ಬ್ರೇಕಿಂಗ್ ನ್ಯೂಸ್
12-09-25 03:04 pm HK News Desk ಕರ್ನಾಟಕ
ಮಂಡ್ಯ, ಸೆ.12 : ರಾಜ್ಯದಲ್ಲಿ ಹೊಸ ಹಿಂದೂ ಪಾರ್ಟಿ ಕಟ್ಟುತ್ತೇನೆ. ಮುಂದಿನ ಬಾರಿ ಮಂಡ್ಯ, ಮೈಸೂರಿಗೆ ಪ್ರವಾಸ ಮಾಡ್ತೀನಿ. ಪ್ರತಾಪ್ ಸಿಂಹ ನಾವೆಲ್ಲಾ ಒಂದಾಗುತ್ತೇವೆ, ಹೊಸ ಸರ್ಕಾರ ತರುತ್ತೇವೆ. ಬಿಜೆಪಿ ಗೌರವಯುತವಾಗಿ ತೆಗೆದುಕೊಳ್ಳದಿದ್ರೆ ಕರ್ನಾಟಕ ಹಿಂದೂ ಪಾರ್ಟಿ ಕಟ್ಟುತ್ತೇನೆ. ಆ ಪಕ್ಷದ ಗುರುತು ಜೆಸಿಬಿ. ನಾವು ಅಧಿಕಾರಕ್ಕೆ ಬಂದರೆ ಮುಸ್ಲಿಮರ ಮೀಸಲಾತಿ ತೆಗೆದು ಹಿಂದೂಗಳಿಗೆ ಹಂಚುತ್ತೇನೆ. ಅಕ್ರಮವಾಗಿ ಕಟ್ಟಿದ ಮಸೀದಿಗಳ ಕಲಾಶ್ ಮಾಡುತ್ತೇನೆ ಎಂದು ವಿಜಯಪುರ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ.
ಮದ್ದೂರಿನಲ್ಲಿ ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಿದ ಘಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಂದ ಯತ್ನಾಳ ಪರವಾಗಿ ಅದ್ದೂರಿ ಸ್ವಾಗತ ನೀಡಲಾಯಿತು. ಈ ವೇಳೆ ಯತ್ನಾಳ ಪ್ರಚೋದನಕಾರಿ ಭಾಷಣ ಮಾಡಿದ್ದಲ್ಲದೆ, ಮುಂದಿನ ಚುನಾವಣೆಗೆ ಹೊಸ ಪಕ್ಷ ಕಟ್ಟುವ ಸೂಚನೆ ನೀಡಿದ್ದಾರೆ. ಹಿಂದೂಗಳೆಲ್ಲಾ ಜಾತಿ ರಾಜಕಾರಣ ಮಾಡಲ್ಲ ಎಂದು ಪ್ರತಿಜ್ಞೆ ಮಾಡಿ. ಹಿಂದೂಗಳ ಪರವಾಗಿ ಹೋರಾಡುವವನು ಮುಂದಿನ ಕರ್ನಾಟಕದ ಸಿಎಂ ಆಗಲಿದ್ದಾರೆ ಎಂದು ಹೇಳಿದರು.
ನಾನು ಅಧಿಕಾರಕ್ಕೆ ಬಂದರೆ ಗೋ ಹತ್ಯೆ ಮಾಡುವವರು ಡಮಾರ್ ಆಗುತ್ತಾರೆ. ವಕ್ಫ್ ಅನುದಾನವನ್ನು ಗೋರಕ್ಷಕರಿಗೆ ನೀಡುತ್ತೇನೆ. ಹಿಂದೂಗಳ ದಾನ ಹಿಂದೂಗಳ ದೇವಾಲಯ ಅಭಿವೃದ್ಧಿಗೆ ಮಾತ್ರ ಮೀಸಲಿರಬೇಕು ಎಂದು ಕಾನೂನು ತರುತ್ತೇನೆ. ಪಾಕಿಸ್ತಾನ್ ಜೈ ಎಂದು ಧ್ವಜ ಹಾರಿಸಿದ್ರೆ ಅಲ್ಲೇ ಎನ್ಕೌಂಟರ್ ಮಾಡಿಸ್ತೀನಿ. ಪಾಕ್ ವಿಭಜನೆ ವೇಳೆ ಭಾರತದಲ್ಲಿರುವ ಮುಸ್ಲಿಮರು ಪಾಕಿಸ್ತಾನಕ್ಕೆ, ಪಾಕಿಸ್ತಾನದಲ್ಲಿರುವ ಹಿಂದೂಗಳು ಭಾರತಕ್ಕೆ ಕರೆತರಬೇಕು ಎಂದಿದ್ರು ಅಂಬೇಡ್ಕರ್. ಮದ್ದೂರಿನ ಘಟನೆ ನೋಡಿದ್ರೆ ಅಂಬೇಡ್ಕರ್ ಹೇಳಿದ್ದು ಸತ್ಯ ಎನಿಸುತ್ತದೆ. ಮೃತರ ಮೆರವಣಿಗೆ ವೇಳೆ ತಮಟೆ ಬಾರಿಸಲು ಮಸೀದಿ ಮುಂದೆ ಬಿಡಲ್ಲ, ದೇವರ ಮೆರವಣಿಗೆ ಮಾಡಲು ಬಿಡಲ್ಲ ಅಂದ್ರೇನು. ಇವರ ಈದ್ ಮೆರವಣಿಗೆ ಮಾಡಲು ನಾವು ಬಿಡಲ್ಲ ಅಂದ್ರೆ ಏನಾದೀತು. ನಮ್ಮ ಸರ್ಕಾರ ಬಂದರೆ ಮಸೀದಿ ಮುಂದೆ ಒಂದು ಗಂಟೆ ಡ್ಯಾನ್ಸ್ ಮಾಡಲು ಅವಕಾಶ ಕೊಡುತ್ತೇನೆ. 2028ಕ್ಕೆ ಎಲ್ಲರೂ ವಿಧಾನಸೌದದ ಮುಂದೆ ಭಗವಧ್ವಜ ತರ್ತೀರಾ? ನನ್ನ ಕರ್ನಾಟಕ ಸಿಎಂ ಮಾಡ್ರೀರಾ? ಎಂದು ಕೇಳಿದರು.
ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ರೀತಿ ಆಡಳಿತ ಕರ್ನಾಟಕದಲ್ಲಿ ಬರಲಿದೆ. ಹಿಂದೂಗಳ ಪರವಾಗಿದ್ದವನಿಗೆ ಓಟ್ ಹಾಕಿ. ನಮ್ಮ ಸರ್ಕಾರ ಇದ್ದಾಗ ನನ್ನ ಮಂತ್ರಿ ಮಾಡಲಿಲ್ಲ. ನಾನು ಗೃಹಮಂತ್ರಿ ಇದ್ದಿದ್ರೆ ಇವರ ಬಾಯಲ್ಲಿ ಗುಂಡು ಹಾಕುತ್ತಿದ್ದೆ. ಮುಂದಿನ ಸಲ ಮದ್ದೂರಿಗೆ ಬರ್ತೀನಿ, ಆ ಮಸೀದಿ ಮುಂದೆ ಒಂದು ಗಂಟೆ ಕುಣಿಯೋಣ.
ಕರ್ನಾಟಕದಲ್ಲಿ ಯೋಗಿ ಆದಿತ್ಯನಾಥ್ ರೀತಿ ಆಡಳಿತ ತರುವುದು ನನ್ನ ಗುರಿ. ಹಿಂದೂಗಳ ಪರವಾಗಿ ಗಟ್ಟಿ ಮಾತಾಡ್ತೀನಿ ಎಂದು ನೀವೆಲ್ಲಾ ನನಗಾಗಿ ಬಂದಿದ್ದೀರಿ. ಇನ್ಮುಂದೆ ಹಿಂದೂಗಳ ಪರವಾಗಿ ನಿಲ್ಲುವವರನ್ನ ಮಾತ್ರ ಗೆಲ್ಲಿಸಿ. ಗಲಾಟೆಗೆ ಕಾರಣವಾದ ಮುಸ್ಲಿಂ ಗೂಂಡಾಗಳನ್ನ ಬಂಧಿಸಿ. ಇಲ್ಲ ಮದ್ದೂರು ಜನಾನೇ ಬುದ್ದಿ ಕಲಿಸುತ್ತಾರೆ. ಮುಸ್ಲಿಮರೇ ಮಾಡಿದ್ದಾರೆ ಎಂದು
ಚಲುವರಾಯಸ್ವಾಮಿ ಹೇಳಿದ್ದಾರೆ. ಅವರಿಗೂ ಗೊತ್ತಿದೆ ಮಂಡ್ಯ ಬಿಡಲ್ಲ ಎಂದು. ಶಾಸಕ, ಸಚಿವ ಯಾರೇ ಆದರೂ ಮುಸ್ಲಿಂ ಆಗಿ ಹುಟ್ಬೇಕು ಅಂದ್ರೆ ಈಗಲೇ ಆಗಿಬಿಡಿ ತಾಯಿಗಂಡರ. 72 ಕನ್ಯೆಯಿರುವ ಸ್ವರ್ಗ ಸಿಗುತ್ತದೆ ನಿಮಗೆಲ್ಲಾ. ಇಲ್ಲಿರುವ ಬದಲು ಜನ್ನತ್ಗೆ ಹೋಗಿಬಿಡಿ ಎಂದರು.
ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಕ್ಕಾಗಿ ಬಿಜೆಪಿ ಮುಖಂಡ ಸಿಟಿ ರವಿ ಮತ್ತು ಯತ್ನಾಳ ವಿರುದ್ಧ ಮಂಡ್ಯ ಪೊಲೀಸರು ಕೇಸು ದಾಖಲಿಸಿದ್ದಾರೆ.
In a highly provocative speech delivered in Maddur, BJP MLA Basanagouda Patil Yatnal declared his intent to launch a new Hindu-centric political party if the BJP fails to give him due respect. “If BJP doesn't treat us with dignity, I will start a Karnataka Hindu Party. Our symbol will be the JCB,” he announced amid loud cheers from the crowd.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm