ಬ್ರೇಕಿಂಗ್ ನ್ಯೂಸ್
16-09-25 11:00 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.16 : ಸಚಿವ ಜಮೀರ್ ಅಹ್ಮದ್ ಖಾನ್ ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ಗೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಲೋಕಾಯುಕ್ತ ಪೊಲೀಸರು, ಸಚಿವ ಜಮೀರ್ ಜೊತೆಗೆ ಕಳೆದ 3-4 ವರ್ಷಗಳಿಂದ ಆರ್ಥಿಕ ವ್ಯವಹಾರ ಹೊಂದಿರುವ ದಿನೇಶ್ ಗುಂಡೂರಾವ್ಗೆ ನೋಟಿಸ್ ನೀಡಿದ್ದು, ದಾಖಲೆ ಸಮೇತ ವಿಚಾರಣೆಗೆ ಹಾಜರಾಗಲು ತಿಳಿಸಿದ್ದಾರೆ. ನೋಟಿಸ್ ಬೆನ್ನಲ್ಲೇ ದಿನೇಶ್ ಗುಂಡೂರಾವ್ ದಾಖಲೆ ಕ್ರೋಢೀಕರಿಸಲು ಕಾಲಾವಕಾಶ ಕೋರಿದ್ದಾರೆ.
ಇದಕ್ಕೂ ಮುನ್ನ ಸಚಿವ ಜಮೀರ್ ಅಹ್ಮದ್ಗೆ 2.5 ಕೋಟಿ ರೂ. ನೀಡಿದ್ದ ವಿಚಾರವಾಗಿ ರಾಧಿಕಾ ಕುಮಾರಸ್ವಾಮಿ ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದರು. ಪ್ರಕರಣದಲ್ಲಿ ಈಗಾಗಲೇ ರಾಧಿಕಾ ಕುಮಾರಸ್ವಾಮಿ ಹಾಗೂ ಗುಜರಿ ಬಾಬು ವಿಚಾರಣೆ ನಡೆಸಲಾಗಿದೆ.
2019ರಲ್ಲಿ ಐ ಮಾನಿಟರಿ ಅಡ್ವೈಸರಿ ಕಂಪನಿಯ ಬಹುಕೋಟಿ ವಂಚನೆ ಹಗರಣ ಬೆಳಕಿಗೆ ಬಂದಿತ್ತು. ಈ ವಂಚಕ ಕಂಪನಿ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಜಮೀರ್ ಅಹ್ಮದ್ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು.
ಇಡಿ ವರದಿ ಅನ್ವಯ ಆಗ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದ ಜಮೀರ್ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಭ್ರಷ್ಟಾಚಾರ ನಿಗ್ರಹ ದಳವು (ಎಸಿಬಿ) ಪ್ರಕರಣ ದಾಖಲಿಸಿತ್ತು. ಎಸಿಬಿ ರದ್ದಾದ ಬಳಿಕ ಈ ಪ್ರಕರಣ ಲೋಕಾಯುಕ್ತ ಪೊಲೀಸರಿಗೆ ವರ್ಗವಾಗಿತ್ತು. ಈಗ ಸಚಿವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದು, ಹಲವರ ವಿಚಾರಣೆ ನಡೆಸುತ್ತಿದ್ದಾರೆ.
ನಾನು ಯಾರ ಬಳಿ ಸಾಲ ಪಡೆದಿದ್ದೇನೆ ಎನ್ನುವುದರ ಬಗ್ಗೆ ಜಮೀರ್ ಲೋಕಾಯುಕ್ತ ಪೊಲೀಸರಿಗೆ ಲಿಖಿತವಾಗಿ ಪಟ್ಟಿ ನೀಡಿದ್ದರು. ಈ ಪಟ್ಟಿಯಲ್ಲಿ ರಾಧಿಕಾ ಕುಮಾರಸ್ವಾಮಿ ಬಳಿಯಿಂದ 2.5 ಕೋಟಿ ರೂ. ಸಾಲ ಪಡೆದಿರುವ ವಿಚಾರವನ್ನು ಹಂಚಿಕೊಂಡಿದ್ದರು. ವಿಚಾರಣೆ ಸಂದರ್ಭದಲ್ಲಿ, ನಾನು 2012ರಲ್ಲಿ ಶಮಿಕಾ ಎಂಟರ್ಪ್ರೈಸಸ್ ಹೆಸರಿನಲ್ಲಿ ಯಶ್ ಹಾಗೂ ರಮ್ಯಾ ಅಭಿನಯದ ಲಕ್ಕಿ ಸಿನಿಮಾ ನಿರ್ಮಾಣ ಮಾಡಿದ್ದೆ. ಮನರಂಜನಾ ಚಾನೆಲ್ಗಳಿಗೆ ಈ ಸಿನಿಮಾದ ಸ್ಯಾಟಲೈಟ್ ಹಕ್ಕು ಹಾಗೂ ಚಲನಚಿತ್ರದ ಯಶಸ್ವಿನಿಂದ ಸಂಪಾದಿಸಿದ ಹಣದಲ್ಲಿ ಆರ್ಥಿಕ ಸಂಕಷ್ಟದಲ್ಲಿದ್ದ ಜಮೀರ್ ಅಹ್ಮದ್ ಅವರಿಗೆ 2.5 ಕೋಟಿ ರೂ.ಗಳನ್ನು ಸಾಲವಾಗಿ ನೀಡಿದ್ದೆ ಎಂದು ರಾಧಿಕಾ ತಿಳಿಸಿದ್ದಾಗಿ ಮೂಲಗಳಿಂದ ತಿಳಿದುಬಂದಿದೆ.
In connection with the ongoing investigation into alleged illegal assets of Minister B.Z. Jamir Ahmed Khan, the Lokayukta police have issued a notice to Health Minister Dinesh Gundu Rao.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm