ಬ್ರೇಕಿಂಗ್ ನ್ಯೂಸ್
08-09-25 08:07 pm HK News Desk ಕರ್ನಾಟಕ
ಶಿವಮೊಗ್ಗ, ಸೆ.8 : ಇದೇ ತಿಂಗಳ 25 ರಂದು ಹಸೆಮಣೆ ಏರಬೇಕಿದ್ದ ಯುವತಿಯ ಮೇಲೆ ಬಸ್ ಹರಿದ ಪರಿಣಾಮ ಆಕೆ ಮೃತಪಟ್ಟ ದಾರುಣ ಘಟನೆ ನಗರದ ಹೊರವಲಯದ ಮಲವಗೂಪ್ಪದಲ್ಲಿ ನಡೆದಿದೆ.
ಕವಿತಾ (22) ಮೃತ ಯುವತಿ.
ಶಿವಮೊಗ್ಗ ತಾಲೂಕು ದುಮ್ಮಳ್ಳಿಯ ಶಿವಪುರ ತಾಂಡಾದ ನಿವಾಸಿಯಾಗಿರುವ ಕವಿತಾ ಎಂಎಸ್ಸಿ ಪದವೀಧರೆಯಾಗಿದ್ದು, ನಗರದ ಸರ್ಜಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಎಂದಿನಂತೆ ಕವಿತಾ ಅವರು ತಮ್ಮ ಸಹೋದರನ ಜೊತೆ ಬೈಕ್ನಲ್ಲಿ ಮನೆಯಿಂದ ಆಸ್ಪತ್ರೆಗೆ ಹೊರಟಿದ್ದರು. ಇನ್ನು 17 ದಿನಗಳಲ್ಲಿ ಮದುವೆ ಸಂಭ್ರಮದಲ್ಲಿ ತೇಲಬೇಕಿದ್ದ ಯುವತಿ ಜವರಾಯನ ರೂಪದಲ್ಲಿ ಬಂದ ಬಸ್ಗೆ ಬಲಿಯಾಗಿದ್ದಾರೆ.
ನಾಳೆಯಿಂದ ಕೆಲಸಕ್ಕೆ ರಜೆ ಹಾಕಿ ಮದುವೆ ತಯಾರಿಯಲ್ಲಿ ತೊಡಗಿಸಿಕೊಳ್ಳಲು ಕವಿತಾ ಯೋಜಿಸಿದ್ದರು. ಆದರೆ, ವಿಧಿಯ ಆಟಕ್ಕೆ ಆಕೆ ಬಲಿಯಾಗಿರುವುದು ನಿಜಕ್ಕೂ ಮನಕಲಕುವಂತಾಗಿದೆ.
ಬಿದ್ದ ಕವಿತಾ ಮೇಲೆ ಹರಿದ ಬಸ್:
ಕೆಲಸಕ್ಕೆಂದು ಸಹೋದರನ ಜೊತೆ ಬೈಕ್ನಲ್ಲಿ ಬರುವಾಗ ಮಲವಗೂಪ್ಪದಲ್ಲಿ ಎದುರಿನಿಂದ ಮತ್ತೊಂದು ಬೈಕ್ ಬಂದಿದೆ. ಈ ವೇಳೆ ಅದರ ಹ್ಯಾಂಡಲ್ ಕವಿತಾಗೆ ತಾಗಿದೆ. ಹಿಂದೆ ಕುಳಿತಿದ್ದ ಅವರು ಬಲಗಡೆಯಿಂದ ರಸ್ತೆಗೆ ಬಿದ್ದಿದ್ದಾರೆ. ಇದೇ ವೇಳೆ ಹಿಂದೆಯೇ ಬರುತ್ತಿದ್ದ ಸಿಟಿ ಬಸ್ ಯುವತಿ ಮೇಲೆ ಹರಿದು ಹೋಗಿದೆ. ಇದರಿಂದ ಕವಿತಾ ಸ್ಥಳದಲ್ಲಿಯೇ ಪ್ರಾಣ ಕಳೆದುಕೊಂಡಿದ್ದಾರೆ. ಸಹೋದರಿಯ ಮೃತದೇಹ ಕಂಡು ಸಹೋದರ ರಸ್ತೆಯಲ್ಲೇ ಗೋಳಾಡಿದ್ದಾರೆ.
ಅವೈಜ್ಞಾನಿಕ ರಸ್ತೆ ಕಾಮಗಾರಿ:
ಈ ಭಾಗದಲ್ಲಿ ಆಗುತ್ತಿರುವ ರಸ್ತೆ ಅಪಘಾತಗಳ ಬಗ್ಗೆ ಸ್ಥಳೀಯ ಹನುಮನಾಯಕ್ ಎಂಬವರು ಮಾತನಾಡಿ, ಶಿವಮೊಗ್ಗ ಮತ್ತು ಭದ್ರಾವತಿ ನಡುವಿನ ರಸ್ತೆ ಕಾಮಗಾರಿಯು ಅವೈಜ್ಞಾನಿಕವಾಗಿ ಕೂಡಿದೆ. ಹಳೆ ಶುಗರ್ ಫ್ಯಾಕ್ಟರಿ ಬಳಿ ನಡೆಯುತ್ತಿರುವ ಕಾಮಗಾರಿ ಹಾಗೂ ಡಿವೈಡರ್ ಅಪಾಯದ್ದಾಗಿದೆ. ಇದರಿಂದ ಅಪಘಾತಗಳು ಸಂಭವಿಸುತ್ತಿವೆ ಎಂದು ಆರೋಪಿಸಿದರು.
ಇದು ರಾಷ್ಟ್ರೀಯ ಹೆದ್ದಾರಿಯಾಗಿದ್ದು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಅಪಘಾತ ನಡೆಯದಂತೆ ಕ್ರಮ ಜರುಗಿಸಬೇಕಿದೆ. ಶಿವಮೊಗ್ಗದ ಸರ್ಜಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಕವಿತಾ ಅವರು ಇಂದು ಬಸ್ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಆಕೆ ಕುಟುಂಬದ ನಿರ್ವಹಣೆಯ ಹೊಣೆ ಹೊತ್ತಿದ್ದರು. ಬಸ್ ಹರಿದು ಸಾವಿಗೀಡಾಗಿದ್ದು, ಈಗ ಕುಟುಂಬ ಅನಾಥವಾಗಿದೆ. ಇದಕ್ಕೆಲ್ಲಾ ಅವೈಜ್ಞಾನಿಕ ರಸ್ತೆ ಕಾಮಗಾರಿಯೇ ಕಾರಣ ಎಂದು ದೂರಿದರು.
In a heart-wrenching incident, a 22-year-old woman who was set to get married later this month lost her life in a road accident near Malavaguppa on the outskirts of Shivamogga. The deceased, Kavitha, was a resident of Shivapura Tanda in Dummalli, Shivamogga taluk. A postgraduate in M.Sc., she worked at Sarji Hospital in the city.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm