ಬ್ರೇಕಿಂಗ್ ನ್ಯೂಸ್
08-09-25 02:41 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.8 : ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ತುಳುವನ್ನು ಘೋಷಿಸುವ ನಿಟ್ಟಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.
ಭಾನುವಾರ ಇಲ್ಲಿ ನಡೆದ ಅಷ್ಟೆಮಿದ ಐಸಿರಿ, ತುಳುವ ತಿರ್ಲ್ ಸಾಸಿರಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇತ್ತೀಚೆಗೆ ಕುಂದಾಪುರದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ. ಆ ಕಾರ್ಯಕ್ರಮ, ಈ ಕಾರ್ಯಕ್ರಮದಲ್ಲಿ ಸೇರಿರುವ ಜನ ನೋಡಿದರೆ ಮುಂದೆ ನೀವೆಲ್ಲರೂ ನಮ್ಮನ್ನು ಬೆಂಗಳೂರಿನಿಂದ ಖಾಲಿ ಮಾಡಿಸುತ್ತೀರೇನೋ ಎಂದು ಭಯವಾಗುತ್ತಿದೆ. ನಿಮ್ಮ ಈ ಶಕ್ತಿ, ಉತ್ಸಾಹ ನೋಡಿ ನನಗೆ ಈ ಅನುಮಾನ ಕಾಡುತ್ತಿದೆ ಎಂದು ಚಟಾಕಿ ಹಾರಿಸಿದರು.
ಕರಾವಳಿ ಜನ ಇಡೀ ದೇಶಕ್ಕೆ ಕರ್ನಾಟಕದ ಮೂಲಕ ಸಂಸ್ಕೃತಿ ಹಾಗೂ ಶಿಕ್ಷಣ, ಧಾರ್ಮಿಕ ಶಕ್ತಿ, ಬ್ಯಾಂಕಿಂಗ್ ವ್ಯವಸ್ಥೆ ಕೊಟ್ಟಿದ್ದಾರೆ. ಆರೋಗ್ಯ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಮುಂದೆ ಇದ್ದೀರಿ. ಕರಾವಳಿ ಭಾಗ, ದಕ್ಷಿಣ ಕನ್ನಡದ ಜನ ವಿದ್ಯಾವಂತರು, ಬುದ್ಧಿವಂತರು, ಪ್ರಜ್ಞಾವಂತರು. ನಿಮ್ಮ ಜೊತೆ ನಾನು ಇದ್ದೇನೆ ಎಂದು ಹೇಳಲು ಇಲ್ಲಿಗೆ ಬಂದಿದ್ದೇನೆ. ಡಿ.ಕೆ. ಶಿವಕುಮಾರ್ ನಿಮ್ಮವ ಎಂದು ಭಾವಿಸಿ. ನಾನು ನಿಮ್ಮ ಪರವಾಗಿದ್ದೇನೆ. ನೀವು ನನಗೆ ಬೆಂಬಲವಾಗಿರಿ. ನಾನು ನಿಮ್ಮ ಆಶೀರ್ವಾದವನ್ನಷ್ಟೇ ಕೇಳುತ್ತಿದ್ದೇನೆ ಎಂದರು.
ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗದಂತೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಲು ಆ ಭಾಗದ ಶಾಸಕರು, ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಅವರ ಜೊತೆ ನಾನು ಚರ್ಚೆ ಮಾಡಿದ್ದೇನೆ’ ಎಂದು ತಿಳಿಸಿದರು. ನಿಮ್ಮ ಸಂಸ್ಕೃತಿ, ಇತಿಹಾಸ ದೇಶದ ಯಾವುದೇ ಭಾಗದಲ್ಲೂ ಇಲ್ಲ. ನೀವೆಲ್ಲರೂ ಕರ್ನಾಟಕ ರಾಜ್ಯದ ಆಸ್ತಿ ಎಂದು ತಿಳಿಸಿದರು.
Deputy Chief Minister D.K. Shivakumar has assured that the proposal to declare Tulu as the state’s second official language will be taken up for discussion in the State Cabinet.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 09:29 pm
Mangalore Correspondent
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm