ಬ್ರೇಕಿಂಗ್ ನ್ಯೂಸ್
26-12-20 03:11 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.26: ನೈಟ್ ಕರ್ಫ್ಯೂ ನಿರ್ಧಾರವನ್ನು ತಜ್ಞರ ಸಲಹೆಯನ್ನು ಪಡೆದು ಜನರ ಆರೋಗ್ಯದ ದೃಷ್ಟಿಯಿಂದ ಬಹಳ ವಿವೇಚನೆಯಿಂದಲೇ ಕೈಗೊಳ್ಳಲಾಗಿತ್ತು. ಅದು ಕೇವಲ ರಾಜಕೀಯ ನಿರ್ಧಾರ ಆಗಿರಲಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಎಡಬಿಡಂಗಿ ಸರಕಾರ ಎಂದು ಕರೆದಿದ್ದಾರೆ. ಆದರೆ, ಇದೇ ಸರಕಾರ ಕೊರೊನಾ ನಿಯಂತ್ರಣಕ್ಕೆ ತಂದಿದ್ದು, ಸೋಂಕಿಗೆ ಒಳಗಾದ 95 ಶೇ. ಜನರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಈ ಬಾರಿ ಹೊಸ ವೈರಸ್ ಬಂದ ಬಳಿಕ ಯುಕೆಯಲ್ಲಿ ಲಾಕ್ಡೌನ್ ಆಗಿದೆ, ಜರ್ಮನಿಯಲ್ಲಿ ರಾತ್ರಿ ಕರ್ಫ್ಯೂ ಹೇರಲಾಗಿದೆ. ಹಾಗೆಂದು ಅಲ್ಲಿನವರನ್ನು ಬುದ್ಧಿ ಇಲ್ಲದವರು ಎನ್ನಲಾಗುತ್ತದೆಯೇ..? ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಹೇರುವ ಬಗ್ಗೆ ಆರೋಗ್ಯ ಕ್ಷೇತ್ರದಲ್ಲಿ ಅನುಭವ ಪಡೆದವರ ಸಲಹೆ ಪಡೆದು ನಿರ್ಧಾರಕ್ಕೆ ಬರಲಾಗಿತ್ತು.

ಲಾಕ್ಡೌನ್ ಹೇರಿದರೆ ಆರ್ಥಿಕ ನಷ್ಟವಾಗುತ್ತದೆ. ಆದರೂ ಜನರ ಆರೋಗ್ಯದ ದೃಷ್ಟಿಯಿಂದ ಕೆಲವು ತೀರ್ಮಾನಗಳನ್ನು ಕೈಗೊಳ್ಳಬೇಕಾಗುತ್ತದೆ. ಜನರು ಕೊರೊನಾ ಮುಂಜಾಗ್ರತೆಯನ್ನು ಮರೆತಿದ್ದು, ಇಂಥ ಸಂದರ್ಭದಲ್ಲಿ ಜನರನ್ನು ಎಚ್ಚರಿಸುವುದು ಸರಕಾರದ ಕರ್ತವ್ಯ ಎಂದು ಹೇಳಿದ ಸುಧಾಕರ್, ಬ್ರಿಟನ್ನಿಂದ ರಾಜ್ಯಕ್ಕೆ ಆಗಮಿಸಿದ 15 ಮಂದಿಯಲ್ಲಿ ವೈರಸ್ ಕಾಣಿಸಿಕೊಂಡಿದ್ದು ಹತ್ತು ಜನರ ಮಾದರಿಯನ್ನು ನಿಮ್ಹಾನ್ಸ್ ಗೆ ಕಳಿಸಲಾಗಿದೆ ಎಂದು ಹೇಳಿದರು.
ನನ್ನ ಬಗ್ಗೆ ಡಿಕೆ ಸುರೇಶ್, ಡಿಕೆಶಿಗಳು ಸರ್ಟಿಫಿಕೇಟ್ ನೀಡುವ ಅಗತ್ಯವಿಲ್ಲ. ಭ್ರಷ್ಟಾಚಾರದ ಆರೋಪ ಹೊತ್ತು ಜಾಮೀನಿನ ಮೇಲೆ ಹೊರಗಿರುವ ಮಂದಿ ಯಾರು ಎನ್ನುವುದು ಜನರಿಗೆ ಗೊತ್ತಿದೆ ಎಂದು ಪರೋಕ್ಷವಾಗಿ ಡಿಕೆಶಿ ಬಗ್ಗೆ ಕುಟುಕಿದ್ದಾರೆ.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm