ಬ್ರೇಕಿಂಗ್ ನ್ಯೂಸ್
08-09-25 02:41 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.8 : ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ತುಳುವನ್ನು ಘೋಷಿಸುವ ನಿಟ್ಟಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.
ಭಾನುವಾರ ಇಲ್ಲಿ ನಡೆದ ಅಷ್ಟೆಮಿದ ಐಸಿರಿ, ತುಳುವ ತಿರ್ಲ್ ಸಾಸಿರಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇತ್ತೀಚೆಗೆ ಕುಂದಾಪುರದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ. ಆ ಕಾರ್ಯಕ್ರಮ, ಈ ಕಾರ್ಯಕ್ರಮದಲ್ಲಿ ಸೇರಿರುವ ಜನ ನೋಡಿದರೆ ಮುಂದೆ ನೀವೆಲ್ಲರೂ ನಮ್ಮನ್ನು ಬೆಂಗಳೂರಿನಿಂದ ಖಾಲಿ ಮಾಡಿಸುತ್ತೀರೇನೋ ಎಂದು ಭಯವಾಗುತ್ತಿದೆ. ನಿಮ್ಮ ಈ ಶಕ್ತಿ, ಉತ್ಸಾಹ ನೋಡಿ ನನಗೆ ಈ ಅನುಮಾನ ಕಾಡುತ್ತಿದೆ ಎಂದು ಚಟಾಕಿ ಹಾರಿಸಿದರು.
ಕರಾವಳಿ ಜನ ಇಡೀ ದೇಶಕ್ಕೆ ಕರ್ನಾಟಕದ ಮೂಲಕ ಸಂಸ್ಕೃತಿ ಹಾಗೂ ಶಿಕ್ಷಣ, ಧಾರ್ಮಿಕ ಶಕ್ತಿ, ಬ್ಯಾಂಕಿಂಗ್ ವ್ಯವಸ್ಥೆ ಕೊಟ್ಟಿದ್ದಾರೆ. ಆರೋಗ್ಯ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಮುಂದೆ ಇದ್ದೀರಿ. ಕರಾವಳಿ ಭಾಗ, ದಕ್ಷಿಣ ಕನ್ನಡದ ಜನ ವಿದ್ಯಾವಂತರು, ಬುದ್ಧಿವಂತರು, ಪ್ರಜ್ಞಾವಂತರು. ನಿಮ್ಮ ಜೊತೆ ನಾನು ಇದ್ದೇನೆ ಎಂದು ಹೇಳಲು ಇಲ್ಲಿಗೆ ಬಂದಿದ್ದೇನೆ. ಡಿ.ಕೆ. ಶಿವಕುಮಾರ್ ನಿಮ್ಮವ ಎಂದು ಭಾವಿಸಿ. ನಾನು ನಿಮ್ಮ ಪರವಾಗಿದ್ದೇನೆ. ನೀವು ನನಗೆ ಬೆಂಬಲವಾಗಿರಿ. ನಾನು ನಿಮ್ಮ ಆಶೀರ್ವಾದವನ್ನಷ್ಟೇ ಕೇಳುತ್ತಿದ್ದೇನೆ ಎಂದರು.
ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗದಂತೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಲು ಆ ಭಾಗದ ಶಾಸಕರು, ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಅವರ ಜೊತೆ ನಾನು ಚರ್ಚೆ ಮಾಡಿದ್ದೇನೆ’ ಎಂದು ತಿಳಿಸಿದರು. ನಿಮ್ಮ ಸಂಸ್ಕೃತಿ, ಇತಿಹಾಸ ದೇಶದ ಯಾವುದೇ ಭಾಗದಲ್ಲೂ ಇಲ್ಲ. ನೀವೆಲ್ಲರೂ ಕರ್ನಾಟಕ ರಾಜ್ಯದ ಆಸ್ತಿ ಎಂದು ತಿಳಿಸಿದರು.
Deputy Chief Minister D.K. Shivakumar has assured that the proposal to declare Tulu as the state’s second official language will be taken up for discussion in the State Cabinet.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm