ಬ್ರೇಕಿಂಗ್ ನ್ಯೂಸ್
08-09-25 05:21 pm HK News Desk ಕರ್ನಾಟಕ
ಮಂಡ್ಯ, ಸೆ.8 : ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ಇದರಿಂದ ಮದ್ದೂರಿನಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಎಲ್ಲೆಡೆ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಈ ಘಟನೆ ಪೂರ್ವ ನಿಯೋಜಿತ ಕೃತ್ಯ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದು, ಸದ್ಯ 21 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮದ್ದೂರು ಪಟ್ಟಣದ ಸಿದ್ಧಾರ್ಥ ನಗರ 5ನೇ ಕ್ರಾಸ್ ನಲ್ಲಿ ಪ್ರತಿಷ್ಠಾಪಿಸಿದ್ದ ಗೌರಿ ಗಣೇಶ ಮೂರ್ತಿಯ ವಿಸರ್ಜನಾ ಕಾರ್ಯಕ್ರಮದ ಮೆರವಣಿಗೆ ವೇಳೆ ಈ ಘಟನೆ ಸಂಭವಿಸಿದೆ. ಸೂಕ್ತ ಪೊಲೀಸ್ ಬಂದೋಬಸ್ತ್ ನಡುವೆ ಮೆರವಣಿಗೆ ಸಾಗುತ್ತಿದ್ದಾಗಲೇ ಕಲ್ಲು ತೂರಾಟ ನಡೆದಿದೆ. ಮಸೀದಿಯಲ್ಲಿದ್ದ ಮುಸ್ಲಿಮರು ಹೊರಬಂದಿದ್ದು, ಎರಡು ಕೋಮಿನವರ ನಡುವೆ ಮಾತಿನ ಚಕಮಕಿಯೊಂದಿಗೆ ಕಲ್ಲುತೂರಾಟ ನಡೆದಿದೆ. ಕೆಲ ಹೊತ್ತಿನಲ್ಲಿ ಸ್ಥಳದಲ್ಲಿ ಬಿಜೆಪಿ, ಬಜರಂಗದಳ ಕಾರ್ಯಕರ್ತರು ಜಮಾಯಿಸಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಗುಂಪನ್ನು ಚದುರಿಸಿ ಪರಿಸ್ಥಿತಿ ನಿಯಂತ್ರಿಸಲು ಲಾಠಿಚಾರ್ಜ್ ನಡೆಸಿದ್ದಾರೆ. ಘಟನೆ ಬೆನ್ನಲ್ಲೇ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸ್ಥಳಕ್ಕೆ ಆಗಮಿಸಿ ಎರಡು ಕೋಮಿನವರೊಂದಿಗೆ ಸಮಾಲೋಚಿಸಿ ಸಮಾಧಾನಪಡಿಸಿದ್ದಾರೆ. ಕಳೆದ ವರ್ಷ ನಾಗಮಂಗಲ ಪಟ್ಟಣದಲ್ಲಿ ಗಣೇಶನ ಮೂರ್ತಿ ವಿಸರ್ಜನೆ ವೇಳೆ ಮಸೀದಿ ಬಳಿಯೇ ಕಲ್ಲು ತೂರಾಟ ನಡೆದು, ಹತ್ತಾರು ಅಂಗಡಿ ಮುಂಗ್ಗಟ್ಟುಗಳಿಗೆ ಬೆಂಕಿ ಹಾಕಲಾಗಿತ್ತು. ಈ ಹಿನ್ನೆಲೆಯಲ್ಲಿ ಈ ಸಲ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಬಹಳ ಕಟ್ಟೆಚ್ಚರ ವಹಿಸಿತ್ತು.
ಘಟನೆ ಖಂಡಿಸಿ ಹಿಂದೂ ಪರ ಸಂಘಟನೆಗಳು ಆಕ್ರೋಶಗೊಂಡಿದ್ದು, ತಪ್ಪಿಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ, ಪೊಲೀಸರು ಪ್ರತಿಭಟನಕಾರರನ್ನು ಮನವೊಲಿಸಿದ್ದು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ಪ್ರತಿಭಟನಾಕಾರರು ತಮ್ಮ ಪ್ರತಿಭಟನೆ ಕೈಬಿಟ್ಟಿದ್ದಾರೆ. ಘಟನೆ ಖಂಡಿಸಿ ಸೆಪ್ಟೆಂಬರ್ 09ರಂದು ಮದ್ದೂರು ಬಂದ್ ಕರೆ ಕೊಟ್ಟಿದ್ದು, ಸ್ವಯಂಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳ ಮುಚ್ಚುವಂತೆ ವರ್ತಕರಿಗೆ ಮನವಿ ಮಾಡಿವೆ.
ಸೋಮವಾರ ಬೆಳಗ್ಗೆ ಬೆಂಗಳೂರು- ಮೈಸೂರು ಹೆದ್ದಾರಿಯಿಂದ ಮದ್ದೂರು ತಾಲೂಕು ಕಚೇರಿ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆದಿದೆ. ಇದೇ ವೇಳೆ ಮದ್ದೂರು ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಲಾಠಿಚಾರ್ಜ್ ವೇಳೆ ಹಲವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೇ ವೇಳೆ, ಮದ್ದೂರು ಗಲಾಟೆ ಘಟನೆ ಸಂಬಂಧಿಸಿ, ಕಿಡಿಗೇಡಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪರಿಸ್ಥಿತಿ ಕೈಮೀರದಂತೆ ನಿಗಾ ವಹಿಸಿ. ಅಹಿತಕರ ಘಟನೆಗಳಿಗೆ ಅವಕಾಶ ನೀಡಬೇಡಿ. ಕಿಡಿಗೇಡಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಿ ಎಂದು ಸೂಚನೆ ನೀಡಿದ್ದಾರೆ.
Tension gripped Maddur town in Mandya district after stone pelting broke out during a Ganesh idol immersion procession on Sunday evening. The incident occurred near a mosque in Siddharth Nagar 5th Cross, leading to clashes between two communities.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm