ಬ್ರೇಕಿಂಗ್ ನ್ಯೂಸ್
26-12-20 03:11 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.26: ನೈಟ್ ಕರ್ಫ್ಯೂ ನಿರ್ಧಾರವನ್ನು ತಜ್ಞರ ಸಲಹೆಯನ್ನು ಪಡೆದು ಜನರ ಆರೋಗ್ಯದ ದೃಷ್ಟಿಯಿಂದ ಬಹಳ ವಿವೇಚನೆಯಿಂದಲೇ ಕೈಗೊಳ್ಳಲಾಗಿತ್ತು. ಅದು ಕೇವಲ ರಾಜಕೀಯ ನಿರ್ಧಾರ ಆಗಿರಲಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಎಡಬಿಡಂಗಿ ಸರಕಾರ ಎಂದು ಕರೆದಿದ್ದಾರೆ. ಆದರೆ, ಇದೇ ಸರಕಾರ ಕೊರೊನಾ ನಿಯಂತ್ರಣಕ್ಕೆ ತಂದಿದ್ದು, ಸೋಂಕಿಗೆ ಒಳಗಾದ 95 ಶೇ. ಜನರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಈ ಬಾರಿ ಹೊಸ ವೈರಸ್ ಬಂದ ಬಳಿಕ ಯುಕೆಯಲ್ಲಿ ಲಾಕ್ಡೌನ್ ಆಗಿದೆ, ಜರ್ಮನಿಯಲ್ಲಿ ರಾತ್ರಿ ಕರ್ಫ್ಯೂ ಹೇರಲಾಗಿದೆ. ಹಾಗೆಂದು ಅಲ್ಲಿನವರನ್ನು ಬುದ್ಧಿ ಇಲ್ಲದವರು ಎನ್ನಲಾಗುತ್ತದೆಯೇ..? ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಹೇರುವ ಬಗ್ಗೆ ಆರೋಗ್ಯ ಕ್ಷೇತ್ರದಲ್ಲಿ ಅನುಭವ ಪಡೆದವರ ಸಲಹೆ ಪಡೆದು ನಿರ್ಧಾರಕ್ಕೆ ಬರಲಾಗಿತ್ತು.

ಲಾಕ್ಡೌನ್ ಹೇರಿದರೆ ಆರ್ಥಿಕ ನಷ್ಟವಾಗುತ್ತದೆ. ಆದರೂ ಜನರ ಆರೋಗ್ಯದ ದೃಷ್ಟಿಯಿಂದ ಕೆಲವು ತೀರ್ಮಾನಗಳನ್ನು ಕೈಗೊಳ್ಳಬೇಕಾಗುತ್ತದೆ. ಜನರು ಕೊರೊನಾ ಮುಂಜಾಗ್ರತೆಯನ್ನು ಮರೆತಿದ್ದು, ಇಂಥ ಸಂದರ್ಭದಲ್ಲಿ ಜನರನ್ನು ಎಚ್ಚರಿಸುವುದು ಸರಕಾರದ ಕರ್ತವ್ಯ ಎಂದು ಹೇಳಿದ ಸುಧಾಕರ್, ಬ್ರಿಟನ್ನಿಂದ ರಾಜ್ಯಕ್ಕೆ ಆಗಮಿಸಿದ 15 ಮಂದಿಯಲ್ಲಿ ವೈರಸ್ ಕಾಣಿಸಿಕೊಂಡಿದ್ದು ಹತ್ತು ಜನರ ಮಾದರಿಯನ್ನು ನಿಮ್ಹಾನ್ಸ್ ಗೆ ಕಳಿಸಲಾಗಿದೆ ಎಂದು ಹೇಳಿದರು.
ನನ್ನ ಬಗ್ಗೆ ಡಿಕೆ ಸುರೇಶ್, ಡಿಕೆಶಿಗಳು ಸರ್ಟಿಫಿಕೇಟ್ ನೀಡುವ ಅಗತ್ಯವಿಲ್ಲ. ಭ್ರಷ್ಟಾಚಾರದ ಆರೋಪ ಹೊತ್ತು ಜಾಮೀನಿನ ಮೇಲೆ ಹೊರಗಿರುವ ಮಂದಿ ಯಾರು ಎನ್ನುವುದು ಜನರಿಗೆ ಗೊತ್ತಿದೆ ಎಂದು ಪರೋಕ್ಷವಾಗಿ ಡಿಕೆಶಿ ಬಗ್ಗೆ ಕುಟುಕಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm