ಬ್ರೇಕಿಂಗ್ ನ್ಯೂಸ್
05-09-25 07:55 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.5 : ರಾಜ್ಯ ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ಆರೋಪ ಕೇಳಿಬಂದ ವಾರದ ಬಳಿಕ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ್ ರಾಜೀನಾಮೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಸೂಚನೆ ಹಿನ್ನೆಲೆಯಲ್ಲಿ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಕಮಿಷನ್ ವಸೂಲಿ ಆರೋಪಕ್ಕೆ ಗುರಿಯಾಗಿರುವ ಭೋವಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್ ಗೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದರು. ಸುಮಾರು 15 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮವು ಭೂ ಒಡೆತನ ಯೋಜನೆ ಜಾರಿಗೊಳಿಸಿದ್ದು ಯೋಜನೆಯಡಿ 60 ಎಕರೆ ಭೂಮಿ ಖರೀದಿಸಿ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕಿತ್ತು.
ಆದರೆ ಫಲಾನುಭವಿಗಳಿಂದ ಶೇ.60ರಷ್ಟು ಕಮಿಷನ್ ನಿಗದಿ ಮಾಡಿರುವ ಆರೋಪ ಕೇಳಿಬಂದಿದ್ದು ಕಮಿಷನ್ ಕೇಳಿದ್ದ ವಿಡಿಯೋ ವೈರಲ್ ಆಗಿತ್ತು.
ಈ ಬಗ್ಗೆ ಮಾತನಾಡಿದ್ದ ರವಿಕುಮಾರ್, ಆರೋಪಗಳನ್ನು ತಳ್ಳಿ ಹಾಕಿದ್ದರು. ಎಐ ತಂತ್ರಜ್ಞಾನ ಬಳಸಿ ನನ್ನ ವಿರುದ್ಧ ಪಿತೂರಿ ನಡೆಸಲಾಗಿದೆ. ಆದರೂ ಪಕ್ಷಕ್ಕೆ ಮುಜುಗರ ಉಂಟಾಗುವುದನ್ನು ತಡೆಯಲು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದರು. ನಿಗಮದ ಕಚೇರಿಯಲ್ಲಿಯೇ ವಿಡಿಯೊ ಚಿತ್ರೀಕರಿಸಿರುವುದು ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಮತ್ತು ಡಿಸಿಎಂ ಅವರನ್ನು ಭೇಟಿಯಾಗಿ ವಾಸ್ತವ ಮನವರಿಕೆ ಮಾಡಿಕೊಟ್ಟು ತನಿಖೆ ನಡೆಸಲು ಮನವಿ ಮಾಡಲಿದ್ದೇನೆ ಎಂದು ತಿಳಿಸಿದರು.
A week after allegations of large-scale commission collection surfaced in the Karnataka State Bhovi Development Corporation, its chairman S. Ravikumar has tendered his resignation. The move reportedly follows instructions from Chief Minister Siddaramaiah.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm