ಬ್ರೇಕಿಂಗ್ ನ್ಯೂಸ್
09-09-25 10:52 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.9 : ಸೋಮವಾರ ರಾತ್ರಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ಘಟನೆ ನಡೆದಿದೆ. ಇದೇ ವೇಳೆ, ವಿಜಯಪುರ ಜಿಲ್ಲೆಯಲ್ಲಿ ಪ್ರಚೋದನಕಾರಿ ಆಡಿಯೋ ಒಂದು ವೈರಲ್ ಆಗಿದೆ. ರಾಜ್ಯದಲ್ಲಿ ಒಂದೇ ದಿನ ಎರಡು ದೇಶದ್ರೋಹದ ಘಟನೆಗಳಾಗಿದ್ದು ಎರಡೂ ಕಡೆ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿದ್ದಾರೆ.
ಇದರ ಬೆನ್ನಲ್ಲೇ, ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ ಹಿಂದೂ ಪರ ಸಂಘಟನೆಗಳು ಮತ್ತು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ. ‘ಪಾಕ್ ಪರ ಘೋಷಣೆ ಕೂಗಿರುವ ಬಗ್ಗೆ ಮಾಹಿತಿ ಬಂದಿದೆ. ಈದ್ ಮಿಲಾದ್ ಮೆರವಣಿಗೆಯ ಬಗ್ಗೆ ವಿಡಿಯೋ ಮಾಡಲಾಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮಕೈಗೊಳ್ಳುತ್ತೇವೆ’ ಎಂದು ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಗಾಂಧಿ ವೃತ್ತದಲ್ಲಿ ಈದ್ ಮೆರವಣಿಗೆ ಹೋಗುತ್ತಿದ್ದಾಗ ಗುಂಪೊಂದು ಈ ಘೋಷಣೆ ಕೂಗಿದ್ದು ಇದರ 12 ಸೆಕೆಂಡಿನ ವಿಡಿಯೋ ವೈರಲ್ ಆಗಿದೆ.
ವಿಜಯಪುರದಲ್ಲಿ ಸೆ.5ರಂದು ಈದ್ ಮೆರವಣಿಗೆ ನಡೆಯುತ್ತಿದ್ದಾಗ ಪ್ರಚೋದನಕಾರಿ ಸಂದೇಶದ ಆಡಿಯೋ ಪ್ಲೇ ಮಾಡಲಾಗಿದೆ. ಈ ಬಗ್ಗೆ ಮೂವರು ಯುವಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆಡಿಯೋದಲ್ಲಿ 15 ನಿಮಿಷ ಪೊಲೀಸರು ಸುಮ್ಮನಿದ್ದರೆ ನಮ್ಮ ತಾಕತ್ತು ಏನೆಂದು ತೋರಿಸುತ್ತೇವೆ, ಎಲ್ಲರನ್ನೂ ನಿರ್ನಾಮ ಮಾಡುತ್ತೇವೆ, ಆಮೇಲೆ ಅವರು ಹಿಂದುಸ್ತಾನ್ ಮಾಡಲಿ ಎಂದು ಹೇಳುವ ಆಡಿಯೋ ಇದೆಯೆಂದು ಹೇಳಲಾಗುತ್ತಿದೆ. ಪೊಲೀಸರು ಡಿಜೆ ಮಾಲೀಕ, ಆಪರೇಟರ್ ಸೇರಿ ಮೂವರ ವಿರುದ್ಧ ಕೇಸು ದಾಖಲಿಸಿದ್ದಾರೆ.
Karnataka’s Shivamogga and Vijayapura districts witnessed controversies during Eid Milad processions, with videos and audio clips sparking outrage and police action. In Shivamogga’s Bhadravathi, a 12-second video allegedly showing a group of youths shouting “Pakistan Zindabad” during a procession near Gandhi Circle on Tarikere Road went viral on social media.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm