ಬ್ರೇಕಿಂಗ್ ನ್ಯೂಸ್
16-09-25 11:00 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.16 : ಸಚಿವ ಜಮೀರ್ ಅಹ್ಮದ್ ಖಾನ್ ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ಗೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಲೋಕಾಯುಕ್ತ ಪೊಲೀಸರು, ಸಚಿವ ಜಮೀರ್ ಜೊತೆಗೆ ಕಳೆದ 3-4 ವರ್ಷಗಳಿಂದ ಆರ್ಥಿಕ ವ್ಯವಹಾರ ಹೊಂದಿರುವ ದಿನೇಶ್ ಗುಂಡೂರಾವ್ಗೆ ನೋಟಿಸ್ ನೀಡಿದ್ದು, ದಾಖಲೆ ಸಮೇತ ವಿಚಾರಣೆಗೆ ಹಾಜರಾಗಲು ತಿಳಿಸಿದ್ದಾರೆ. ನೋಟಿಸ್ ಬೆನ್ನಲ್ಲೇ ದಿನೇಶ್ ಗುಂಡೂರಾವ್ ದಾಖಲೆ ಕ್ರೋಢೀಕರಿಸಲು ಕಾಲಾವಕಾಶ ಕೋರಿದ್ದಾರೆ.
ಇದಕ್ಕೂ ಮುನ್ನ ಸಚಿವ ಜಮೀರ್ ಅಹ್ಮದ್ಗೆ 2.5 ಕೋಟಿ ರೂ. ನೀಡಿದ್ದ ವಿಚಾರವಾಗಿ ರಾಧಿಕಾ ಕುಮಾರಸ್ವಾಮಿ ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದರು. ಪ್ರಕರಣದಲ್ಲಿ ಈಗಾಗಲೇ ರಾಧಿಕಾ ಕುಮಾರಸ್ವಾಮಿ ಹಾಗೂ ಗುಜರಿ ಬಾಬು ವಿಚಾರಣೆ ನಡೆಸಲಾಗಿದೆ.
2019ರಲ್ಲಿ ಐ ಮಾನಿಟರಿ ಅಡ್ವೈಸರಿ ಕಂಪನಿಯ ಬಹುಕೋಟಿ ವಂಚನೆ ಹಗರಣ ಬೆಳಕಿಗೆ ಬಂದಿತ್ತು. ಈ ವಂಚಕ ಕಂಪನಿ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಜಮೀರ್ ಅಹ್ಮದ್ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು.
ಇಡಿ ವರದಿ ಅನ್ವಯ ಆಗ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದ ಜಮೀರ್ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಭ್ರಷ್ಟಾಚಾರ ನಿಗ್ರಹ ದಳವು (ಎಸಿಬಿ) ಪ್ರಕರಣ ದಾಖಲಿಸಿತ್ತು. ಎಸಿಬಿ ರದ್ದಾದ ಬಳಿಕ ಈ ಪ್ರಕರಣ ಲೋಕಾಯುಕ್ತ ಪೊಲೀಸರಿಗೆ ವರ್ಗವಾಗಿತ್ತು. ಈಗ ಸಚಿವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದು, ಹಲವರ ವಿಚಾರಣೆ ನಡೆಸುತ್ತಿದ್ದಾರೆ.
ನಾನು ಯಾರ ಬಳಿ ಸಾಲ ಪಡೆದಿದ್ದೇನೆ ಎನ್ನುವುದರ ಬಗ್ಗೆ ಜಮೀರ್ ಲೋಕಾಯುಕ್ತ ಪೊಲೀಸರಿಗೆ ಲಿಖಿತವಾಗಿ ಪಟ್ಟಿ ನೀಡಿದ್ದರು. ಈ ಪಟ್ಟಿಯಲ್ಲಿ ರಾಧಿಕಾ ಕುಮಾರಸ್ವಾಮಿ ಬಳಿಯಿಂದ 2.5 ಕೋಟಿ ರೂ. ಸಾಲ ಪಡೆದಿರುವ ವಿಚಾರವನ್ನು ಹಂಚಿಕೊಂಡಿದ್ದರು. ವಿಚಾರಣೆ ಸಂದರ್ಭದಲ್ಲಿ, ನಾನು 2012ರಲ್ಲಿ ಶಮಿಕಾ ಎಂಟರ್ಪ್ರೈಸಸ್ ಹೆಸರಿನಲ್ಲಿ ಯಶ್ ಹಾಗೂ ರಮ್ಯಾ ಅಭಿನಯದ ಲಕ್ಕಿ ಸಿನಿಮಾ ನಿರ್ಮಾಣ ಮಾಡಿದ್ದೆ. ಮನರಂಜನಾ ಚಾನೆಲ್ಗಳಿಗೆ ಈ ಸಿನಿಮಾದ ಸ್ಯಾಟಲೈಟ್ ಹಕ್ಕು ಹಾಗೂ ಚಲನಚಿತ್ರದ ಯಶಸ್ವಿನಿಂದ ಸಂಪಾದಿಸಿದ ಹಣದಲ್ಲಿ ಆರ್ಥಿಕ ಸಂಕಷ್ಟದಲ್ಲಿದ್ದ ಜಮೀರ್ ಅಹ್ಮದ್ ಅವರಿಗೆ 2.5 ಕೋಟಿ ರೂ.ಗಳನ್ನು ಸಾಲವಾಗಿ ನೀಡಿದ್ದೆ ಎಂದು ರಾಧಿಕಾ ತಿಳಿಸಿದ್ದಾಗಿ ಮೂಲಗಳಿಂದ ತಿಳಿದುಬಂದಿದೆ.
In connection with the ongoing investigation into alleged illegal assets of Minister B.Z. Jamir Ahmed Khan, the Lokayukta police have issued a notice to Health Minister Dinesh Gundu Rao.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am