ಬ್ರೇಕಿಂಗ್ ನ್ಯೂಸ್
07-09-25 10:17 am Bangalore Correspondent ಕರ್ನಾಟಕ
ಬೆಂಗಳೂರು, ಸೆ.7 : ಕರ್ನಾಟಕ ಪೊಲೀಸ್ ಇಲಾಖೆಯ ಮುಖ್ಯಸ್ಥರಾಗಿರುವ ಗೃಹ ಸಚಿವ ಪರಮೇಶ್ವರ್ ಅವರಿಗೇ ಪೊಲೀಸರು ದಂಡ ವಿಧಿಸಿದ್ದಾರೆ. ಅವರು ಸಂಚರಿಸುವ ವಾಹನ KA04 GB 0555 ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದಕ್ಕಾಗಿ ದಂಡ ವಿಧಿಸಲಾಗಿದ್ದು, ರಿಯಾಯಿತಿ ದರದಲ್ಲಿ 4,500 ರೂಪಾಯಿ ದಂಡವನ್ನು ಪಾವತಿಸಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ನಿನ್ನೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರಿ ಟೊಯೊಟಾ ಫಾರ್ಚುನರ್ ಕಾರ್ಗೆ ಸಂಚಾರ ನಿಯಮ ಉಲ್ಲಂಘನೆಗಾಗಿ ಬೆಂಗಳೂರು ಸಂಚಾರ ಪೊಲೀಸರು ದಂಡ ವಿಧಿಸಿದ್ದರು. ಸೀಟ್ ಬೆಲ್ಟ್ ಧರಿಸದೆ ಆರು ಬಾರಿ ಸಂಚಾರ ಮಾಡಿದ್ದ ಸಿಎಂ ಅವರ ವಾಹನಕ್ಕೆ 50% ರಿಯಾಯಿತಿ ಆಫರ್ನಡಿ 2,500 ರೂಪಾಯಿ ದಂಡವನ್ನು ವಿಧಿಸಲಾಗಿತ್ತು.
ಸಾರ್ವಜನಿಕರ ಒತ್ತಡ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ಗೆ ಒಳಗಾದ ನಂತರ ಸಿಎಂ ದಂಡವನ್ನೂ ಕಟ್ಟಿದ್ದರು. ಇದೀಗ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ವಾಹನಕ್ಕೂ ಸಂಚಾರ ನಿಯಮ ಉಲ್ಲಂಘನೆಗಾಗಿ ದಂಡ ವಿಧಿಸಲಾಗಿದೆ. ರಿಯಾಯಿತಿ ಆಧಾರದಲ್ಲಿ 4,500 ರೂಪಾಯಿ ದಂಡವನ್ನು ಪಾವತಿಸಿ, ಕಾನೂನು ಎಲ್ಲರಿಗೂ ಒಂದೇ ಎಂದು ಮಾದರಿ ಎನಿಸಿದ್ದಾರೆ.
ಜಾಲತಾಣಗಳಲ್ಲಿ ಈ ವಿಷಯ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, 'ನಿಯಮ ಎಲ್ಲರಿಗೂ ಒಂದೇ' ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ. ಬೆಂಗಳೂರು ಸಂಚಾರ ಪೊಲೀಸರ ಕಟ್ಟುನಿಟ್ಟಿನ ಕ್ರಮವನ್ನು ಕೆಲವರು ಶ್ಲಾಘಿಸಿದ್ದಾರೆ.
In a rare yet notable instance of accountability, Karnataka Home Minister Dr. G. Parameshwara has been fined by the city’s traffic police for a traffic rule violation committed by his official vehicle. The vehicle, bearing registration number KA04 GB 0555, reportedly violated traffic regulations and was issued a fine of ₹4,500, which was paid under the government’s discounted fine scheme.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm