ಬ್ರೇಕಿಂಗ್ ನ್ಯೂಸ್
26-12-20 03:11 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.26: ನೈಟ್ ಕರ್ಫ್ಯೂ ನಿರ್ಧಾರವನ್ನು ತಜ್ಞರ ಸಲಹೆಯನ್ನು ಪಡೆದು ಜನರ ಆರೋಗ್ಯದ ದೃಷ್ಟಿಯಿಂದ ಬಹಳ ವಿವೇಚನೆಯಿಂದಲೇ ಕೈಗೊಳ್ಳಲಾಗಿತ್ತು. ಅದು ಕೇವಲ ರಾಜಕೀಯ ನಿರ್ಧಾರ ಆಗಿರಲಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಎಡಬಿಡಂಗಿ ಸರಕಾರ ಎಂದು ಕರೆದಿದ್ದಾರೆ. ಆದರೆ, ಇದೇ ಸರಕಾರ ಕೊರೊನಾ ನಿಯಂತ್ರಣಕ್ಕೆ ತಂದಿದ್ದು, ಸೋಂಕಿಗೆ ಒಳಗಾದ 95 ಶೇ. ಜನರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಈ ಬಾರಿ ಹೊಸ ವೈರಸ್ ಬಂದ ಬಳಿಕ ಯುಕೆಯಲ್ಲಿ ಲಾಕ್ಡೌನ್ ಆಗಿದೆ, ಜರ್ಮನಿಯಲ್ಲಿ ರಾತ್ರಿ ಕರ್ಫ್ಯೂ ಹೇರಲಾಗಿದೆ. ಹಾಗೆಂದು ಅಲ್ಲಿನವರನ್ನು ಬುದ್ಧಿ ಇಲ್ಲದವರು ಎನ್ನಲಾಗುತ್ತದೆಯೇ..? ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಹೇರುವ ಬಗ್ಗೆ ಆರೋಗ್ಯ ಕ್ಷೇತ್ರದಲ್ಲಿ ಅನುಭವ ಪಡೆದವರ ಸಲಹೆ ಪಡೆದು ನಿರ್ಧಾರಕ್ಕೆ ಬರಲಾಗಿತ್ತು.

ಲಾಕ್ಡೌನ್ ಹೇರಿದರೆ ಆರ್ಥಿಕ ನಷ್ಟವಾಗುತ್ತದೆ. ಆದರೂ ಜನರ ಆರೋಗ್ಯದ ದೃಷ್ಟಿಯಿಂದ ಕೆಲವು ತೀರ್ಮಾನಗಳನ್ನು ಕೈಗೊಳ್ಳಬೇಕಾಗುತ್ತದೆ. ಜನರು ಕೊರೊನಾ ಮುಂಜಾಗ್ರತೆಯನ್ನು ಮರೆತಿದ್ದು, ಇಂಥ ಸಂದರ್ಭದಲ್ಲಿ ಜನರನ್ನು ಎಚ್ಚರಿಸುವುದು ಸರಕಾರದ ಕರ್ತವ್ಯ ಎಂದು ಹೇಳಿದ ಸುಧಾಕರ್, ಬ್ರಿಟನ್ನಿಂದ ರಾಜ್ಯಕ್ಕೆ ಆಗಮಿಸಿದ 15 ಮಂದಿಯಲ್ಲಿ ವೈರಸ್ ಕಾಣಿಸಿಕೊಂಡಿದ್ದು ಹತ್ತು ಜನರ ಮಾದರಿಯನ್ನು ನಿಮ್ಹಾನ್ಸ್ ಗೆ ಕಳಿಸಲಾಗಿದೆ ಎಂದು ಹೇಳಿದರು.
ನನ್ನ ಬಗ್ಗೆ ಡಿಕೆ ಸುರೇಶ್, ಡಿಕೆಶಿಗಳು ಸರ್ಟಿಫಿಕೇಟ್ ನೀಡುವ ಅಗತ್ಯವಿಲ್ಲ. ಭ್ರಷ್ಟಾಚಾರದ ಆರೋಪ ಹೊತ್ತು ಜಾಮೀನಿನ ಮೇಲೆ ಹೊರಗಿರುವ ಮಂದಿ ಯಾರು ಎನ್ನುವುದು ಜನರಿಗೆ ಗೊತ್ತಿದೆ ಎಂದು ಪರೋಕ್ಷವಾಗಿ ಡಿಕೆಶಿ ಬಗ್ಗೆ ಕುಟುಕಿದ್ದಾರೆ.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm