ಬ್ರೇಕಿಂಗ್ ನ್ಯೂಸ್
16-09-25 11:00 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.16 : ಸಚಿವ ಜಮೀರ್ ಅಹ್ಮದ್ ಖಾನ್ ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ಗೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಲೋಕಾಯುಕ್ತ ಪೊಲೀಸರು, ಸಚಿವ ಜಮೀರ್ ಜೊತೆಗೆ ಕಳೆದ 3-4 ವರ್ಷಗಳಿಂದ ಆರ್ಥಿಕ ವ್ಯವಹಾರ ಹೊಂದಿರುವ ದಿನೇಶ್ ಗುಂಡೂರಾವ್ಗೆ ನೋಟಿಸ್ ನೀಡಿದ್ದು, ದಾಖಲೆ ಸಮೇತ ವಿಚಾರಣೆಗೆ ಹಾಜರಾಗಲು ತಿಳಿಸಿದ್ದಾರೆ. ನೋಟಿಸ್ ಬೆನ್ನಲ್ಲೇ ದಿನೇಶ್ ಗುಂಡೂರಾವ್ ದಾಖಲೆ ಕ್ರೋಢೀಕರಿಸಲು ಕಾಲಾವಕಾಶ ಕೋರಿದ್ದಾರೆ.
ಇದಕ್ಕೂ ಮುನ್ನ ಸಚಿವ ಜಮೀರ್ ಅಹ್ಮದ್ಗೆ 2.5 ಕೋಟಿ ರೂ. ನೀಡಿದ್ದ ವಿಚಾರವಾಗಿ ರಾಧಿಕಾ ಕುಮಾರಸ್ವಾಮಿ ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದರು. ಪ್ರಕರಣದಲ್ಲಿ ಈಗಾಗಲೇ ರಾಧಿಕಾ ಕುಮಾರಸ್ವಾಮಿ ಹಾಗೂ ಗುಜರಿ ಬಾಬು ವಿಚಾರಣೆ ನಡೆಸಲಾಗಿದೆ.
2019ರಲ್ಲಿ ಐ ಮಾನಿಟರಿ ಅಡ್ವೈಸರಿ ಕಂಪನಿಯ ಬಹುಕೋಟಿ ವಂಚನೆ ಹಗರಣ ಬೆಳಕಿಗೆ ಬಂದಿತ್ತು. ಈ ವಂಚಕ ಕಂಪನಿ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಜಮೀರ್ ಅಹ್ಮದ್ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು.
ಇಡಿ ವರದಿ ಅನ್ವಯ ಆಗ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದ ಜಮೀರ್ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಭ್ರಷ್ಟಾಚಾರ ನಿಗ್ರಹ ದಳವು (ಎಸಿಬಿ) ಪ್ರಕರಣ ದಾಖಲಿಸಿತ್ತು. ಎಸಿಬಿ ರದ್ದಾದ ಬಳಿಕ ಈ ಪ್ರಕರಣ ಲೋಕಾಯುಕ್ತ ಪೊಲೀಸರಿಗೆ ವರ್ಗವಾಗಿತ್ತು. ಈಗ ಸಚಿವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದು, ಹಲವರ ವಿಚಾರಣೆ ನಡೆಸುತ್ತಿದ್ದಾರೆ.
ನಾನು ಯಾರ ಬಳಿ ಸಾಲ ಪಡೆದಿದ್ದೇನೆ ಎನ್ನುವುದರ ಬಗ್ಗೆ ಜಮೀರ್ ಲೋಕಾಯುಕ್ತ ಪೊಲೀಸರಿಗೆ ಲಿಖಿತವಾಗಿ ಪಟ್ಟಿ ನೀಡಿದ್ದರು. ಈ ಪಟ್ಟಿಯಲ್ಲಿ ರಾಧಿಕಾ ಕುಮಾರಸ್ವಾಮಿ ಬಳಿಯಿಂದ 2.5 ಕೋಟಿ ರೂ. ಸಾಲ ಪಡೆದಿರುವ ವಿಚಾರವನ್ನು ಹಂಚಿಕೊಂಡಿದ್ದರು. ವಿಚಾರಣೆ ಸಂದರ್ಭದಲ್ಲಿ, ನಾನು 2012ರಲ್ಲಿ ಶಮಿಕಾ ಎಂಟರ್ಪ್ರೈಸಸ್ ಹೆಸರಿನಲ್ಲಿ ಯಶ್ ಹಾಗೂ ರಮ್ಯಾ ಅಭಿನಯದ ಲಕ್ಕಿ ಸಿನಿಮಾ ನಿರ್ಮಾಣ ಮಾಡಿದ್ದೆ. ಮನರಂಜನಾ ಚಾನೆಲ್ಗಳಿಗೆ ಈ ಸಿನಿಮಾದ ಸ್ಯಾಟಲೈಟ್ ಹಕ್ಕು ಹಾಗೂ ಚಲನಚಿತ್ರದ ಯಶಸ್ವಿನಿಂದ ಸಂಪಾದಿಸಿದ ಹಣದಲ್ಲಿ ಆರ್ಥಿಕ ಸಂಕಷ್ಟದಲ್ಲಿದ್ದ ಜಮೀರ್ ಅಹ್ಮದ್ ಅವರಿಗೆ 2.5 ಕೋಟಿ ರೂ.ಗಳನ್ನು ಸಾಲವಾಗಿ ನೀಡಿದ್ದೆ ಎಂದು ರಾಧಿಕಾ ತಿಳಿಸಿದ್ದಾಗಿ ಮೂಲಗಳಿಂದ ತಿಳಿದುಬಂದಿದೆ.
In connection with the ongoing investigation into alleged illegal assets of Minister B.Z. Jamir Ahmed Khan, the Lokayukta police have issued a notice to Health Minister Dinesh Gundu Rao.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm