ಬ್ರೇಕಿಂಗ್ ನ್ಯೂಸ್
16-09-25 11:00 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.16 : ಸಚಿವ ಜಮೀರ್ ಅಹ್ಮದ್ ಖಾನ್ ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ಗೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಲೋಕಾಯುಕ್ತ ಪೊಲೀಸರು, ಸಚಿವ ಜಮೀರ್ ಜೊತೆಗೆ ಕಳೆದ 3-4 ವರ್ಷಗಳಿಂದ ಆರ್ಥಿಕ ವ್ಯವಹಾರ ಹೊಂದಿರುವ ದಿನೇಶ್ ಗುಂಡೂರಾವ್ಗೆ ನೋಟಿಸ್ ನೀಡಿದ್ದು, ದಾಖಲೆ ಸಮೇತ ವಿಚಾರಣೆಗೆ ಹಾಜರಾಗಲು ತಿಳಿಸಿದ್ದಾರೆ. ನೋಟಿಸ್ ಬೆನ್ನಲ್ಲೇ ದಿನೇಶ್ ಗುಂಡೂರಾವ್ ದಾಖಲೆ ಕ್ರೋಢೀಕರಿಸಲು ಕಾಲಾವಕಾಶ ಕೋರಿದ್ದಾರೆ.
ಇದಕ್ಕೂ ಮುನ್ನ ಸಚಿವ ಜಮೀರ್ ಅಹ್ಮದ್ಗೆ 2.5 ಕೋಟಿ ರೂ. ನೀಡಿದ್ದ ವಿಚಾರವಾಗಿ ರಾಧಿಕಾ ಕುಮಾರಸ್ವಾಮಿ ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದರು. ಪ್ರಕರಣದಲ್ಲಿ ಈಗಾಗಲೇ ರಾಧಿಕಾ ಕುಮಾರಸ್ವಾಮಿ ಹಾಗೂ ಗುಜರಿ ಬಾಬು ವಿಚಾರಣೆ ನಡೆಸಲಾಗಿದೆ.
2019ರಲ್ಲಿ ಐ ಮಾನಿಟರಿ ಅಡ್ವೈಸರಿ ಕಂಪನಿಯ ಬಹುಕೋಟಿ ವಂಚನೆ ಹಗರಣ ಬೆಳಕಿಗೆ ಬಂದಿತ್ತು. ಈ ವಂಚಕ ಕಂಪನಿ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಜಮೀರ್ ಅಹ್ಮದ್ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು.
ಇಡಿ ವರದಿ ಅನ್ವಯ ಆಗ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದ ಜಮೀರ್ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಭ್ರಷ್ಟಾಚಾರ ನಿಗ್ರಹ ದಳವು (ಎಸಿಬಿ) ಪ್ರಕರಣ ದಾಖಲಿಸಿತ್ತು. ಎಸಿಬಿ ರದ್ದಾದ ಬಳಿಕ ಈ ಪ್ರಕರಣ ಲೋಕಾಯುಕ್ತ ಪೊಲೀಸರಿಗೆ ವರ್ಗವಾಗಿತ್ತು. ಈಗ ಸಚಿವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದು, ಹಲವರ ವಿಚಾರಣೆ ನಡೆಸುತ್ತಿದ್ದಾರೆ.
ನಾನು ಯಾರ ಬಳಿ ಸಾಲ ಪಡೆದಿದ್ದೇನೆ ಎನ್ನುವುದರ ಬಗ್ಗೆ ಜಮೀರ್ ಲೋಕಾಯುಕ್ತ ಪೊಲೀಸರಿಗೆ ಲಿಖಿತವಾಗಿ ಪಟ್ಟಿ ನೀಡಿದ್ದರು. ಈ ಪಟ್ಟಿಯಲ್ಲಿ ರಾಧಿಕಾ ಕುಮಾರಸ್ವಾಮಿ ಬಳಿಯಿಂದ 2.5 ಕೋಟಿ ರೂ. ಸಾಲ ಪಡೆದಿರುವ ವಿಚಾರವನ್ನು ಹಂಚಿಕೊಂಡಿದ್ದರು. ವಿಚಾರಣೆ ಸಂದರ್ಭದಲ್ಲಿ, ನಾನು 2012ರಲ್ಲಿ ಶಮಿಕಾ ಎಂಟರ್ಪ್ರೈಸಸ್ ಹೆಸರಿನಲ್ಲಿ ಯಶ್ ಹಾಗೂ ರಮ್ಯಾ ಅಭಿನಯದ ಲಕ್ಕಿ ಸಿನಿಮಾ ನಿರ್ಮಾಣ ಮಾಡಿದ್ದೆ. ಮನರಂಜನಾ ಚಾನೆಲ್ಗಳಿಗೆ ಈ ಸಿನಿಮಾದ ಸ್ಯಾಟಲೈಟ್ ಹಕ್ಕು ಹಾಗೂ ಚಲನಚಿತ್ರದ ಯಶಸ್ವಿನಿಂದ ಸಂಪಾದಿಸಿದ ಹಣದಲ್ಲಿ ಆರ್ಥಿಕ ಸಂಕಷ್ಟದಲ್ಲಿದ್ದ ಜಮೀರ್ ಅಹ್ಮದ್ ಅವರಿಗೆ 2.5 ಕೋಟಿ ರೂ.ಗಳನ್ನು ಸಾಲವಾಗಿ ನೀಡಿದ್ದೆ ಎಂದು ರಾಧಿಕಾ ತಿಳಿಸಿದ್ದಾಗಿ ಮೂಲಗಳಿಂದ ತಿಳಿದುಬಂದಿದೆ.
In connection with the ongoing investigation into alleged illegal assets of Minister B.Z. Jamir Ahmed Khan, the Lokayukta police have issued a notice to Health Minister Dinesh Gundu Rao.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm