ಬ್ರೇಕಿಂಗ್ ನ್ಯೂಸ್
05-09-25 07:55 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.5 : ರಾಜ್ಯ ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ಆರೋಪ ಕೇಳಿಬಂದ ವಾರದ ಬಳಿಕ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ್ ರಾಜೀನಾಮೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಸೂಚನೆ ಹಿನ್ನೆಲೆಯಲ್ಲಿ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಕಮಿಷನ್ ವಸೂಲಿ ಆರೋಪಕ್ಕೆ ಗುರಿಯಾಗಿರುವ ಭೋವಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್ ಗೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದರು. ಸುಮಾರು 15 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮವು ಭೂ ಒಡೆತನ ಯೋಜನೆ ಜಾರಿಗೊಳಿಸಿದ್ದು ಯೋಜನೆಯಡಿ 60 ಎಕರೆ ಭೂಮಿ ಖರೀದಿಸಿ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕಿತ್ತು.
ಆದರೆ ಫಲಾನುಭವಿಗಳಿಂದ ಶೇ.60ರಷ್ಟು ಕಮಿಷನ್ ನಿಗದಿ ಮಾಡಿರುವ ಆರೋಪ ಕೇಳಿಬಂದಿದ್ದು ಕಮಿಷನ್ ಕೇಳಿದ್ದ ವಿಡಿಯೋ ವೈರಲ್ ಆಗಿತ್ತು.
ಈ ಬಗ್ಗೆ ಮಾತನಾಡಿದ್ದ ರವಿಕುಮಾರ್, ಆರೋಪಗಳನ್ನು ತಳ್ಳಿ ಹಾಕಿದ್ದರು. ಎಐ ತಂತ್ರಜ್ಞಾನ ಬಳಸಿ ನನ್ನ ವಿರುದ್ಧ ಪಿತೂರಿ ನಡೆಸಲಾಗಿದೆ. ಆದರೂ ಪಕ್ಷಕ್ಕೆ ಮುಜುಗರ ಉಂಟಾಗುವುದನ್ನು ತಡೆಯಲು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದರು. ನಿಗಮದ ಕಚೇರಿಯಲ್ಲಿಯೇ ವಿಡಿಯೊ ಚಿತ್ರೀಕರಿಸಿರುವುದು ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಮತ್ತು ಡಿಸಿಎಂ ಅವರನ್ನು ಭೇಟಿಯಾಗಿ ವಾಸ್ತವ ಮನವರಿಕೆ ಮಾಡಿಕೊಟ್ಟು ತನಿಖೆ ನಡೆಸಲು ಮನವಿ ಮಾಡಲಿದ್ದೇನೆ ಎಂದು ತಿಳಿಸಿದರು.
A week after allegations of large-scale commission collection surfaced in the Karnataka State Bhovi Development Corporation, its chairman S. Ravikumar has tendered his resignation. The move reportedly follows instructions from Chief Minister Siddaramaiah.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm