಟದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಸೇರಿದಂತೆ ಕೆಲವು ಜನಪರ ಹೋರಾಟಗಾರರ ವಿರುದ್ಧದ ಕೇಸ್ಗಳನ್ನು ಕೈಬಿಡುವ ತೀರ್ಮಾನವನ್ನು ಸಂಪುಟ ಕೈಗೊಂಡಿದೆ.
In a major decision, the Karnataka State Cabinet has approved the withdrawal of 62 criminal cases filed against various Congress leaders, MLAs, and pro-DK Shivakumar supporters across the state. The decision was taken during the Cabinet meeting chaired by Chief Minister Siddaramaiah.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm