ಬ್ರೇಕಿಂಗ್ ನ್ಯೂಸ್
26-12-20 04:47 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.26: ಒಂದೆಡೆ ರಾಜ್ಯ ಸರಕಾರ ನೈಟ್ ಕರ್ಫ್ಯೂ ವಿಚಾರದಲ್ಲಿ ಎಡವಟ್ಟು ಮಾಡಿಕೊಂಡಿದ್ದರೆ, ಇತ್ತ ಬ್ರಿಟನ್ ವೈರಸ್ ಈಗ ರಾಜ್ಯ ಸರಕಾರದ ಅಧಿಕಾರಿಗಳ ನಿದ್ದೆಗೆಡಿಸಿದೆ.
ಬ್ರಿಟನ್ ನಿಂದ ಕಳೆದ 15 ದಿನಗಳಲ್ಲಿ 1582 ಮಂದಿ ಬೆಂಗಳೂರಿಗೆ ಬಂದಿದ್ದಾರೆಂಬ ಅಂಕಿ ಅಂಶ ಇದೆ. ಆದರೆ, ಹೀಗೆ ಬಂದಿರುವ ಎಲ್ಲರನ್ನೂ ಪತ್ತೆ ಮಾಡಲು ಇನ್ನೂ ಅಧಿಕಾರಿಗಳಿಗೆ ಸಾಧ್ಯವಾಗಿಲ್ಲ. ಆ ಪೈಕಿ 151 ಮಂದಿ ಪತ್ತೆಯಾಗದೆ ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಕೇಳಿಬರುತ್ತಿದೆ.

ಬೆಂಗಳೂರಿನಲ್ಲಿ ಬ್ರಿಟನ್ ನಿಂದ ಆಗಮಿಸಿದ 11 ಮಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಆದರೆ, ಅವರಲ್ಲಿ ರೂಪಾಂತರಿತ ವೈರಸ್ ಇದೆಯೇ ಎನ್ನೋದು ದೃಢಪಟ್ಟಿಲ್ಲ. ಅದರ ಕುರಿತು ನಿಮ್ಹಾನ್ಸ್ ಸೆಂಟರಿನ ಮೈಕ್ರೋ ಲ್ಯಾಬ್ ನಲ್ಲಿ ಪರೀಕ್ಷೆ ಕೈಗೊಳ್ಳಲಾಗಿದೆ. ಇನ್ನು ಈ 11 ಮಂದಿಯಿಂದ ಇತರೇ 28 ಮಂದಿ ಪ್ರಾಥಮಿಕ ಸಂಪರ್ಕ ಹೊಂದಿದ್ದಾರೆ ಎಂಬ ನೆಲೆಯಲ್ಲಿ ಅವರನ್ನು ಕ್ವಾರಂಟೈನ್ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ನಾಪತ್ತೆಯಾಗಿರುವ 151 ಮಂದಿಯಲ್ಲಿ ಬ್ರಿಟನ್ ವೈರಸ್ ಕಂಡುಬಂದಿದ್ದರೆ, ಅದು ಇಡೀ ರಾಜ್ಯಕ್ಕೆ ಮಾರಕವಾಗುವ ಸಾಧ್ಯತೆಯಿದೆ. ಅವರು ಬೆಂಗಳೂರಿನಲ್ಲೇ ಇದ್ದಾರೆಯೇ ಬೇರೆ ಕಡೆಗೆ ತೆರಳಿದ್ದಾರೆಯೇ ಎನ್ನುವುದು ದೃಢಪಟ್ಟಿಲ್ಲ. ಈ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಕಾಲ್ ಡಿಟೈಲ್ಸ್, ಮೊಬೈಲ್ ನಂಬರ್ ಆಧರಿಸಿ, ತನಿಖೆ ನಡೆಸಲಾಗುವುದು ಎಂದು ಬೆಂಗಳೂರು ಬಿಬಿಎಂಪಿ ಆರೋಗ್ಯಾಧಿಕಾರಿ ವಿಜಯೇಂದ್ರ ತಿಳಿಸಿದ್ದಾರೆ.

ಈ ಪೈಕಿ ಯಾರೇ ಆದ್ರೂ ಉದ್ದೇಶಪೂರ್ವಕ ನಾಪತ್ತೆಯಾಗಿದ್ದರೆ ಅಂಥವರ ಮೇಲೆ ನ್ಯಾಯಾಲಯದಲ್ಲಿ ಮೊಕದ್ದೆ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
151 passengers who arrived from Britan to Bengaluru are said to be untraceable by the health department officials.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm