ಬ್ರೇಕಿಂಗ್ ನ್ಯೂಸ್
26-12-20 04:47 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.26: ಒಂದೆಡೆ ರಾಜ್ಯ ಸರಕಾರ ನೈಟ್ ಕರ್ಫ್ಯೂ ವಿಚಾರದಲ್ಲಿ ಎಡವಟ್ಟು ಮಾಡಿಕೊಂಡಿದ್ದರೆ, ಇತ್ತ ಬ್ರಿಟನ್ ವೈರಸ್ ಈಗ ರಾಜ್ಯ ಸರಕಾರದ ಅಧಿಕಾರಿಗಳ ನಿದ್ದೆಗೆಡಿಸಿದೆ.
ಬ್ರಿಟನ್ ನಿಂದ ಕಳೆದ 15 ದಿನಗಳಲ್ಲಿ 1582 ಮಂದಿ ಬೆಂಗಳೂರಿಗೆ ಬಂದಿದ್ದಾರೆಂಬ ಅಂಕಿ ಅಂಶ ಇದೆ. ಆದರೆ, ಹೀಗೆ ಬಂದಿರುವ ಎಲ್ಲರನ್ನೂ ಪತ್ತೆ ಮಾಡಲು ಇನ್ನೂ ಅಧಿಕಾರಿಗಳಿಗೆ ಸಾಧ್ಯವಾಗಿಲ್ಲ. ಆ ಪೈಕಿ 151 ಮಂದಿ ಪತ್ತೆಯಾಗದೆ ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಕೇಳಿಬರುತ್ತಿದೆ.

ಬೆಂಗಳೂರಿನಲ್ಲಿ ಬ್ರಿಟನ್ ನಿಂದ ಆಗಮಿಸಿದ 11 ಮಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಆದರೆ, ಅವರಲ್ಲಿ ರೂಪಾಂತರಿತ ವೈರಸ್ ಇದೆಯೇ ಎನ್ನೋದು ದೃಢಪಟ್ಟಿಲ್ಲ. ಅದರ ಕುರಿತು ನಿಮ್ಹಾನ್ಸ್ ಸೆಂಟರಿನ ಮೈಕ್ರೋ ಲ್ಯಾಬ್ ನಲ್ಲಿ ಪರೀಕ್ಷೆ ಕೈಗೊಳ್ಳಲಾಗಿದೆ. ಇನ್ನು ಈ 11 ಮಂದಿಯಿಂದ ಇತರೇ 28 ಮಂದಿ ಪ್ರಾಥಮಿಕ ಸಂಪರ್ಕ ಹೊಂದಿದ್ದಾರೆ ಎಂಬ ನೆಲೆಯಲ್ಲಿ ಅವರನ್ನು ಕ್ವಾರಂಟೈನ್ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ನಾಪತ್ತೆಯಾಗಿರುವ 151 ಮಂದಿಯಲ್ಲಿ ಬ್ರಿಟನ್ ವೈರಸ್ ಕಂಡುಬಂದಿದ್ದರೆ, ಅದು ಇಡೀ ರಾಜ್ಯಕ್ಕೆ ಮಾರಕವಾಗುವ ಸಾಧ್ಯತೆಯಿದೆ. ಅವರು ಬೆಂಗಳೂರಿನಲ್ಲೇ ಇದ್ದಾರೆಯೇ ಬೇರೆ ಕಡೆಗೆ ತೆರಳಿದ್ದಾರೆಯೇ ಎನ್ನುವುದು ದೃಢಪಟ್ಟಿಲ್ಲ. ಈ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಕಾಲ್ ಡಿಟೈಲ್ಸ್, ಮೊಬೈಲ್ ನಂಬರ್ ಆಧರಿಸಿ, ತನಿಖೆ ನಡೆಸಲಾಗುವುದು ಎಂದು ಬೆಂಗಳೂರು ಬಿಬಿಎಂಪಿ ಆರೋಗ್ಯಾಧಿಕಾರಿ ವಿಜಯೇಂದ್ರ ತಿಳಿಸಿದ್ದಾರೆ.

ಈ ಪೈಕಿ ಯಾರೇ ಆದ್ರೂ ಉದ್ದೇಶಪೂರ್ವಕ ನಾಪತ್ತೆಯಾಗಿದ್ದರೆ ಅಂಥವರ ಮೇಲೆ ನ್ಯಾಯಾಲಯದಲ್ಲಿ ಮೊಕದ್ದೆ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
151 passengers who arrived from Britan to Bengaluru are said to be untraceable by the health department officials.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm