ಬ್ರೇಕಿಂಗ್ ನ್ಯೂಸ್
17-09-25 06:02 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 17 : ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿbಚಲಿಸುತ್ತಿದ್ದ ರಾಜಹಂಸ ಕೆಎಸ್ಆರ್ಟಿಸಿ ಬಸ್ ಚಾಲಕನಿಗೆ ಹೃದಯಾಘಾತವಾಗಿದ್ದು ಆತನ ಸಮಯ ಪ್ರಜ್ಞೆ ಹಾಗೂ ಮಾನವೀಯ ತೆಯಿಂದ 45ಕ್ಕೂ ಹೆಚ್ಚು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ರಾಜೀವ್ ಬಿರಾದಾರ್ (50) ಹೃದಯಾಘಾತದಿಂದ ಮೃತಪಟ್ಟ ಚಾಲಕ. ಇವರು ಉತ್ತರ ಕರ್ನಾಟಕ ಮೂಲದವರಾಗಿದ್ದು, ಸುಮಾರು 20ವರ್ಷಗಳಿಂದ ಕೆಎಸ್ಆರ್ಟಿಸಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಮಂಗಳವಾರ ಬೆಂಗಳೂರು ಮೆಜೆಸ್ಟಿಕ್ನಿಂದ ದಾವಣಗೆರೆಯ ಹರಿಹರಕ್ಕೆ ನೆಲಮಂಗಲ ಮಾರ್ಗವಾಗಿ ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಹೋಗುವಾಗ ನೆಲಮಂಗಲ ಸಮೀಪದ ಜಾಸ್ ಟೋಲ್ ಬಳಿ ಚಾಲಕ ರಾಜೀವ್ ಬಿರಾದಾರ್ಗೆ ಹೃದಯಾಘಾತವಾಗಿದೆ, ತಕ್ಷಣ ಆತ ಬಸ್ ಅನ್ನು ಹೆದ್ದಾರಿಯಲ್ಲಿನ ಎಡಭಾಗಕ್ಕೆ ತೆಗೆದುಕೊಂಡು ನಿಲ್ಲಿಸಿದ್ದಾನೆ.
ತಕ್ಷಣ ಪ್ರಯಾಣಿಕರು 108ಕ್ಕೆ ಕರೆ ಮಾಡಿ ಆ್ಯಂಬುಲೆನ್ಸ್ನಲ್ಲಿ ಕರೆದುಕೊಂಡು ಹೋಗಿದ್ದು ಆ್ಯಂಬುಲೆನ್ಸ್ನಲ್ಲಿ ಪ್ರಥಮ ಚಿಕಿತ್ಸೆ ಸಿಗದೆ ಮಾರ್ಗ ಮಧ್ಯೆ ರಾಜೀವ್ ಮೃತಪಟ್ಟಿದ್ದಾರೆ. ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದು ಅವರ ಕುಟುಂಬಕ್ಕೆ ಮೃತ ದೇಹವನ್ನು ಹಸ್ತಾಂತರ ಮಾಡಿದ್ದಾರೆ.
ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಚಾಲಕನ ಸಮಯ ಪ್ರಜ್ಞೆ:
ಚಾಲಕ ರಾಜೀವ್ ಹೃದಯಾಘಾತ ವಾದ ತಕ್ಷಣ ಚಲಿಸುತ್ತಿದ್ದ ಬಸ್ ಅನ್ನು ನಿಯಂತ್ರಣಕ್ಕೆ ತೆಗೆದುಕೊಂಡು ರಸ್ತೆಯಲ್ಲಿ ನಿಲ್ಲಿಸಿದ ಪರಿಣಾಮ ಬಸ್ನಲ್ಲಿ ಪ್ರಯಾಣಿಸುತ್ತಿದ್ದ 45ಕ್ಕೂ ಹೆಚ್ಚು ಪ್ರಯಾಣಿಕರಿಗೆ ಯಾವುದೇ ಸಮಸ್ಯೆ ಆಗದಂತೆ ರಕ್ಷಣೆ ನೀಡುವ ಕೆಲಸವನ್ನು ಸಾಯುವ ಸಮಯದಲ್ಲಿ ತೋರಿದ್ದಾರೆ. ಈ ಕುರಿತು ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಅಲ್ಲದೇ, ಚಾಲಕನ ಸಾವಿಗೆ ಕಂಬನಿ ಮಿಡಿದಿದ್ದಾರೆ.
In a heartbreaking yet heroic incident, a KSRTC (Karnataka State Road Transport Corporation) driver died of a heart attack while driving a Rajahamsa bus, but not before saving the lives of over 45 passengers with his presence of mind and sense of duty.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm